ಬ್ರೇಕಿಂಗ್ ನ್ಯೂಸ್
19-05-24 10:11 pm Mangalore Correspondent ಕರಾವಳಿ
ಮಂಗಳೂರು, ಮೇ 19: ಶಿವಮೊಗ್ಗದಲ್ಲಿ ಹರ್ಷ ಕೊಲೆಯಾದ ಸಂದರ್ಭದಲ್ಲಿ ಧನಂಜಯ ಸರ್ಜಿ, ಕಾಂಗ್ರೆಸ್, ಕಮ್ಯುನಿಸ್ಟರ ಜೊತೆಗೂಡಿ ಶಾಂತಿಗಾಗಿ ನಡಿಗೆ ಮಾಡಿದ್ದರು ಎಂಬ ಮಾಜಿ ಶಾಸಕ ರಘುಪತಿ ಭಟ್ ಆರೋಪಕ್ಕೆ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ಪ್ರತಿಕ್ರಿಯೆ ನೀಡಿದ್ದಾರೆ.
ಹತ್ತನೇ ವಯಸ್ಸಿನಲ್ಲೇ ಆರೆಸ್ಸೆಸ್ ಕಾರ್ಯಕರ್ತನಾಗಿ ತೊಡಗಿಕೊಂಡಿದ್ದೆ. ಐಟಿಸಿ, ಓಟಿಸಿ ಮಾಡಿದ್ದೇನೆ. ಪುತ್ತೂರಿನಲ್ಲಿ ಸಂಘದ ಮುಖ್ಯ ಶಿಕ್ಷಕನಾಗಿ ಕೆಲಸ ಮಾಡಿದ್ದೇನೆ. ಎಂಬಿಬಿಎಸ್ ಮುಗಿಸಿದ ಬಳಿಕ ಸಾರ್ವಜನಿಕ ಜೀವನದಲ್ಲಿ ತೊಡಗಿದ್ದೇನೆ. ಸಂಘದಲ್ಲಿ 36 ವರ್ಷಗಳಿಂದ ಕಾರ್ಯಕರ್ತನಾಗಿದ್ದೇನೆ. ಪಕ್ಷದಲ್ಲಿ ಎರಡು ವರ್ಷದಲ್ಲಿ ಅನುಭವ ಅಷ್ಟೇ. ಹರ್ಷ ಕುಟುಂಬಸ್ಥರು ನನಗೆ ಮೊದಲಿನಿಂದಲೂ ಪೇಶಂಟ್. ಕೊಲೆ ಘಟನೆಯ ಸಂದರ್ಭದಲ್ಲಿ ಸಮಾಜದಲ್ಲಿ ಶಾಂತಿ ಸ್ಥಾಪನೆಗಾಗಿ ನಡಿಗೆಯನ್ನು ಹಮ್ಮಿಕೊಂಡಿದ್ದೆವು. ಅದರಲ್ಲಿ ಬೇರಾವುದೇ ದುರುದ್ದೇಶ ಇರಲಿಲ್ಲ ಎಂದರು.
ನಿಮ್ಮನ್ನು ಸಂಘ ಆಯ್ಕೆ ಮಾಡಿದ್ದೋ, ನಾಯಕರು ಆಯ್ಕೆ ಮಾಡಿದ್ದೋ ಎಂಬ ಪ್ರಶ್ನೆಗೆ, ಪಕ್ಷ ಆಯ್ಕೆ ಮಾಡಿರುವುದು, ಪಕ್ಷದ ಸೂಚನೆಗೆ ಬದ್ಧನಾಗಿದ್ದೇನೆ ಎಂದರು. ಶಂಕರಮೂರ್ತಿಯಂಥವರು ಸುದೀರ್ಘ ಕಾಲದಿಂದ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕ್ಷೇತ್ರದ ಘನತೆಯನ್ನು ಉಳಿಸಿಕೊಂಡು ಪದವೀಧರರ ಪರವಾಗಿ ಪರಿಷತ್ತಿನಲ್ಲಿ ಧ್ವನಿಯೆತ್ತುವ ಕೆಲಸ ಮಾಡುತ್ತೇನೆ. ಶಿವಮೊಗ್ಗದಲ್ಲಿ ಇಡೀ ಜಿಲ್ಲೆಯ ಜನರು ನನಗೆ ಬೆಂಬಲವಾಗಿ ನಿಂತಿದ್ದಾರೆ ಎಂದು ಧನಂಜಯ ಸರ್ಜಿ ಹೇಳಿದ್ದಾರೆ.
ಮಾಜಿ ಶಾಸಕ ರಘುಪತಿ ಭಟ್ ನಿಮ್ಮ ಆಯ್ಕೆ ವಿರುದ್ಧ ಬಂಡಾಯ ಸ್ಪರ್ಧೆ ಮಾಡಿದ್ದಾರಲ್ವಾ ಎಂಬ ಪ್ರಶ್ನೆಗೆ, ಬಂಡಾಯ ವಿಚಾರವನ್ನು ಪಕ್ಷದ ನಾಯಕರು ನೋಡಿಕೊಳ್ಳಲಿದ್ದಾರೆ. ನಾವು ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
Dr Dhananjay Sarji slams Raghupati Bhat in Mangalore. I am a active RSS member since class 10
25-04-25 07:32 pm
Bangalore Correspondent
ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ, ಕಾಶ್...
25-04-25 07:30 pm
ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್ ಸ...
25-04-25 06:30 pm
Pahalgam Attack, Shivamogga, Manjunath: ಉಗ್ರರ...
24-04-25 10:13 pm
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
25-04-25 06:37 pm
HK News Desk
ಪಹಲ್ಗಾಮ್ ದುಷ್ಕೃತ್ಯ ; ಐದು ವರ್ಷ ಕಾಲ ಪಾಕಿನಲ್ಲಿದ್...
25-04-25 02:54 pm
BSF jawan, Pakistan: ಗಡಿಯಲ್ಲಿ ಬಿಕ್ಕಟ್ಟು ; ಪಾಕ...
25-04-25 01:16 pm
Melted plastic, Kollam, Hazard: ವಲಸೆ ಕಾರ್ಮಿಕರ...
24-04-25 09:00 pm
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
25-04-25 10:49 pm
Giridhar Shetty, Mangalore Correspondent
Bhatkal News, Pakistani Origin Mangalore: ಭಟ್...
25-04-25 07:43 pm
Mangalore News, Facebook post, Pahalgam Terro...
24-04-25 11:08 pm
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm