ಬ್ರೇಕಿಂಗ್ ನ್ಯೂಸ್
20-05-24 03:51 pm Mangalore Correspondent ಕರಾವಳಿ
ಮಂಗಳೂರು, ಮೇ 20: ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ ಕಳಕೊಂಡಿದ್ದಾರೆ.
ಪಡೀಲ್ ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗದ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು ತಲೆಯ ಭಾಗಕ್ಕೆ ತೀವ್ರ ಗಾಯಗೊಂಡ ಯುವಕ ಮೃತಪಟ್ಟಿದ್ದಾರೆ. ನಮ್ಮ ಕುಡ್ಲ - ವಿಜಾರ್ಡ್ ಕೇಬಲ್ ನೆಟ್ವರ್ಕ್ ನಲ್ಲಿ ಟೆಕ್ನೀಶಿಯನ್ ಆಗಿದ್ದ, ತೊಕ್ಕೊಟ್ಟು ಬಳಿಯ ಕಲ್ಲಾಪು ನಿವಾಸಿ ಹರೀಶ್ (43) ಸಾವನ್ನಪ್ಪಿದವರು. ಇವರು ತಮ್ಮ ಬೈಕನ್ನು ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗದ ಫುಟ್ ಪಾತಲ್ಲಿ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದರು. ಈ ವೇಳೆ, ಬಂಟ್ವಾಳ ಕಡೆಯಿಂದ ಹೆದ್ದಾರಿಯಲ್ಲಿ ಬಂದ ಡಸ್ಟರ್ ಕಾರು ನಿಯಂತ್ರಣ ತಪ್ಪಿ ಬಲಬದಿಯ ಡಿವೈಡರ್ ಗೆ ಡಿಕ್ಕಿಯಾಗಿದ್ದು, ಅಲ್ಲಿಂದ ಲೆಫ್ಟ್ ಬಂದು ನೇರವಾಗಿ ಹರೀಶ್ ನಿಂತಿದ್ದ ಬೈಕಿಗೆ ಡಿಕ್ಕಿ ಹೊಡೆದು ಫುಟ್ ಪಾತ್ ಹತ್ತಿದೆ. ಡಿವೈಡರ್ ಬಡಿದ ಜಾಗದಿಂದ 30 ಮೀಟರ್ ದೂರಕ್ಕೆ ಕಾರು ನುಗ್ಗಿ ಬಂದಿದ್ದು ಫಸ್ಟ್ ನ್ಯೂರೋ ಆಸ್ಪತ್ರೆ ಬಳಿ ಯುವಕನ ಪ್ರಾಣ ಕಸಿದಿದೆ.
ರಸ್ತೆಯಿಂದ ದೂರಕ್ಕೆ ಎಸೆಯಲ್ಪಟ್ಟು ತಲೆಯ ಭಾಗಕ್ಕೆ ತೀವ್ರ ಗಾಯಗೊಂಡಿದ್ದ ಹರೀಶ್ ಅವರನ್ನು ಕೂಡಲೇ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಬ್ರೇನ್ ಡೆಡ್ ಆಗಿದೆಯೆಂದು ವೈದ್ಯರು ತಿಳಿಸಿದ್ದಾರೆ. ಕಾರನ್ನು ಮಹಿಳೆಯೊಬ್ಬರು ಡ್ರೈವಿಂಗ್ ಮಾಡುತ್ತಿದ್ದು ನಿಯಂತ್ರಣ ತಪ್ಪುತ್ತಲೇ ಬ್ರೇಕ್ ಬದಲು ಎಕ್ಸ್ ಲೆಟರ್ ತುಳಿದಿದ್ದರಿಂದ ಅಮಾಯಕ ವ್ಯಕ್ತಿಯ ಪ್ರಾಣ ಹೋಗುವಂತಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಪುಡಿ ಪುಡಿಯಾಗಿದ್ದು ಚರಂಡಿಗೆ ಬಿದ್ದಿದೆ. ಹರೀಶ್ ಕೇಬಲ್ ಟೆಕ್ನೀಶಿಯನ್ ಮತ್ತು ಬಿಲ್ ಕಲೆಕ್ಷನ್ ಮಾಡುತ್ತಿದ್ದರು.
ಮೃತ ಹರೀಶ್ ಪತ್ನಿ , ಇಬ್ಬರು ಗಂಡು ಮಕ್ಕಳು, ತಾಯಿ, ಓರ್ವ ಸಹೋದರ, ಇಬ್ಬರು ಸಹೋದರಿಯರನ್ನ ಅಗಲಿದ್ದಾರೆ.
ಅಪಘಾತ ವಿಷಯ ತಿಳಿಯುತ್ತಲೇ ಹರೀಶ್ ಅವರ ಪತ್ನಿ ಸ್ಥಳಕ್ಕೆ ಬಂದಿದ್ದು ಗಂಡನ ಸಾವನ್ನು ನೋಡಲಾಗದೆ ರೋದಿಸಿದ್ದಾರೆ. ಕಾರು ಹೊಡೆದ ರಭಸಕ್ಕೆ ಇವರ ತಲೆಯ ಭಾಗವೇ ಒಡೆದು ಹೋಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಹರೀಶ್ ಅವರು ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಕೇಬಲ್ ಬಿಲ್ ಕಲೆಕ್ಟ್ ಮಾಡುವುದಕ್ಕಾಗಿಯೇ ಬಂದಿದ್ದರು. ರಸ್ತೆ ಬದಿ ಬೈಕ್ ನಿಲ್ಲಿಸಿ ಕುಳಿತುಕೊಂಡಿದ್ದಾಗಲೇ ಕಾರು ಜವರಾಯನಂತೆ ಬಂದೆರಗಿದೆ.
Mangalore Accident near first neuro hospital near padil 43 year old cable operator dies on spot. The deceased has been identified as Harish from Kallapu. He had pareked his bike on the footpath and was talking on the phone while a duster car women who lost control rammed on Harish who was on the footpath of neuro hospital.
21-09-25 10:23 pm
HK News Desk
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm