ಬ್ರೇಕಿಂಗ್ ನ್ಯೂಸ್
25-05-24 06:38 pm Mangalore Correspondent ಕರಾವಳಿ
ಮಂಗಳೂರು, ಮೇ 25: ಕೊಟ್ಟಾರದಲ್ಲಿ ಮಳೆನೀರು ಹರಿಯುವ ಕಾಲುವೆಗೆ ಆಟೋ ರಿಕ್ಷಾ ಬಿದ್ದು ಚಾಲಕ ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿ ಪೊಲೀಸರು ಮಹಾನಗರ ಪಾಲಿಕೆಯ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಸಾವನ್ನಪ್ಪಿದ ಆಟೋ ಚಾಲಕ ದೀಪಕ್ ಆಚಾರ್ಯ (44) ಅವರ ಅಕ್ಕ ಹೇಮಲತಾ ಅವರು ನೀಡಿದ ದೂರಿನ ಮೇರೆಗೆ ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾನಗರ ಪಾಲಿಕೆಯವರು ಕಾಲುವೆಯ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದು ಮತ್ತು ನೀರು ಮೇಲೆ ಬರುತ್ತಿದ್ದರೂ ರಸ್ತೆಗೆ ತಡೆಗೋಡೆ ಇರಿಸದೆ ನಿರ್ಲಕ್ಷ್ಯ ತೋರಿದ್ದರಿಂದ ಘಟನೆ ಸಂಭವಿಸಿದೆ. ಇದಕ್ಕೆ ಮಹಾನಗರ ಪಾಲಿಕೆಯವರೇ ಕಾರಣ ಎಂದು ದೂರು ನೀಡಿದ್ದರು. ಪೊಲೀಸರು ಪಾಲಿಕೆಯ ಅಧಿಕಾರಿಗಳು ಎಂದಷ್ಟೇ ಉಲ್ಲೇಖಿಸಿ ಪ್ರಕರಣ ದಾಖಲು ಮಾಡಿದ್ದಾರೆ.



ಇದೇ ವೇಳೆ, ಎನ್ಎಸ್ ಯುಐ ಮಂಗಳೂರು ನಗರ ದಕ್ಷಿಣ ಘಟಕದ ಅಧ್ಯಕ್ಷ ಕ್ರಿಸ್ಟನ್ ಮಿನೇಜಸ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಘಟನೆಗೆ ಸಂಬಂಧಿಸಿ ಪತ್ರ ಬರೆದಿದ್ದು, ಈ ಘಟನೆಗೆ ಹೊಣೆಗಾರರಾಗಿರುವ ಮಂಗಳೂರು ಮಹಾನಗರ ಪಾಲಿಕೆ ಮೇಯರ್, ಕಾರ್ಪೊರೇಟರ್ ಹಾಗೂ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಕಾರ್ಪೊರೇಟರ್ ಮನೋಜ್ ಕುಮಾರ್ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಅಮೂವ್ಯ ಜೀವ ಹೋಗುವಂತಾಗಿದೆ. ಜನರು ಕಟ್ಟಿದ ತೆರಿಗೆ ಹಣದಿಂದ ಅಭಿವೃದ್ಧಿ ಕೆಲಸವನ್ನು ಮಾಡಬೇಕು. ಇಲ್ಲಿ ನಿರ್ಲಕ್ಷ್ಯ ವಹಿಸಿದ್ದರಿಂದ ಘಟನೆಗೆ ಕಾರಣವಾಗಿದೆ. ಇವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ಅಲ್ಲದೆ, ಬಲಿಯಾದ ದೀಪಕ್ ಕುಟುಂಬದ ಒಬ್ಬರು ಸದಸ್ಯರಿಗೆ ಸರಕಾರಿ ಕೆಲಸ ಕೊಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೊಟ್ಟಾರದಲ್ಲಿ ಪ್ರತಿವರ್ಷ ಜೋರು ಮಳೆಯಾದರೆ ಕಾಲುವೆ ನೀರು ತುಂಬುವುದರಿಂದ ಆಸುಪಾಸಿನಲ್ಲಿರುವ ತಗ್ಗಿನ ಮನೆಗಳಿಗೆ ನುಗ್ಗುತ್ತದೆ. ಈ ರೀತಿಯ ಸ್ಥಿತಿ ಈ ಬಾರಿ ಮೊದಲ ಮಳೆಗೇ ಸಂಭವಿಸಿದ್ದು, ಪಾಲಿಕೆಯ ಅಧಿಕಾರಸ್ಥರು ನಿರ್ಲಕ್ಷ್ಯ ವಹಿಸಿದ್ದರಿಂದಲೇ ಸಮಸ್ಯೆ ಉಂಟಾಗುತ್ತಿದೆ. ಕಾಲುವೆ ಹೂಳೆತ್ತದಿರುವುದು, ಕಾಲುವೆಯನ್ನು ಒತ್ತುವರಿ ಮಾಡಿರುವುದನ್ನು ತೆರವು ಮಾಡದೇ ಇರುವುದು ಸಮಸ್ಯೆಗೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಾರೆ.
Mangalore Kottara auto driver death, FIR filed on Mangalore City corporation over negligence, NSUI has written letter to CM demanding strict against mayor and corporator responsible.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm