MLA Harish Poonja, CM Siddaramaiah, Mangalore: ಶಾಸಕ ಹರೀಶ್ ಪೂಂಜಾ ಎಫ್ಐಆರ್ ಹಿನ್ನೆಲೆ ; ಕಾನೂನು ಎಲ್ಲರಿಗೂ ಒಂದೇ, ಶಾಸಕರೆಂದ ಮಾತ್ರಕ್ಕೆ ಪೊಲೀಸರಿಗೆ ಬೆದರಿಕೆ ಹಾಕುವುದೇ..? ಮುಖ್ಯಮಂತ್ರಿ ಸಿದ್ದರಾಮಯ್ಯ 

25-05-24 02:43 pm       Mangalore Correspondent   ಕರಾವಳಿ

ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಐಪಿಸಿ 353 ಪ್ರಕಾರ  ಎಫ್ ಐ ಆರ್ ದಾಖಲಿಸಲಾಗಿದ್ದು ಇದು ಜಾಮೀನು ರಹಿತ ಅಪರಾಧವಾಗಿದೆ.‌

ಮಂಗಳೂರು, ಮೇ 25 : ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಐಪಿಸಿ 353 ಪ್ರಕಾರ  ಎಫ್ ಐ ಆರ್ ದಾಖಲಿಸಲಾಗಿದ್ದು ಇದು ಜಾಮೀನು ರಹಿತ ಅಪರಾಧವಾಗಿದೆ.‌ ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಶಾಸಕ ಹರೀಶ್ ಪೂಂಜಾ ಬಂಧನಕ್ಕೆ ಕಾಂಗ್ರೆಸ್  ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ  ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲು ಶಿಕ್ಷೆ ನೀಡುವ ಅವಕಾಶವಿದೆ. ಆದರೆ ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಹರೀಶ್ ಪೂಂಜಾ ಅವರಿಗೆ ಸ್ಟೇಷನ್ ಬೇಲ್ ದೊರಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಅವರ ಮೇಲೆ ದಾಖಲಾಗಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ ಎಂದು ಮುಖ್ಯಮಂತ್ರಿಗಳು ಮರು ಪ್ರಶ್ನಿಸಿದರು.

Belthangady Harish Poonja FIR, CM Siddaramaiah slams Poonja in Mangalore. CM who arrived at Mangalore airport stated that if he is an MLA the law has not given any rights to shout at a police officer.