ಬ್ರೇಕಿಂಗ್ ನ್ಯೂಸ್
16-05-24 12:37 pm Mangalore Correspondent ಕರಾವಳಿ
ಪುತ್ತೂರು, ಮೇ.16: ಜ್ವರ ಎಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ನಡುವೆ ಸಾವನಪ್ಪಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷದಿಂದಾಗಿ ಸಾವು ಸಂಭವಿಸಿದೆ ಎಂದು ಮೃತರ ಸಂಬಂಧಿಕರು ಆರೋಪಿಸಿ ವೈದ್ಯರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಬಂಟ್ವಾಳ ತಾಲೂಕಿನ ಕಕ್ಕೆಪದವಿನ ಪಿಲಿಬೈಲ್ ನಿವಾಸಿ ಕೃಷ್ಣಪ್ಪ ಗೌಡ(47) ಮೃತ ವ್ಯಕ್ತಿ. ಕೃಷ್ಣಪ್ಪ ಅವರು ವಿಪರೀತ ಜ್ವರವಿದ್ದ ಕಾರಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷಿಸಿದ ವೈದ್ಯರು ನಾಲಿಗೆಯ ಅಡಿ ಭಾಗದಲ್ಲಿ ಗಡ್ಡೆ ಇದ್ದು ಅದನ್ನು ತೆಗೆಯಬೇಕೆಂದು ಹೇಳಿದ್ದಾರೆ.
ಗಡ್ಡೆ ತೆಗೆಯಲು ಆಪರೇಷನ್ ಮಾಡಿಸಬೇಕು, ಅದಕ್ಕಾಗಿ ಕೃಷ್ಣಪ್ಪ ಗೌಡ ಅವರ ಪತ್ನಿ ಸರೋಜಿನಿ ಮತ್ತು ಅತ್ತಿಗೆಯ ಸಹಿ ಹಾಕಿಸಿಕೊಂಡ ವೈದ್ಯರು ಆಸ್ಪತ್ರೆಯಲ್ಲಿ ಆಪರೇಷನ್ ಮಾಡಿದ್ದಾರೆ. ಆಪರೇಷನ್ ವೇಳೆ ಅನಸ್ತೇಶಿಯಾ ಕೊಡಲಾಗಿತ್ತು. ಶಸ್ತ್ರಚಿಕಿತ್ಸೆ ಬಳಿಕ ಕೃಷ್ಣಪ್ಪ ಗೌಡ ಚೇತರಿಸಿಕೊಳ್ಳದೆ ಸಾವನ್ನಪ್ಪಿದ್ದರು. ವೈದ್ಯರ ನಿರ್ಲಕ್ಷ್ಯ ಮತ್ತು ಎಡವಟ್ಟಿನಿಂದಲೇ ಕೃಷ್ಣಪ್ಪ ಸಾವನಪ್ಪಿದ್ದಾರೆ ಎಂದು ರೊಚ್ಚಿಗೆದ್ದ ಸಂಬಂಧಿಕರು ರಾತ್ರೋರಾತ್ರಿ ಆಸ್ಪತ್ರೆ ಮುಂಭಾಗ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಂಬಂಧಿಕರು, ವೈದ್ಯರ ಎಡವಟ್ಟಿನಿಂದಲೇ ಸಾವು ಸಂಭವಿಸಿದೆ ಎಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಆಸ್ಪತ್ರೆಗೆ ರವಾನಿಸಲಾಗಿದೆ.
Puttur man dies after operation, doctors negligence, people protest. The deceased has been identified as Krishnappa Gowda. He was admitted over fever.
21-09-25 10:23 pm
HK News Desk
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm