ಬ್ರೇಕಿಂಗ್ ನ್ಯೂಸ್
16-05-24 05:38 pm Mangalore Correspondent ಕರಾವಳಿ
ಮಂಗಳೂರು, ಮೇ.16: ಉಳ್ಳಾಲದ ಮಾಜಿ ಶಾಸಕ ದಿ.ಇದಿನಬ್ಬ ಅವರ ಮೊಮ್ಮಗ, ಐಸಿಸ್ ನಂಟು ಆರೋಪದಲ್ಲಿ ಬಂಧಿತನಾಗಿದ್ದ ಅಮ್ಮರ್ ಅಬ್ದುಲ್ ರೆಹಮಾನ್ಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ.
2021ರ ಆಗಸ್ಟ್ 21ರಂದು ಐಸಿಸ್ ನಂಟಿನ ಆರೋಪದಡಿ ರೆಹಮಾನ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಆದರೆ ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದ ಅಬ್ದುಲ್ ರೆಹಮಾನ್ ಗೆ ಸುದೀರ್ಘ ವಿಚಾರಣೆ ಬಳಿಕ ಜಾಮೀನು ಸಿಕ್ಕಿದೆ. ಜಾಮೀನು ಆದೇಶದಲ್ಲಿ ಆತನ ವಕೀಲರು ವಾದಿಸಿದ ಅಂಶಗಳನ್ನು ಕೋರ್ಟ್ ಉಲ್ಲೇಖಿಸಿದೆ.
'ಐಸಿಸ್ ಬಾವುಟ, ಕರಪತ್ರ ಮೊಬೈಲ್ ನಲ್ಲಿದೆ ಎಂದ ಮಾತ್ರಕ್ಕೆ ಉಗ್ರವಾದಿ ಸಂಘಟನೆಯ ಬೆಂಬಲಿಗ ಎನ್ನುವುದಕ್ಕೆ ಸಾಧ್ಯವಿಲ್ಲ. ಉಗ್ರ ಸಂಘಟನೆ ಜೊತೆಗಿನ ಆಕರ್ಷಣೆಯನ್ನೂ ಉಗ್ರರ ನಂಟು ಎನ್ನುವುದಕ್ಕೆ ಆಗಲ್ಲ. ಐಸಿಸ್ ಪರ ವಿಡಿಯೋ ಡೌನ್ ಲೋಡ್ ಮಾಡಿಕೊಂಡಿರುವುದು, ಮತೀಯ ಪ್ರಚಾರಕರ ಭಾಷಣ ಆಲಿಸೋದನ್ನು ಯುಎಪಿಎ ಕಾಯ್ದೆಯಡಿ ತರುವುದಕ್ಕೆ ಆಗಲ್ಲ. ಈ ಸಾಕ್ಷ್ಯ ಬಳಸಿ ಯುಎಪಿಎ ಸೆಕ್ಷನ್ 38 ಮತ್ತು 39 ರಡಿ ಆರೋಪ ಹೊರಿಸುವುದು ಸರಿಯಲ್ಲ.'
ಅಲ್ಲದೆ, ಆರೋಪಿ ಮೊಬೈಲ್ ನಲ್ಲಿ ಲಾಡೆನ್, ಐಸಿಸ್ ಬಾವುಟಗಳು, ಐಸಿಸ್ ಪರ ಭಾಷಣಗಳ ತುಣುಕು ಸಿಕ್ಕಿದೆ ಎಂದ ಮಾತ್ರಕ್ಕೆ ಆತನಿಗೆ ಐಸಿಸ್ ನಂಟಿದೆ ಎನ್ನಲಾಗಲ್ಲ. ಇವೆಲ್ಲ ಇಂದಿನ ಡಿಜಿಟಲ್ ಯುಗದಲ್ಲಿ ಇಂಟರ್ ನೆಟ್ ನಲ್ಲಿ ಸುಲಭದಲ್ಲಿ ಸಿಗುವಂಥದ್ದು. ಕುತೂಹಲ ಇರುವ ಯಾರು ಬೇಕಾದರೂ ಮೊಬೈಲ್, ಕಂಪ್ಯೂಟರ್ ನಲ್ಲಿ ಡೌನ್ ಲೋಡ್ ಮಾಡಬಹುದು. ಹಾಗಾಗಿ ಇದನ್ನು ಇಟ್ಟುಕೊಂಡು ಐಸಿಸ್ ನಂಟನ್ನು ಸಾಬೀತು ಪಡಿಸಲು ಆಗಲ್ಲ ಎಂಬ ಆತನ ಪರ ವಕೀಲ ನಿತ್ಯಾ ರಾಮಕೃಷ್ಣ ಮತ್ತು ತಂಡದ ವಾದವನ್ನು ಕೋರ್ಟ್ ಪುರಸ್ಕರಿಸಿದ್ದು ಷರತ್ತಿನ ಜಾಮೀನು ನೀಡಿ ಮಹತ್ವದ ತೀರ್ಪು ನೀಡಿದೆ.
ಪ್ರಕರಣ ಸಂಬಂಧಿಸಿ ಹತ್ತಕ್ಕೂ ಹೆಚ್ಚು ಮಂದಿ ವಿರುದ್ದ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿತ್ತು. ಅಮ್ಮರ್ ಅಬ್ದುಲ್ ರೆಹಮಾನ್ ಜೊತೆಗೆ ಆತನ ಪತ್ನಿ ದೀಪ್ತಿ ಮರಿಯಂಳನ್ನೂ ಎನ್ ಎಐ ಬಂಧಿಸಿತ್ತು. 2022ರ ಜನವರಿ 4 ರಂದು ಮಂಗಳೂರಿನ ಉಳ್ಳಾಲದಲ್ಲಿ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂಳನ್ನು ಬಂಧಿಸಲಾಗಿತ್ತು. ಇದಿನಬ್ಬ ಮೊಮ್ಮಗ ಅಬ್ದುಲ್ ರೆಹಮಾನ್ ಬಂಧನದ ಆರು ತಿಂಗಳ ಬಳಿಕ ದೀಪ್ತಿ ಮರಿಯಂ ಬಂಧಿಸಲಾಗಿತ್ತು. ಕೊಡಗು ಮೂಲದ ದೀಪ್ತಿ ಮಾರ್ಲ ಎಂಬ ಹಿಂದು ಯುವತಿ ಮಂಗಳೂರಿನಲ್ಲಿ ಮೆಡಿಕಲ್ ಕಲಿಯುತ್ತಿದ್ದಾಗ ರೆಹಮಾನ್ ಪರಿಚಯ ಪ್ರೇಮಕ್ಕೆ ತಿರುಗಿ ಮದುವೆಯಾಗಿ ಮತಾಂತರ ಆಗಿದ್ದಳು. ಬಳಿಕ ಐಸಿಸ್ ಪರವಾಗಿ ಚಟುವಟಿಕೆ ನಡೆಸುತ್ತಿದ್ದಳು ಎಂಬ ಆರೋಪ ಕೇಳಿಬಂದಿತ್ತು.
Delhi HC grants bail to grandson of late Mangalore Congress MLA Idinabba in UAPA case to ISIS supporter Ammar Abdul Rahiman in a case under the anti-terror law UAPA, saying his 'fascination' with the banned terrorist organisation cannot be dubbed as his association with it
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm