ಬ್ರೇಕಿಂಗ್ ನ್ಯೂಸ್
20-05-24 10:43 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 20: ಬಿಜೆಪಿ ಕಾರ್ಯಕರ್ತರನ್ನು ವಿನಾಕಾರಣ ಬಂಧಿಸಿದರೆ, ಕಿರುಕುಳ ನೀಡಿದರೆ ಪೊಲೀಸರ ಕಾಲರ್ ಹಿಡಿಯಲು ಹೇಸುವುದಿಲ್ಲ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹರಿಹಾಯ್ದಿದ್ದಾರೆ.
ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿಯನ್ನು ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದನ್ನು ವಿರೋಧಿಸಿ ತಾಲೂಕು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಹರೀಶ್ ಪೂಂಜ ಮಾತಿನುದ್ದಕ್ಕೂ ಪೊಲೀಸರನ್ನು ಕಾಂಗ್ರೆಸ್ ಏಜೆಂಟ್ ಎನ್ನುತ್ತ ಕಿಚಾಯಿಸಿದರು.
ಎಸ್ಪಿ ತಲೆಯಲ್ಲಿ ಕೂದಲು ಇಲ್ಲ, ಕೂದಲು ಮಾತ್ರ ಇಲ್ಲ ಅಂದ್ಕೊಂಡಿದ್ದೆ. ಈಗ ತಲೆಯಲ್ಲಿ ಬೊಂಡೂ ಇಲ್ಲ ಎಂಬಂತೆ ಕಾಣುತ್ತಿದೆ. ಬೆಳ್ತಂಗಡಿ ಪೊಲೀಸರು ಮಾತ್ರ ಅಲ್ಲ, ಎಸ್ಪಿ ಅವರೂ ಕಾಂಗ್ರೆಸ್ ಏಜಂಟ್ ಆಗಿದ್ದಾರೆ. ಕಾಂಗ್ರೆಸ್ ಸರಕಾರ ಇದೆ, ಇವರೆಲ್ಲ ಏನು ಮಾಡಿದರೂ ನಡೆಯುತ್ತೆ ಅಂದ್ಕೊಂಡಿದ್ದಾರೆ. ಪೊಲೀಸರ ಮೂಲಕ ಬಿಜೆಪಿ ಕಾರ್ಯಕರ್ತರನ್ನು ಕಟ್ಟಿ ಹಾಕಿ, ನಮ್ಮನ್ನು ಬಗ್ಗಿಸಬಹುದು, ಹತೋಟಿಗೆ ತರಬಹುದು ಅಂತ ಕೆಲವರು ಅಂದ್ಕೊಂಡಿದ್ದಾರೆ. ನಾವು ಇದಕ್ಕೆಲ್ಲ ಬಗ್ಗಲ್ಲ. ನಮ್ಮ ಕಾರ್ಯಕರ್ತರನ್ನು ವಿನಾಕಾರಣ ಬಂಧಿಸಿದರೆ ಪೊಲೀಸರ ಕಾಲರನ್ನೇ ಹಿಡಿಯುತ್ತೇವೆ. ಅದಕ್ಕಾಗಿ ಜೈಲಿಗೆ ಹೋಗುವುದಕ್ಕೂ ಹಿಂಜರಿಯಲ್ಲ ಎಂದು ಹರೀಶ್ ಪೂಂಜ ಹೇಳಿದ್ದಾರೆ.
ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಶನಿವಾರ ರಾತ್ರೋರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನೇ ಅವಾಚ್ಯವಾಗಿ ನಿಂದಿಸಿದ್ದ ಹರೀಶ್ ಪೂಂಜ ವಿರುದ್ಧ ದುರ್ವರ್ತನೆ ತೋರಿದ್ದಕ್ಕಾಗಿ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪೊಲೀಸ್ ಠಾಣೆ ನಿಮ್ಮ ಅಪ್ಪನ ಮನೆ ಆಸ್ತಿಯಲ್ಲ ಎಂದು ಹೇಳಿ ಧಮಕಿ ಹಾಕುವ ರೀತಿ ಪೊಲೀಸರನ್ನು ಬೆದರಿಸುವ ಯತ್ನ ಮಾಡಿದ್ದರು. ಆದರೆ, ಸೋಮವಾರ ಮತ್ತೆ ಪ್ರತಿಭಟನಾ ಸಭೆಯಲ್ಲಿ ಪೊಲೀಸರ ವಿರುದ್ಧ ಬೆದರಿಕೆ ಹಾಕುವ ರೀತಿ ಮಾತನಾಡಿದ್ದಾರೆ.
Mangalore Harish poonja says will not even care to hold police collar if any BJP member is arrested, sparks controversy. The Belthangady police on Sunday, May 19, filed a case against Harish Poonja, BJP MLA, on charges of creating a ruckus in the Belthangady police station on Saturday night (May 18). The ruckus was over police arresting Belthangady Taluk president of BJP Yuva Morcha Shashiraj Shetty in connection with Shetty’s alleged involvement in illegal stone quarrying at Melantabettu village of Belthangady taluk in Dakshina Kannada.
11-06-25 09:35 pm
HK News Desk
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
12-06-25 06:48 pm
HK News Desk
Gujarat Plane Crash Tragedy, Update: ಗುಜರಾತ್...
12-06-25 05:13 pm
Air Crash Update, Live: ಏರ್ ಇಂಡಿಯಾ ಬೋಯಿಂಗ್ ಪತ...
12-06-25 04:26 pm
Air India flight Crash, London, Ahmedabad: ಗು...
12-06-25 02:52 pm
ಇನ್ಮುಂದೆ ಎಸಿ 20 ಡಿಗ್ರಿಗಿಂತ ಕಡಿಮೆ ಮಾಡಲು ಸಾಧ್ಯವ...
12-06-25 01:40 pm
12-06-25 05:46 pm
Mangalore Correspondent
U T khader, Mangalore Police: ಒಂದೇ ಕಡೆ ಐಪಿಎಸ್...
12-06-25 05:15 pm
Special Action Force, Mangalore, Sudheer Kuma...
12-06-25 02:23 pm
Mangalore MUDA, Noor Zahara, Mohammed Nazeer...
11-06-25 11:06 pm
Red Alert, Mangalore, Udupi, Rain: ದಕ್ಷಿಣ ಕನ್...
11-06-25 10:26 pm
12-06-25 12:31 pm
HK News Desk
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm