ಬ್ರೇಕಿಂಗ್ ನ್ಯೂಸ್
27-05-24 10:59 pm Mangalore Correspondent ಕರಾವಳಿ
ಮಂಗಳೂರು, ಮೇ 27: ಕಳೆದ ಶುಕ್ರವಾರ ನಗರದ ಕಂಕನಾಡಿಯ ಮಾಲ್ ಒಂದರ ಹಿಂಭಾಗದ ಮಸೀದಿ ಆವರಣದ ರಸ್ತೆಯಲ್ಲಿ ಯುವಕರು ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ನಡು ರಸ್ತೆಯಲ್ಲೇ ಯುವಕರು ನಮಾಜ್ ಮಾಡಿದ್ದಾರೆ ಎಂದು ವಿಡಿಯೋ ವೈರಲ್ ಆಗುತ್ತಿದ್ದು, ಹಿಂದು ಸಂಘಟನೆಗಳ ಕಡೆಯಿಂದ ಆಕ್ಷೇಪವೂ ಕೇಳಿಬಂದಿದೆ.
ಕಂಕನಾಡಿಯ ಮ್ಯಾಕ್ ಮಾಲ್ ಹಿಂಭಾಗದ ಮಸೀದಿ ಆವರಣದ ರಸ್ತೆಯಲ್ಲಿ ಒಂದಷ್ಟು ಯುವಕರು ಕುಳಿತುಕೊಂಡು ನಮಾಜ್ ಮಾಡಿದ್ದರು. ಮಸೀದಿ ಒಳಭಾಗದಲ್ಲಿ ಫುಲ್ ಆಗಿದ್ದರಿಂದಲೋ ಏನೋ ಯುವಕರು ಹೊರಭಾಗದಲ್ಲಿಯೇ ಕುಳಿತು ನಮಾಜ್ ಮಾಡಿದ್ದರು. ಇದನ್ನು ಯಾರೋ ದೂರದ ಕಟ್ಟಡದಿಂದ ವಿಡಿಯೋ ಮಾಡಿದ್ದು, ಅದೀಗ ವೈರಲ್ ಆಗಿದೆ. ವಿಡಿಯೋ ವೈರಲ್ ಆಗಿದ್ದು ಮಾಧ್ಯಮಗಳಲ್ಲಿಯೂ ಸುದ್ದಿಯಾಗಿದೆ.
ಘಟನೆ ಬಗ್ಗೆ ಮಂಗಳೂರಿನ ಬಜರಂಗದಳ ಘಟಕ ತನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ನಮಾಜ್ ಕುರಿತಾಗಿ ಸಂಬಂಧಪಟ್ಟವರಿಗೆ ತಿಳಿಸಲಾಗಿದೆ. ಮುಂದಿನ ಶುಕ್ರವಾರ ಮತ್ತೆ ಅದೇ ಜಾಗದಲ್ಲಿ ನಮಾಜ್ ನಡೆದರೆ ನೇರವಾಗಿ ಬಜರಂಗದಳ ಇದರ ವಿರುದ್ಧ ನೇರ ಕಾರ್ಯಾಚರಣೆ ನಡೆಸಲಿದೆ ಎಂದು ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ ಎಂಬುದಾಗಿ ಬರೆಯಲಾಗಿದೆ. ಈ ಪೋಸ್ಟ್ ಹಾಕಿದ ಬಗ್ಗೆ ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೆಡ್ ಲೈನ್ ಕರ್ನಾಟಕಕ್ಕೆ ದೃಢಪಡಿಸಿದ್ದು ನಾವೇ ಪೋಸ್ಟ್ ಹಾಕಿದ್ದಾಗಿ ತಿಳಿಸಿದ್ದಾರೆ.
ಘಟನೆ ಬಗ್ಗೆ ಕದ್ರಿ ಪೊಲೀಸರಲ್ಲಿ ಕೇಳಿದಾಗ, ಮಸೀದಿ ಕಮಿಟಿಯವರಿಗೆ ಹೇಳಿದ್ದೇವೆ, ಕೇಸು ಏನೂ ಆಗಿಲ್ಲ. ಕೆಲವೊಮ್ಮೆ ಹೆಚ್ಚು ಜನ ಬಂದಾಗ, ಮಸೀದಿ ಹೊರಭಾಗದಲ್ಲಿ ನಿಲ್ಲುವ ಸ್ಥಿತಿಯಾಗಿದೆ ಎಂದು ತಿಳಿಸಿದ್ದಾರೆ. ವಿಡಿಯೋ ಬಂದಿರುವ ಬಗ್ಗೆ ಜಾಗ್ರತೆ ಇರುವಂತೆ ತಿಳಿಸಿದ್ದೇವೆ ಎಂದಿದ್ದಾರೆ.
~ Namaz on the roads begin for the first time in Mangalore. Behind MAK Mall in Kankanady. pic.twitter.com/tmYxOwaUdn
— Jeetuavaral Hegde (@jeetuavaral) May 27, 2024
Mangalore Youths doing their namaz in the middle of the road near masjid at Kankandy went viral on social media, Bajrang Dal Sharan Pumpwell has warns of action if this continues next time.
22-09-24 07:10 pm
Bangalore Correspondent
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
ಪ್ಯಾಲೆಸ್ತೀನ್ ಧ್ವಜದ ಬಗ್ಗೆ ಸಚಿವ ಜಮೀರ್ ಸಮರ್ಥನೆ ಬ...
21-09-24 11:17 pm
ಬಿಜೆಪಿ ಶಾಸಕ ಮುನಿರತ್ನ ಪ್ರಕರಣ ತನಿಖೆಗೆ ಎಸ್ಐಟಿ ರಚ...
21-09-24 10:42 pm
Nandini ghee; ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕ...
20-09-24 11:01 pm
21-09-24 08:05 pm
HK News Desk
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
22-09-24 04:55 pm
Mangalore Correspondent
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
22-09-24 08:25 pm
Mangalore Correspondent
Karwar Murder, Crime: ಕಾರವಾರದಲ್ಲಿ ಬೆಳ್ಳಂಬೆಳಗ್...
22-09-24 02:37 pm
Mangalore crime, Theft: ಮೂಡುಬಿದ್ರೆಯಲ್ಲಿ ವೃದ್ಧ...
21-09-24 10:56 pm
Bangalore Murder, crime, nepal: ನೇಪಾಳ ಯುವತಿಯ...
21-09-24 10:24 pm
Mahalaxmi Urban Cooperative bank fraud, Belag...
20-09-24 11:55 am