ಬ್ರೇಕಿಂಗ್ ನ್ಯೂಸ್
19-05-24 10:11 pm Mangalore Correspondent ಕರಾವಳಿ
ಮಂಗಳೂರು, ಮೇ 19: ಶಿವಮೊಗ್ಗದಲ್ಲಿ ಹರ್ಷ ಕೊಲೆಯಾದ ಸಂದರ್ಭದಲ್ಲಿ ಧನಂಜಯ ಸರ್ಜಿ, ಕಾಂಗ್ರೆಸ್, ಕಮ್ಯುನಿಸ್ಟರ ಜೊತೆಗೂಡಿ ಶಾಂತಿಗಾಗಿ ನಡಿಗೆ ಮಾಡಿದ್ದರು ಎಂಬ ಮಾಜಿ ಶಾಸಕ ರಘುಪತಿ ಭಟ್ ಆರೋಪಕ್ಕೆ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ಪ್ರತಿಕ್ರಿಯೆ ನೀಡಿದ್ದಾರೆ.
ಹತ್ತನೇ ವಯಸ್ಸಿನಲ್ಲೇ ಆರೆಸ್ಸೆಸ್ ಕಾರ್ಯಕರ್ತನಾಗಿ ತೊಡಗಿಕೊಂಡಿದ್ದೆ. ಐಟಿಸಿ, ಓಟಿಸಿ ಮಾಡಿದ್ದೇನೆ. ಪುತ್ತೂರಿನಲ್ಲಿ ಸಂಘದ ಮುಖ್ಯ ಶಿಕ್ಷಕನಾಗಿ ಕೆಲಸ ಮಾಡಿದ್ದೇನೆ. ಎಂಬಿಬಿಎಸ್ ಮುಗಿಸಿದ ಬಳಿಕ ಸಾರ್ವಜನಿಕ ಜೀವನದಲ್ಲಿ ತೊಡಗಿದ್ದೇನೆ. ಸಂಘದಲ್ಲಿ 36 ವರ್ಷಗಳಿಂದ ಕಾರ್ಯಕರ್ತನಾಗಿದ್ದೇನೆ. ಪಕ್ಷದಲ್ಲಿ ಎರಡು ವರ್ಷದಲ್ಲಿ ಅನುಭವ ಅಷ್ಟೇ. ಹರ್ಷ ಕುಟುಂಬಸ್ಥರು ನನಗೆ ಮೊದಲಿನಿಂದಲೂ ಪೇಶಂಟ್. ಕೊಲೆ ಘಟನೆಯ ಸಂದರ್ಭದಲ್ಲಿ ಸಮಾಜದಲ್ಲಿ ಶಾಂತಿ ಸ್ಥಾಪನೆಗಾಗಿ ನಡಿಗೆಯನ್ನು ಹಮ್ಮಿಕೊಂಡಿದ್ದೆವು. ಅದರಲ್ಲಿ ಬೇರಾವುದೇ ದುರುದ್ದೇಶ ಇರಲಿಲ್ಲ ಎಂದರು.
ನಿಮ್ಮನ್ನು ಸಂಘ ಆಯ್ಕೆ ಮಾಡಿದ್ದೋ, ನಾಯಕರು ಆಯ್ಕೆ ಮಾಡಿದ್ದೋ ಎಂಬ ಪ್ರಶ್ನೆಗೆ, ಪಕ್ಷ ಆಯ್ಕೆ ಮಾಡಿರುವುದು, ಪಕ್ಷದ ಸೂಚನೆಗೆ ಬದ್ಧನಾಗಿದ್ದೇನೆ ಎಂದರು. ಶಂಕರಮೂರ್ತಿಯಂಥವರು ಸುದೀರ್ಘ ಕಾಲದಿಂದ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕ್ಷೇತ್ರದ ಘನತೆಯನ್ನು ಉಳಿಸಿಕೊಂಡು ಪದವೀಧರರ ಪರವಾಗಿ ಪರಿಷತ್ತಿನಲ್ಲಿ ಧ್ವನಿಯೆತ್ತುವ ಕೆಲಸ ಮಾಡುತ್ತೇನೆ. ಶಿವಮೊಗ್ಗದಲ್ಲಿ ಇಡೀ ಜಿಲ್ಲೆಯ ಜನರು ನನಗೆ ಬೆಂಬಲವಾಗಿ ನಿಂತಿದ್ದಾರೆ ಎಂದು ಧನಂಜಯ ಸರ್ಜಿ ಹೇಳಿದ್ದಾರೆ.
ಮಾಜಿ ಶಾಸಕ ರಘುಪತಿ ಭಟ್ ನಿಮ್ಮ ಆಯ್ಕೆ ವಿರುದ್ಧ ಬಂಡಾಯ ಸ್ಪರ್ಧೆ ಮಾಡಿದ್ದಾರಲ್ವಾ ಎಂಬ ಪ್ರಶ್ನೆಗೆ, ಬಂಡಾಯ ವಿಚಾರವನ್ನು ಪಕ್ಷದ ನಾಯಕರು ನೋಡಿಕೊಳ್ಳಲಿದ್ದಾರೆ. ನಾವು ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
Dr Dhananjay Sarji slams Raghupati Bhat in Mangalore. I am a active RSS member since class 10
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm