ಬ್ರೇಕಿಂಗ್ ನ್ಯೂಸ್
19-05-24 04:11 pm Mangalore Correspondent ಕರಾವಳಿ
ಮಂಗಳೂರು, ಮೇ 19: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ ನೈಜ ಫಲಿತಾಂಶ ಬಂದಿದ್ದು, ಮುಂದಿನ ಅಧಿವೇಶನದಲ್ಲಿ ಸಾಮೂಹಿಕ ನಕಲು ಬಗ್ಗೆ ಕ್ರಮ ಜರುಗಿಸಲು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.
ಮಂಗಳೂರಿನಲ್ಲಿ ವಿಧಾನ ಪರಿಷತ್ ಚುನಾವಣೆ ಸಲುವಾಗಿ ಸುದ್ದಿಗೋಷ್ಠಿ ನಡೆಸಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಕಲು ಆಗುತ್ತಿರುವ ಶಂಕೆಯಲ್ಲಿ ಪರೀಕ್ಷಾ ಕೊಠಡಿಗಳಿಗೆ ಸಿಸಿಕ್ಯಾಮೆರಾ ಅಳವಡಿಸಬೇಕೆಂದು ಪರಿಷತ್ತಿನಲ್ಲಿ ಆಗ್ರಹ ಮಾಡಿದ್ದೆವು. ಹಾಗಾಗಿ, ಈ ಬಾರಿ ಸರಕಾರ ಪರೀಕ್ಷಾ ಹಾಲ್ ಗಳಲ್ಲಿ ಸಿಸಿ ಕ್ಯಾಮೆರಾ ಇಟ್ಟು ನಿಗಾ ವಹಿಸಲಾಗಿತ್ತು. ಇದರಿಂದಾಗಿ ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಬಂದಿದೆ. ಇದು ಶಾಲಾ ಮಕ್ಕಳ ಕಲಿಕೆಯ ನೈಜ ಫಲಿತಾಂಶವನ್ನು ತೋರಿಸಿದೆ ಎಂದು ಹೇಳಿದರು.
ಸಾಮೂಹಿಕ ನಕಲು ಆಗುತ್ತಿರುವ ಬಗ್ಗೆ ಇತ್ತೀಚೆಗೆ ಶಾಸಕ ಪ್ರದೀಪ್ ಈಶ್ವರ್ ಕೂಡ ಹೇಳಿದ್ದರು. ನೀವು ಯಾಕೆ ಇದರ ಬಗ್ಗೆ ಸರಕಾರದಿಂದ ತನಿಖೆ ಮಾಡಿಸಿಲ್ಲ ಎಂದು ಕೇಳಿದ ಪ್ರಶ್ನೆಗೆ, ನಾವು ವಿಧಾನ ಪರಿಷತ್ತಿನಲ್ಲಿ ಈ ಬಗ್ಗೆ ಪ್ರಶ್ನೆ ಮಾಡಿದ್ದರಿಂದ ಈ ಸಲ ಕಟ್ಟುನಿಟ್ಟು ಆಗಿದೆ. ನೈಜ ಫಲಿತಾಂಶ ಬಂದಿದೆ ಎಂದರು.
ನೀವು ಆರು ವರ್ಷಗಳಿಂದ ಶಾಸಕರಾಗಿದ್ದೀರಿ, ಈಗ ಕಾಂಗ್ರೆಸ್ ಸರಕಾರ ಬಂದ ಬಳಿಕ ನೀವು ಈ ಒತ್ತಾಯ ಮಾಡಿದ್ದೇ ಎಂದು ಪ್ರಶ್ನೆ ಹಾಕಿದ್ದಕ್ಕೆ, ಅವರಲ್ಲಿ ಉತ್ತರ ಇರಲಿಲ್ಲ. ಏಳೆಂಟು ವರ್ಷಗಳಿಂದ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಏರಿಳಿತ ಆಗಿದೆ, ಚಿಕ್ಕೋಡಿ, ಚಿತ್ರದುರ್ಗ ಪ್ರಥಮ ಸ್ಥಾನಿಯಾದ ಉದಾಹರಣೆ ಇದೆ, ಅಲ್ಲಿ ಸಾಮೂಹಿಕ ನಕಲು ಮಾಡಿದ್ದರ ಬಗ್ಗೆ ಕ್ರಮ ಆಗಬೇಕಲ್ವಾ ಎಂದು ಪ್ರಶ್ನೆ ಮಾಡಿದಾಗ, ನಾವು ಅದರ ಬಗ್ಗೆ ಸದನದಲ್ಲಿ ಧ್ವನಿ ಎತ್ತುತ್ತೇವೆ. ಯಾರು ತಪ್ಪಿತಸ್ಥರಿದ್ದಾರೋ, ಅವರಿಗೆ ಶಿಕ್ಷೆಯಾಗಬೇಕು ಎಂದು ಹೇಳಿದರು.
ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರಿನಲ್ಲಿ ನೀವು ಬಿಜೆಪಿ ವಿರುದ್ಧ ಕಾಂಗ್ರೆಸಿಗೆ ಓಟ್ ಹಾಕುವಂತೆ ಬಹಿರಂಗ ಹೇಳಿಕೆ ಕೊಟ್ಟಿದ್ದೀರಲ್ಲಾ, ಈ ಬಾರಿ ಅದು ತೊಂದರೆ ಆಗಲ್ಲವೇ. ಬಿಜೆಪಿ ಕಾರ್ಯಕರ್ತರು ವಿರೋಧಿಸುತ್ತಿದ್ದಾರಲ್ಲವೇ ಎಂದು ಕೇಳಿದ ಪ್ರಶ್ನೆಗೆ, ಈ ಪ್ರಶ್ನೆಗೆ ಈಗಾಗಲೇ ಉತ್ತರ ಕೊಟ್ಟಿದ್ದೇನೆ. ಆ ಬಗ್ಗೆ ಬಿಜೆಪಿ ನಾಯಕರ ಜೊತೆ ಕ್ಲಾರಿಫೈ ಮಾಡಿಕೊಂಡಿದ್ದೇನೆ. ಈಗ ಹಳೆಯದನ್ನು ಕೆದಕುವುದಕ್ಕೆ ಹೋಗಲ್ಲ. ಈ ಹೊತ್ತಿನಲ್ಲಿ ಅದೆಲ್ಲ ಅನಗತ್ಯ ಎಂದರು.
Mass Copying in North Karnataka in SSSC Exam, MLC Bhoje Gowda in Mangalore
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm