ಬ್ರೇಕಿಂಗ್ ನ್ಯೂಸ್
20-05-24 03:51 pm Mangalore Correspondent ಕರಾವಳಿ
ಮಂಗಳೂರು, ಮೇ 20: ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ ಕಳಕೊಂಡಿದ್ದಾರೆ.
ಪಡೀಲ್ ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗದ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು ತಲೆಯ ಭಾಗಕ್ಕೆ ತೀವ್ರ ಗಾಯಗೊಂಡ ಯುವಕ ಮೃತಪಟ್ಟಿದ್ದಾರೆ. ನಮ್ಮ ಕುಡ್ಲ - ವಿಜಾರ್ಡ್ ಕೇಬಲ್ ನೆಟ್ವರ್ಕ್ ನಲ್ಲಿ ಟೆಕ್ನೀಶಿಯನ್ ಆಗಿದ್ದ, ತೊಕ್ಕೊಟ್ಟು ಬಳಿಯ ಕಲ್ಲಾಪು ನಿವಾಸಿ ಹರೀಶ್ (43) ಸಾವನ್ನಪ್ಪಿದವರು. ಇವರು ತಮ್ಮ ಬೈಕನ್ನು ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗದ ಫುಟ್ ಪಾತಲ್ಲಿ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದರು. ಈ ವೇಳೆ, ಬಂಟ್ವಾಳ ಕಡೆಯಿಂದ ಹೆದ್ದಾರಿಯಲ್ಲಿ ಬಂದ ಡಸ್ಟರ್ ಕಾರು ನಿಯಂತ್ರಣ ತಪ್ಪಿ ಬಲಬದಿಯ ಡಿವೈಡರ್ ಗೆ ಡಿಕ್ಕಿಯಾಗಿದ್ದು, ಅಲ್ಲಿಂದ ಲೆಫ್ಟ್ ಬಂದು ನೇರವಾಗಿ ಹರೀಶ್ ನಿಂತಿದ್ದ ಬೈಕಿಗೆ ಡಿಕ್ಕಿ ಹೊಡೆದು ಫುಟ್ ಪಾತ್ ಹತ್ತಿದೆ. ಡಿವೈಡರ್ ಬಡಿದ ಜಾಗದಿಂದ 30 ಮೀಟರ್ ದೂರಕ್ಕೆ ಕಾರು ನುಗ್ಗಿ ಬಂದಿದ್ದು ಫಸ್ಟ್ ನ್ಯೂರೋ ಆಸ್ಪತ್ರೆ ಬಳಿ ಯುವಕನ ಪ್ರಾಣ ಕಸಿದಿದೆ.











ರಸ್ತೆಯಿಂದ ದೂರಕ್ಕೆ ಎಸೆಯಲ್ಪಟ್ಟು ತಲೆಯ ಭಾಗಕ್ಕೆ ತೀವ್ರ ಗಾಯಗೊಂಡಿದ್ದ ಹರೀಶ್ ಅವರನ್ನು ಕೂಡಲೇ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಬ್ರೇನ್ ಡೆಡ್ ಆಗಿದೆಯೆಂದು ವೈದ್ಯರು ತಿಳಿಸಿದ್ದಾರೆ. ಕಾರನ್ನು ಮಹಿಳೆಯೊಬ್ಬರು ಡ್ರೈವಿಂಗ್ ಮಾಡುತ್ತಿದ್ದು ನಿಯಂತ್ರಣ ತಪ್ಪುತ್ತಲೇ ಬ್ರೇಕ್ ಬದಲು ಎಕ್ಸ್ ಲೆಟರ್ ತುಳಿದಿದ್ದರಿಂದ ಅಮಾಯಕ ವ್ಯಕ್ತಿಯ ಪ್ರಾಣ ಹೋಗುವಂತಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಪುಡಿ ಪುಡಿಯಾಗಿದ್ದು ಚರಂಡಿಗೆ ಬಿದ್ದಿದೆ. ಹರೀಶ್ ಕೇಬಲ್ ಟೆಕ್ನೀಶಿಯನ್ ಮತ್ತು ಬಿಲ್ ಕಲೆಕ್ಷನ್ ಮಾಡುತ್ತಿದ್ದರು.
ಮೃತ ಹರೀಶ್ ಪತ್ನಿ , ಇಬ್ಬರು ಗಂಡು ಮಕ್ಕಳು, ತಾಯಿ, ಓರ್ವ ಸಹೋದರ, ಇಬ್ಬರು ಸಹೋದರಿಯರನ್ನ ಅಗಲಿದ್ದಾರೆ.
ಅಪಘಾತ ವಿಷಯ ತಿಳಿಯುತ್ತಲೇ ಹರೀಶ್ ಅವರ ಪತ್ನಿ ಸ್ಥಳಕ್ಕೆ ಬಂದಿದ್ದು ಗಂಡನ ಸಾವನ್ನು ನೋಡಲಾಗದೆ ರೋದಿಸಿದ್ದಾರೆ. ಕಾರು ಹೊಡೆದ ರಭಸಕ್ಕೆ ಇವರ ತಲೆಯ ಭಾಗವೇ ಒಡೆದು ಹೋಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಹರೀಶ್ ಅವರು ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಕೇಬಲ್ ಬಿಲ್ ಕಲೆಕ್ಟ್ ಮಾಡುವುದಕ್ಕಾಗಿಯೇ ಬಂದಿದ್ದರು. ರಸ್ತೆ ಬದಿ ಬೈಕ್ ನಿಲ್ಲಿಸಿ ಕುಳಿತುಕೊಂಡಿದ್ದಾಗಲೇ ಕಾರು ಜವರಾಯನಂತೆ ಬಂದೆರಗಿದೆ.
Mangalore Accident near first neuro hospital near padil 43 year old cable operator dies on spot. The deceased has been identified as Harish from Kallapu. He had pareked his bike on the footpath and was talking on the phone while a duster car women who lost control rammed on Harish who was on the footpath of neuro hospital.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm