ಬ್ರೇಕಿಂಗ್ ನ್ಯೂಸ್
16-05-24 02:48 pm Mangalore Correspondent ಕರಾವಳಿ
ಉಳ್ಳಾಲ, ಮೇ.16: ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಧಾವಿಸುತ್ತಿದ್ದ ಸ್ಕೂಟರಿಗೆ ಕಲ್ಲಾಪು ಜಂಕ್ಷನ್ ನಲ್ಲಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಮತ್ತೊಂದು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಹ ಸವಾರ ಸಾವನ್ನಪ್ಪಿದ್ದ ಘಟನೆ ನಡೆದಿದೆ.
ಉಳ್ಳಾಲ ಕೋಟೆಪುರ, ಕೋಡಿ ನಿವಾಸಿ ಅಹಮ್ಮದ್ ನಿಷಾದ್ (22) ಮೃತ ಯುವಕ. ನಿಷಾದ್ ಇಂದು ಮುಂಜಾನೆ ನಾಲ್ಕು ಗಂಟೆಯ ವೇಳೆಗೆ ಸಯ್ಯದ್ ಹಫೀಝ್ ಎಂಬವರೊಂದಿಗೆ ಸ್ಕೂಟರಲ್ಲಿ ಸಹ ಸವಾರನಾಗಿ ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದ ವೇಳೆ ಕಲ್ಲಾಪು ಜಂಕ್ಷನ್ ನಲ್ಲಿ ತೊಕ್ಕೊಟ್ಟಿನಿಂದ ಬಂದು ಗ್ಲೋಬಲ್ ಮಾರ್ಕೆಟ್ ಗೆ ಕ್ರಾಸ್ ಆಗುತ್ತಿದ್ದ ಸ್ಕೂಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ಸ್ಕೂಟರ್ ಸವಾರರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಂಭೀರ ಗಾಯಗೊಂಡ ನಿಷಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಸ್ಕೂಟರ್ ಸವಾರ ಹಫೀಝ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮತ್ತೋರ್ವ ಸ್ಕೂಟರ್ ಸವಾರ ಕುತ್ತಾರು ಪದವು ನಿವಾಸಿ ಅಬ್ಬೂಬಕ್ಕರ್ ಸಿದ್ದೀಕ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಅವೈಜ್ಞಾನಿಕ ಹೆದ್ದಾರಿಗೆ ನರಬಲಿಗಳೆಷ್ಟು?
ರಾ.ಹೆ. 66 ರ ನಂತೂರಿನಿಂದ ತಲಪಾಡಿ ತನಕದ ಹೆದ್ದಾರಿ ಅಗಲೀಕರಣ ಕಾಮಗಾರಿಯು ಸಂಪೂರ್ಣ ಅವೈಜ್ಞಾನಿಕವಾಗಿದ್ದು ಸಮರ್ಪಕ ಸರ್ವಿಸ್ ರಸ್ತೆಗಳನ್ನೇ ನೀಡದ ನವಯುಗ ಕಂಪನಿಯು ವಾಹನ ಸವಾರರಲ್ಲಿ ಟೋಲ್ ಪೀಕಿಸಿ ಹಗಲು ದರೋಡೆ ನಡೆಸುತ್ತಿದೆ. ಸರ್ವಿಸ್ ರಸ್ತೆಗಳಿಲ್ಲದೆ ಹೆದ್ದಾರಿ ನಡುವಲ್ಲೇ ಅವೈಜ್ಞಾನಿಕ ಕ್ರಾಸಿಂಗ್ ನೀಡಿದ ಪರಿಣಾಮ ಈ ಹೆದ್ದಾರಿಯಲ್ಲಿ ನರಬಲಿಗಳು ನಿತ್ಯ ಎನ್ನುವಂತಾಗಿವೆ. ಕಲ್ಲಾಪು ಜಂಕ್ಷನ್ ನಲ್ಲಂತೂ ಹೆದ್ದಾರಿಯನ್ನು ದಾಟೋದೇ ದೊಡ್ಡ ಸಾಹಸವಾಗಿದ್ದು ಇಲ್ಲಿ ಅಂಡರ್ ಪಾಸ್ ನಿರ್ಮಿಸಬೇಕೆಂಬುವುದು ಸ್ಥಳೀಯರ ಅನೇಕ ವರ್ಷಗಳ ಬೇಡಿಕೆಯಾಗಿದೆ.
Pillon rider dies on spot after bike accident at Kallapu in Mangalore. The deceased has been identified as Hammad Nishad.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm