ಬ್ರೇಕಿಂಗ್ ನ್ಯೂಸ್
23-05-24 02:56 pm HK NEWS ಕರಾವಳಿ
ಮಂಗಳೂರು,ಶಾಸಕ ಹರೀಶ್ ಪೂಂಜ ಪೊಲೀಸರು, ತಹಸೀಲ್ದಾರನ್ನು ನಿಂದಿಸಿ ಬೆಳ್ತಂಗಡಿ ನಾಗರಿಕರಿಗೆ ಅವಮಾನ ಮಾಡಿದ್ದಾರೆ. ರೌಡಿಯಂತೆ ವರ್ತಿಸಿ ಇಡೀ ಜಿಲ್ಲೆಗೆ ಕಳಂಕ ತಂದಿದ್ದಾರೆ. ರೌಡಿ ರೀತಿ ವರ್ತಿಸುತ್ತಿರುವುದನ್ನು ನಾವು ಖಂಡಿಸುತ್ತೇವೆ. ತಾಕತ್ತಿದ್ದರೆ, ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಜನರಿಂದ ಚುನಾವಣೆ ಎದುರಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಹರೀಶ್ ಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳ್ತಂಗಡಿ ಕ್ಷೇತ್ರವನ್ನು ರತ್ನವರ್ಮ ಹೆಗ್ಗಡೆ, ವೈಕುಂಠ ಬಾಳಿಗಾ, ಸುಬ್ಬಯ್ಯ ಹೆಗಡೆ, ವಸಂತ ಬಂಗೇರರಂತವರು ಪ್ರತಿನಿಧಿಸಿದ್ದರು. ವಸಂತ ಬಂಗೇರ ಐದು ಬಾರಿ ಶಾಸಕರಾಗಿ ಗೌರವ ತಂದುಕೊಟ್ಟಿದ್ದಾರೆ. ಹರೀಶ್ ಪೂಂಜ ಈಗ ವಸಂತ ಬಂಗೇರ ಮಾಡಲು ಹೋಗಿ ಎಲ್ಲೆ ಮೀರಿ ವರ್ತಿಸಿದ್ದಾರೆ. ಬಂಗೇರ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿದವರು, ಅಧಿಕಾರಿಗಳನ್ನು ಹದ್ದುಬಸ್ತಿನಲ್ಲಿಟ್ಟು ಕೆಲಸ ಮಾಡುತ್ತಿದ್ದರು. ಯಾವತ್ತೂ ಭ್ರಷ್ಟಾಚಾರಿ, ರೌಡಿಗಳ ಪರ ಕೆಲಸ ಮಾಡಿದವರಲ್ಲ.
ಬಿಜೆಪಿ ಕಾರ್ಯಕರ್ತ, ರೌಡಿಶೀಟರ್ ಶಶಿರಾಜ್ ಶೆಟ್ಟಿ, ಬೆಳ್ತಂಗಡಿಯಲ್ಲಿ ಕಲ್ಲು ಗಣಿಗಾರಿಕೆ, ಸ್ಯಾಂಡ್ ಮಾಫಿಯಾ ಮಾಡುತ್ತಿರುವ ವ್ಯಕ್ತಿ. ಆತನ್ನು ಪೊಲೀಸರು ಬಂಧಿಸಿದ್ದಕ್ಕೆ ಠಾಣೆಗೆ ನುಗ್ಗಿದ ಶಾಸಕ ಪೂಂಜ, ಇದು ನಿಮ್ಮ ಅಪ್ಪನ ಠಾಣೆಯಾ, ತಲೆ ಕಡೀರಿ ಎಂದು ಕೇಳುತ್ತಾರೆ. ಶಾಸಕರ ಮಾತನ್ನು ಜಿಲ್ಲೆಯ ಜನತೆ ಒಪ್ಪುತ್ತಾರೆಯೇ ಅಂತ ಕೇಳಬೇಕಾಗುತ್ತದೆ ಎಂದರು, ಈ ಹಿಂದೆ ಅರಣ್ಯ ಅಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ಬೈದು ಎಫ್ಐಆರ್ ಹಾಕಿಸಿಕೊಂಡಿದ್ದ ಹರೀಶ್ ಪೂಂಜ ಈಗ ಡಿಜೆ ಹಳ್ಳಿ ರೀತಿ ಠಾಣೆಗೆ ಬೆಂಕಿ ಹಚ್ಚುತ್ತೇವೆಂದು ಹೇಳುತ್ತಾರೆ. ಅಂದರೆ, ಅಲ್ಲಿಯೂ ಇವರ ಕೈವಾಡ ಇರಬಹುದು ಶಂಕೆ ಮೂಡುತ್ತದೆ.
