ಬ್ರೇಕಿಂಗ್ ನ್ಯೂಸ್
25-05-24 01:27 pm Mangalore Correspondent ಕರಾವಳಿ
ಮಂಗಳೂರು, ಮೇ 25: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಮಂಗಳೂರು ನಗರದ ಕೊಟ್ಟಾರದಲ್ಲಿ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಉಕ್ಕಿ ಹರಿಯುತ್ತಿದ್ದ ಕಾಲುವೆಯಲ್ಲಿ ಆಟೋ ರಿಕ್ಷಾ ಕೊಚ್ಚಿ ಹೋಗಿದ್ದು ಅದರ ಚಾಲಕ ನೀರುಪಾಲಾಗಿದ್ದಾರೆ.
ಕೊಟ್ಟಾರ ನಿವಾಸಿ ದೀಪಕ್ ಆಚಾರ್ಯ(44) ಸಾವನ್ನಪ್ಪಿದವರು. ಭಾರೀ ಮಳೆಗೆ ಮಳೆನೀರು ರಸ್ತೆಯ ಮೇಲೆ ಹರಿದಿದ್ದು ಈ ವೇಳೆ ನೀರಿನಲ್ಲಿ ಆಟೋ ಚಲಾಯಿಸಲು ಹೋಗಿದ್ದಾಗ ಕಾಲುವೆಗೆ ಪಲ್ಟಿಯಾಗಿ ಬಿದ್ದಿದೆ. ದೀಪಕ್ ಅವರ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.





ಭಾರೀ ಮಳೆಯಿಂದಾಗಿ ಕೊಟ್ಟಾರದಲ್ಲಿ ಹತ್ತು ಮನೆಗಳು, ಸಾಗರ್ ಕೋರ್ಟ್ ಪ್ರದೇಶದಲ್ಲಿ 10 ಮನೆಗಳಿಗೆ ಮಳೆನೀರು ನುಗ್ಗಿದೆ. ಮಳೆ ನೀರು ನುಗ್ಗಿದ ಬಗ್ಗೆ ರಾತ್ರಿಯೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿತ್ತು. ಸಿಬಂದಿ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿದ್ದು ಸಾಗರ್ ಕೋರ್ಟ್ ಪ್ರದೇಶದಲ್ಲಿ ಲಕ್ಷ್ಮೀ ಎಂಬ 85 ವರ್ಷದ ವೃದ್ಧೆಯನ್ನು ರಕ್ಷಣೆ ಮಾಡಿ ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಿದೆ. ಮಂಗಳೂರು, ಮೂಲ್ಕಿಯಲ್ಲಿ ಅತಿ ಹೆಚ್ಚು ಮಳೆಯಾದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪಡುಪಣಂಬೂರಿನಲ್ಲಿ 19.20 ಸೆಮೀ, ಕಿಲ್ಪಾಡಿಯಲ್ಲಿ 13.35, ಚೇಳಾರಿನಲ್ಲಿ 13.30 ಸೆಮೀ ಮಳೆಯಾಗಿದೆ.
Heavy rains in Mangalore, auto falls into pit at kottara, dies on spot. The deceased has been identified as Deepak Achar. Auto toppled while he was driving near kottara. Water has entered more than 20 houses in kottara.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm