ಬ್ರೇಕಿಂಗ್ ನ್ಯೂಸ್
16-05-24 12:37 pm Mangalore Correspondent ಕರಾವಳಿ
ಪುತ್ತೂರು, ಮೇ.16: ಜ್ವರ ಎಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ನಡುವೆ ಸಾವನಪ್ಪಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷದಿಂದಾಗಿ ಸಾವು ಸಂಭವಿಸಿದೆ ಎಂದು ಮೃತರ ಸಂಬಂಧಿಕರು ಆರೋಪಿಸಿ ವೈದ್ಯರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಬಂಟ್ವಾಳ ತಾಲೂಕಿನ ಕಕ್ಕೆಪದವಿನ ಪಿಲಿಬೈಲ್ ನಿವಾಸಿ ಕೃಷ್ಣಪ್ಪ ಗೌಡ(47) ಮೃತ ವ್ಯಕ್ತಿ. ಕೃಷ್ಣಪ್ಪ ಅವರು ವಿಪರೀತ ಜ್ವರವಿದ್ದ ಕಾರಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷಿಸಿದ ವೈದ್ಯರು ನಾಲಿಗೆಯ ಅಡಿ ಭಾಗದಲ್ಲಿ ಗಡ್ಡೆ ಇದ್ದು ಅದನ್ನು ತೆಗೆಯಬೇಕೆಂದು ಹೇಳಿದ್ದಾರೆ.
ಗಡ್ಡೆ ತೆಗೆಯಲು ಆಪರೇಷನ್ ಮಾಡಿಸಬೇಕು, ಅದಕ್ಕಾಗಿ ಕೃಷ್ಣಪ್ಪ ಗೌಡ ಅವರ ಪತ್ನಿ ಸರೋಜಿನಿ ಮತ್ತು ಅತ್ತಿಗೆಯ ಸಹಿ ಹಾಕಿಸಿಕೊಂಡ ವೈದ್ಯರು ಆಸ್ಪತ್ರೆಯಲ್ಲಿ ಆಪರೇಷನ್ ಮಾಡಿದ್ದಾರೆ. ಆಪರೇಷನ್ ವೇಳೆ ಅನಸ್ತೇಶಿಯಾ ಕೊಡಲಾಗಿತ್ತು. ಶಸ್ತ್ರಚಿಕಿತ್ಸೆ ಬಳಿಕ ಕೃಷ್ಣಪ್ಪ ಗೌಡ ಚೇತರಿಸಿಕೊಳ್ಳದೆ ಸಾವನ್ನಪ್ಪಿದ್ದರು. ವೈದ್ಯರ ನಿರ್ಲಕ್ಷ್ಯ ಮತ್ತು ಎಡವಟ್ಟಿನಿಂದಲೇ ಕೃಷ್ಣಪ್ಪ ಸಾವನಪ್ಪಿದ್ದಾರೆ ಎಂದು ರೊಚ್ಚಿಗೆದ್ದ ಸಂಬಂಧಿಕರು ರಾತ್ರೋರಾತ್ರಿ ಆಸ್ಪತ್ರೆ ಮುಂಭಾಗ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಂಬಂಧಿಕರು, ವೈದ್ಯರ ಎಡವಟ್ಟಿನಿಂದಲೇ ಸಾವು ಸಂಭವಿಸಿದೆ ಎಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಆಸ್ಪತ್ರೆಗೆ ರವಾನಿಸಲಾಗಿದೆ.
Puttur man dies after operation, doctors negligence, people protest. The deceased has been identified as Krishnappa Gowda. He was admitted over fever.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm