ಬ್ರೇಕಿಂಗ್ ನ್ಯೂಸ್
20-05-24 10:17 pm Mangalore Correspondent ಕರಾವಳಿ
ಮಂಗಳೂರು, ಮೇ 20: ಅಕ್ರಮವಾಗಿ ಪಿಸ್ತೂಲ್ ವಶದಲ್ಲಿರಿಸಿಕೊಂಡು ಕಾರಿನಲ್ಲಿ ಕುಳಿತು ಯಾವುದೋ ದುಷ್ಕೃತ್ಯಕ್ಕೆ ಹೊಂಚು ಹಾಕುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಕಪ್ಪು ಬಣ್ಣದ ಕಾರಿನಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಪಿಸ್ತೂಲ್ ಅನ್ನು ವಶದಲ್ಲಿರಿಸಿ ಯಾವುದೋ ದುಷ್ಕೃತ್ಯಕ್ಕೆ ಸಂಚು ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.


ಕಾಸರಗೋಡು ಜಿಲ್ಲೆಯ ಮಂಜೇಶ್ವರ ಮೊರತ್ತಣೆ ನಿವಾಸಿ ಮೊಹಮ್ಮದ್ ಅಸ್ಕರ್(26) ಮತ್ತು ಮಂಜೇಶ್ವರ ಬೆಜ್ಹ ಮೂಡಂಬೈಲು ನಿವಾಸಿ ಅಬ್ದುಲ್ ನಿಸಾರ್ (29) ಬಂಧಿತ ಆರೋಪಿಗಳು. ಇವರನ್ನು ವಶಕ್ಕೆ ಪಡೆದು ಪಿಸ್ತೂಲ್-1, ಸಜೀವ ಮದ್ದುಗುಂಡು -2, ಮೊಬೈಲ್ ಫೋನು -2 ಹಾಗೂ ಕಪ್ಪು ಬಣ್ಣದ ಹುಂಡೈ ವೆರ್ನಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಸೊತ್ತಿನ ಒಟ್ಟು ಮೌಲ್ಯ ರೂ. 7,15,000/- ಆಗಬಹುದು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಯ ಪೈಕಿ ಮೊಹಮ್ಮದ್ ಅಸ್ಗರ್ ಎಂಬಾತನ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಅಪಹರಣ, ಹಲ್ಲೆ ಪ್ರಕರಣ ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ಹಾಗೂ ಬೆಂಗಳೂರು ನಗರದ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟದ ಪ್ರಕರಣ ಹೀಗೆ ಒಟ್ಟು 8 ಪ್ರಕರಣ ದಾಖಲಾಗಿರುತ್ತದೆ. ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್.ಎಂ, ಪಿಎಸ್ಐಗಳಾದ ಸುದೀಪ್ ಎಂ.ವಿ ಮತ್ತು ಸಿಸಿಬಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.
Mangalore CCB police arrest two plotting for crime, seize pistol and car near Talapady. The arrested have been identified as Abdul Nisar and Mohammed Asgar. They were plotting crime in Mangalore. Mobile phones, car and pistol has been seized.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am