ಬ್ರೇಕಿಂಗ್ ನ್ಯೂಸ್
18-05-24 10:31 pm Mangalore Correspondent ಕರಾವಳಿ
ಮಂಗಳೂರು, ಮೇ 18: ರಾಜ್ಯದಲ್ಲಿ ಬೊಮ್ಮಾಯಿ ಸರಕಾರ ಇದ್ದಾಗ ಓಬಿಎಸ್ ಹೋರಾಟದಲ್ಲಿ ಐವರು ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಸಂದರ್ಭ ಕಾರ್ಮಿಕರ ನೋವು ಕೇಳದೇ ಇದ್ದ ಮುಖ್ಯಮಂತ್ರಿ ಬೊಮ್ಮಾಯಿ, ಅವರ ಮನೆಯ ನಾಯಿ ಸತ್ತಾಗ ಮುತ್ತಿಟ್ಟು ತಿಥಿ ಮಾಡಿದ್ದರು. ಆಮೂಲಕ ಕಾರ್ಮಿಕರ ಜೀವವನ್ನು ನಾಯಿಗಿಂತ ಕೀಳಾಗಿ ನೋಡಿದ್ದರು. ಅದೇ ಕಾರಣಕ್ಕಾಗಿ ನಾನು ಪಕ್ಷ ಬಿಟ್ಟು ಬರಬೇಕಾಯಿತು ಎಂದು ವಿಧಾನ ಪರಿಷತ್ ಚುನಾವಣೆಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಟೀಕಿಸಿದರು.
ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೊಮ್ಮಾಯಿ ಸರ್ಕಾರ ಇದ್ದಾಗ ಖಾಸಗಿ ಕಂಪೆನಿಯ ಒತ್ತಡಕ್ಕೆ ಮಣಿದು ಕಾರ್ಮಿಕರ ಕೆಲಸದ ಸಮಯ ತಿದ್ದುಪಡಿ ಮಾಡಿ ನಾಲ್ಕು ಗಂಟೆ ಹೆಚ್ಚಿಸಿದ್ದರು. ನಾವು ನಮ್ಮದೇ ಸರಕಾರವನ್ನು ವಿರೋಧಿಸಿ ಕಾರ್ಮಿಕರ ಪರ ನಿಂತಿದ್ದೆವು. ಜೀವನದ ಉದ್ದಕ್ಕೂ ಕಾರ್ಮಿಕರ ಪರವಾಗಿ, ಅತಿಥಿ ಉಪನ್ಯಾಸಕರ ಪರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇನೆ. ನನ್ನ ಕೆಲಸ ನೋಡಿ ಓಟು ಕೊಡುತ್ತಾರೆಂಬ ವಿಶ್ವಾಸ ಇದೆ ಎಂದು ಹೇಳಿದರು.



ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಮಾತನಾಡಿ, ಬಿಜೆಪಿ ಸರಕಾರದಲ್ಲಿ ಶಿಕ್ಷಕರ ವೇತನ ಹೆಚ್ಚಿಸಿಲ್ಲ. 2018ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಚ್ಚಿಸಿದ್ದರೆ, ಕುಮಾರಸ್ವಾಮಿ ಬಳಿಕ ಯಡಿಯೂರಪ್ಪ ಮುಖ್ಯಮಂತ್ರಿಯಾದ ನಂತರದ ತಿಂಗಳಲ್ಲೇ ಪಿಂಚಣಿಯನ್ನು ರದ್ದುಪಡಿಸಿದ್ದರು. ಶಿಕ್ಷಕರ ಬದುಕನ್ನು ಈ ಎರಡು ಪಕ್ಷಗಳು ಕಿತ್ತುಕೊಂಡಿದ್ದವು. ಇದಕ್ಕಾಗಿ ಸೇಡು ತೀರಿಸಲು ಕಾಯುತ್ತಿದ್ದಾರೆ. ನಮ್ಮ ನೌಕರರ ಹಣದಲ್ಲಿ ಜೂಜಾಡಿದ್ದಾರೆ, ಶೇರು ಹಾಕಿದ್ದಾರೆ ಎಂದು ಆರೋಪಿಸಿದರು. ಅನುದಾನಿತ ಶಾಲಾ ಶಿಕ್ಷಕರು ನಿವೃತ್ತರಾದ ಬಳಿಕ ನಯಾಪೈಸೆ ಸಿಗದಂತೆ ಮಾಡಿದ್ದರು. ಈ ಬಗ್ಗೆ ಧ್ವನಿ ಎತ್ತುವಲ್ಲಿ ಶಿಕ್ಷಕ ಪ್ರತಿನಿಧಿಗಳು ವಿಫಲರಾಗಿದ್ದಾರೆಂದು ಟೀಕಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಮಾತನಾಡಿ, ಆರು ಜಿಲ್ಲೆಗಳಲ್ಲಿ 30 ವಿಧಾನಸಭೆ ಕ್ಷೇತ್ರಗಳಿದ್ದು 15 ಬಿಜೆಪಿ, 14 ಕಾಂಗ್ರೆಸ್, ಓರ್ವ ಜೆಡಿಎಸ್ ಶಾಸಕ ಇದ್ದಾರೆ. ಮೇಲ್ಮನೆಯ ಎಲ್ಲ ಸ್ಥಾನಗಳನ್ನು ಗೆಲ್ಲಬೇಕೆಂದು ತಯಾರಿ ನಡೆಸಿದ್ದೇವೆ. ಗೆಲುವಿನ ವಿಶ್ವಾಸ ಇದೆ ಎಂದು ಹೇಳಿದರು. ಎಸ್.ಎಂ.ಕೃಷ್ಣ, ಡಿ.ಬಿ.ಚಂದ್ರೇಗೌಡ ಬಳಿಕ ಆಯನೂರು ಮಂಜುನಾಥ್ ಅವರು ರಾಜ್ಯಸಭೆ, ಲೋಕಸಭೆ, ವಿದಾನಸಭೆ, ವಿಧಾನ ಪರಿಷತ್ತಿನ ಸದಸ್ಯರಾದ ಅನುಭವ ಹೊಂದಿರುವ ಏಕೈಕ ರಾಜಕಾರಣಿ. ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಕಾಂಗ್ರೆಸ್ ಪಕ್ಷಕ್ಕಿದೆ ಎಂದರು.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಇದೆ. ಕರಾವಳಿ ಭಾಗದಲ್ಲೂ ಉತ್ತಮ ವಾತಾವರಣ ಸೃಷ್ಟಿಯಾಗಿದೆ. ಇದೇ ವಿಶ್ವಾಸದಲ್ಲಿ ಮೇಲ್ಮನೆ ಚುನಾವಣೆ ಎದುರಿಸುತ್ತಿದ್ದೇವೆ. ಆರು ಅಭ್ಯರ್ಥಿಗಳು ಗೆಲ್ಲಬೇಕೆನ್ನುವ ನಿಟ್ಟಿನಲ್ಲಿ ಕೆಲಸ ಆರಂಭಿಸಿದ್ದೇವೆ ಎಂದರು.
ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಅಭಯಚಂದ್ರ ಜೈನ್ ಇನ್ನಿತರರು ಉಪಸ್ಥಿತರಿದ್ದರು.
Former cm Bommai has seen labourers very cheaply says Ayanur Manjunath in Mangalore. Bommai had changed the timings of work due to work pressure of private organisations he added.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm