ಬ್ರೇಕಿಂಗ್ ನ್ಯೂಸ್
27-05-24 01:28 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 27: ಪೆನ್ ಡ್ರೈವ್ ಸಂಕಷ್ಟದಲ್ಲಿ ಸಿಲುಕಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರ ಟೆಂಪಲ್ ರನ್ ಮುಂದುವರೆದಿದೆ. ಸೋಮವಾರ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ರೇವಣ್ಣ ಭೇಟಿ ನೀಡಿದರು.
ಶ್ರೀಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ರವಿವಾರ ರಾತ್ರಿಯೇ ಧರ್ಮಸ್ಥಳಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದ ರೇವಣ್ಣ ಇಂದು ಬೆಳಗ್ಗೆ ದೇವರ ದರ್ಶನ ಪಡೆದರು.
ಈಗಾಗಲೇ ಹಲವು ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿರುವ ಎಚ್.ಡಿ ರೇವಣ್ಣ ಇದೀಗ ಸಂಕಷ್ಟ ನಿವಾರಣೆಗಾಗಿ ಮಂಜುನಾಥನ ಮೊರೆ ಹೋಗಿದ್ದಾರೆ.



ಧರ್ಮಸ್ಥಳ ಶ್ರೀಮಂಜುನಾಥ ಸ್ವಾಮಿಯ ದರ್ಶನ ಬಳಿಕ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಜೊತೆ ರೇವಣ್ಣ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 40 ವರ್ಷಗಳಿಂದ ರಾಜಕಾರಣಿದಲ್ಲಿದ್ದೇನೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಕಾನೂನು ಬಗ್ಗೆ ಗೌರವವಿದೆ ದೇವರ ಬಗ್ಗೆ ನಂಬಿಕೆಯಿದೆ.
ಪ್ರಕರಣ ಕೋರ್ಟ್ನಲ್ಲಿರುವುದರಿಂದ ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ. ಮಂಜುನಾಥ ಸ್ವಾಮಿ ಮೇಲೆ ನನಗೆ ನಂಬಿಕೆಯಿದೆ. ಸೋಮವಾರದ ವಿಶೇಷ ದಿನ ಮಂಜುನಾಥ ಸ್ವಾಮಿ ದರ್ಶನ ಮಾಡಿದ್ದೇನೆ. ರಾಜ್ಯದ ಜನತೆ ಬಗ್ಗೆ, ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದಿದ್ದಾರೆ.
ಇನ್ನು ಹಾಸನ ಚಲೋ ಕಾರ್ಯಕ್ರಮದ ಬಗ್ಗೆ ಗೊತ್ತಿಲ್ಲ. ದೇವೆಗೌಡರು ಪತ್ರ ಬರೆದಿರುವ ಬಗ್ಗೆಯೂ ಗೊತ್ತಿಲ್ಲ. ಉಳಿದ ಯಾವುದರ ಬಗ್ಗೆಯೂ ಸದ್ಯ ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿ ತೆರಳಿದ್ದಾರೆ.
Revanna visits Dharmasthala temple in Mangalore offers prayers for prajwal. Said will leave everything into the hands of God. I belive in both law and God he added.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am