ಒಟ್ಟು ಪ್ರಚಾರದಲ್ಲಿ ಇರಬೇಕು, ಒಳ್ಳೆಯದಕ್ಕೋ, ಕೆಟ್ಟದಕ್ಕೋ ಹೇಗಾದ್ರೂ ಪ್ರಚಾರದ ಹುಚ್ಚು ಹರೀಶ್ ಪೂಂಜ ತಲೆಗೆ ಹತ್ತಿದೆ. ಪೊಲೀಸರು ಅರೆಸ್ಟ್ ಮಾಡಲು ಮನೆಗೆ ಹೋದರೆ ಅವಿತುಕೊಳ್ಳುವ ಇವರು ತಮ್ಮ ಪಕ್ಷದ ಕಾರ್ಯಕರ್ತರನ್ನು ಮುಂದಿಟ್ಟು ಪೊಲೀಸರು ಜನರನ್ನು ನೋಡಿ ಹೆದರಿ ಹೋದರು ಅಂತ ಹೇಳುತ್ತಾರೆ. ಇನ್ನು ಸಿದ್ದರಾಮಯ್ಯ ಬಗ್ಗೆ ಮಾತನಾಡಲು ಅಷ್ಟು ಪ್ರಾಯ ಇವರಿಗೆ ಆಗಿಲ್ಲ, ರಾಜಕೀಯದಲ್ಲಿ ಅಷ್ಟು ಪಳಗಿದ್ದೂ ಇಲ್ಲ. ಅವರನ್ನು ಪ್ರಶ್ನಿಸುವುದಕ್ಕೆ ಇವರು ರಾಜಕೀಯದಲ್ಲಿ ಬಚ್ಚಾ ಇದ್ದಾರೆ ಎಂದರು.
ಸಣ್ಣ ಪ್ರಾಯದಲ್ಲಿ ಇವರಿಗೆ ಅಧಿಕಾರದ ಅಮಲು ಏರಿದೆ. ಹಾಗಾಗಿ ರೌಡಿ ರೀತಿ ವರ್ತನೆ ಮಾಡ್ತಿದಾರೆ, ಇದನ್ನು ನಾವು ಖಂಡಿಸುತ್ತೇವೆ, ಇವರ ವರ್ತನೆಯಿಂದಾಗಿ ತಾಲೂಕಿನ ಜನತೆ ಬೇಸತ್ತಿದ್ದಾರೆ. ತಾಕತ್ತಿದ್ದರೆ ತಮ್ಮ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಮರು ಚುನಾವಣೆ ಎದುರಿಸಬೇಕು. ಬೆಳ್ತಂಗಡಿ ಜನ ಯಾವತ್ತೂ ಇಂತಹ ಶಾಸಕರನ್ನು ನೋಡಿಲ್ಲ. ಶಾಸಕ ಸ್ಥಾನಕ್ಕೆ, ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯಕ್ಕೆ ಕಪ್ಪು ಮಸಿ ಬಳಿಸಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ರಾಜಕಾರಣಿಗಳು, ಶಾಸಕರ ಬಗ್ಗೆ ವಿಶೇಷ ಗೌರವ ಇದೆ, ಅದನ್ನು ಮಣ್ಣುಪಾಲು ಮಾಡುವ ಯತ್ನ ಮಾಡಿದ್ದಾರೆ ಎಂದು ಹೇಳಿದರು.
Mangalore Mla Harish Poonja threats police inspector, shame to dakshina Kannada, congress Harish Kumar demands Resignation. Let him face the elections by resigning from BJP he added. Belthangady MLA Harish Poonja was under scrutiny as a case had been filed against him for allegedly making threats to the police. police team hd reached his esidence with intentions to make an arrest.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 03:26 pm
Mangalore Correspondent
Dharmasthala Temple, NIA, Bomb: ಕುಕ್ಕರ್ ಬಾಂಬ್...
07-08-25 11:19 am
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm