ಬ್ರೇಕಿಂಗ್ ನ್ಯೂಸ್
19-05-24 10:11 pm Mangalore Correspondent ಕರಾವಳಿ
ಮಂಗಳೂರು, ಮೇ 19: ಶಿವಮೊಗ್ಗದಲ್ಲಿ ಹರ್ಷ ಕೊಲೆಯಾದ ಸಂದರ್ಭದಲ್ಲಿ ಧನಂಜಯ ಸರ್ಜಿ, ಕಾಂಗ್ರೆಸ್, ಕಮ್ಯುನಿಸ್ಟರ ಜೊತೆಗೂಡಿ ಶಾಂತಿಗಾಗಿ ನಡಿಗೆ ಮಾಡಿದ್ದರು ಎಂಬ ಮಾಜಿ ಶಾಸಕ ರಘುಪತಿ ಭಟ್ ಆರೋಪಕ್ಕೆ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ಪ್ರತಿಕ್ರಿಯೆ ನೀಡಿದ್ದಾರೆ.
ಹತ್ತನೇ ವಯಸ್ಸಿನಲ್ಲೇ ಆರೆಸ್ಸೆಸ್ ಕಾರ್ಯಕರ್ತನಾಗಿ ತೊಡಗಿಕೊಂಡಿದ್ದೆ. ಐಟಿಸಿ, ಓಟಿಸಿ ಮಾಡಿದ್ದೇನೆ. ಪುತ್ತೂರಿನಲ್ಲಿ ಸಂಘದ ಮುಖ್ಯ ಶಿಕ್ಷಕನಾಗಿ ಕೆಲಸ ಮಾಡಿದ್ದೇನೆ. ಎಂಬಿಬಿಎಸ್ ಮುಗಿಸಿದ ಬಳಿಕ ಸಾರ್ವಜನಿಕ ಜೀವನದಲ್ಲಿ ತೊಡಗಿದ್ದೇನೆ. ಸಂಘದಲ್ಲಿ 36 ವರ್ಷಗಳಿಂದ ಕಾರ್ಯಕರ್ತನಾಗಿದ್ದೇನೆ. ಪಕ್ಷದಲ್ಲಿ ಎರಡು ವರ್ಷದಲ್ಲಿ ಅನುಭವ ಅಷ್ಟೇ. ಹರ್ಷ ಕುಟುಂಬಸ್ಥರು ನನಗೆ ಮೊದಲಿನಿಂದಲೂ ಪೇಶಂಟ್. ಕೊಲೆ ಘಟನೆಯ ಸಂದರ್ಭದಲ್ಲಿ ಸಮಾಜದಲ್ಲಿ ಶಾಂತಿ ಸ್ಥಾಪನೆಗಾಗಿ ನಡಿಗೆಯನ್ನು ಹಮ್ಮಿಕೊಂಡಿದ್ದೆವು. ಅದರಲ್ಲಿ ಬೇರಾವುದೇ ದುರುದ್ದೇಶ ಇರಲಿಲ್ಲ ಎಂದರು.
ನಿಮ್ಮನ್ನು ಸಂಘ ಆಯ್ಕೆ ಮಾಡಿದ್ದೋ, ನಾಯಕರು ಆಯ್ಕೆ ಮಾಡಿದ್ದೋ ಎಂಬ ಪ್ರಶ್ನೆಗೆ, ಪಕ್ಷ ಆಯ್ಕೆ ಮಾಡಿರುವುದು, ಪಕ್ಷದ ಸೂಚನೆಗೆ ಬದ್ಧನಾಗಿದ್ದೇನೆ ಎಂದರು. ಶಂಕರಮೂರ್ತಿಯಂಥವರು ಸುದೀರ್ಘ ಕಾಲದಿಂದ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕ್ಷೇತ್ರದ ಘನತೆಯನ್ನು ಉಳಿಸಿಕೊಂಡು ಪದವೀಧರರ ಪರವಾಗಿ ಪರಿಷತ್ತಿನಲ್ಲಿ ಧ್ವನಿಯೆತ್ತುವ ಕೆಲಸ ಮಾಡುತ್ತೇನೆ. ಶಿವಮೊಗ್ಗದಲ್ಲಿ ಇಡೀ ಜಿಲ್ಲೆಯ ಜನರು ನನಗೆ ಬೆಂಬಲವಾಗಿ ನಿಂತಿದ್ದಾರೆ ಎಂದು ಧನಂಜಯ ಸರ್ಜಿ ಹೇಳಿದ್ದಾರೆ.
ಮಾಜಿ ಶಾಸಕ ರಘುಪತಿ ಭಟ್ ನಿಮ್ಮ ಆಯ್ಕೆ ವಿರುದ್ಧ ಬಂಡಾಯ ಸ್ಪರ್ಧೆ ಮಾಡಿದ್ದಾರಲ್ವಾ ಎಂಬ ಪ್ರಶ್ನೆಗೆ, ಬಂಡಾಯ ವಿಚಾರವನ್ನು ಪಕ್ಷದ ನಾಯಕರು ನೋಡಿಕೊಳ್ಳಲಿದ್ದಾರೆ. ನಾವು ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
Dr Dhananjay Sarji slams Raghupati Bhat in Mangalore. I am a active RSS member since class 10
22-09-24 07:10 pm
Bangalore Correspondent
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
ಪ್ಯಾಲೆಸ್ತೀನ್ ಧ್ವಜದ ಬಗ್ಗೆ ಸಚಿವ ಜಮೀರ್ ಸಮರ್ಥನೆ ಬ...
21-09-24 11:17 pm
ಬಿಜೆಪಿ ಶಾಸಕ ಮುನಿರತ್ನ ಪ್ರಕರಣ ತನಿಖೆಗೆ ಎಸ್ಐಟಿ ರಚ...
21-09-24 10:42 pm
Nandini ghee; ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕ...
20-09-24 11:01 pm
21-09-24 08:05 pm
HK News Desk
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
22-09-24 04:55 pm
Mangalore Correspondent
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
22-09-24 10:48 pm
HK News Desk
ಪಾರ್ಟ್ ಟೈಮ್ ಉದ್ಯೋಗದ ಹೆಸರಲ್ಲಿ ಹೂಡಿಕೆ ; ಹಣ ಡಬಲ್...
22-09-24 10:40 pm
Mangalore cyber fraud, stock market: ಯೂಟ್ಯೂಬ್...
22-09-24 08:25 pm
Karwar Murder, Crime: ಕಾರವಾರದಲ್ಲಿ ಬೆಳ್ಳಂಬೆಳಗ್...
22-09-24 02:37 pm
Mangalore crime, Theft: ಮೂಡುಬಿದ್ರೆಯಲ್ಲಿ ವೃದ್ಧ...
21-09-24 10:56 pm