ಬ್ರೇಕಿಂಗ್ ನ್ಯೂಸ್
27-05-24 10:59 pm Mangalore Correspondent ಕರಾವಳಿ
ಮಂಗಳೂರು, ಮೇ 27: ಕಳೆದ ಶುಕ್ರವಾರ ನಗರದ ಕಂಕನಾಡಿಯ ಮಾಲ್ ಒಂದರ ಹಿಂಭಾಗದ ಮಸೀದಿ ಆವರಣದ ರಸ್ತೆಯಲ್ಲಿ ಯುವಕರು ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ನಡು ರಸ್ತೆಯಲ್ಲೇ ಯುವಕರು ನಮಾಜ್ ಮಾಡಿದ್ದಾರೆ ಎಂದು ವಿಡಿಯೋ ವೈರಲ್ ಆಗುತ್ತಿದ್ದು, ಹಿಂದು ಸಂಘಟನೆಗಳ ಕಡೆಯಿಂದ ಆಕ್ಷೇಪವೂ ಕೇಳಿಬಂದಿದೆ.
ಕಂಕನಾಡಿಯ ಮ್ಯಾಕ್ ಮಾಲ್ ಹಿಂಭಾಗದ ಮಸೀದಿ ಆವರಣದ ರಸ್ತೆಯಲ್ಲಿ ಒಂದಷ್ಟು ಯುವಕರು ಕುಳಿತುಕೊಂಡು ನಮಾಜ್ ಮಾಡಿದ್ದರು. ಮಸೀದಿ ಒಳಭಾಗದಲ್ಲಿ ಫುಲ್ ಆಗಿದ್ದರಿಂದಲೋ ಏನೋ ಯುವಕರು ಹೊರಭಾಗದಲ್ಲಿಯೇ ಕುಳಿತು ನಮಾಜ್ ಮಾಡಿದ್ದರು. ಇದನ್ನು ಯಾರೋ ದೂರದ ಕಟ್ಟಡದಿಂದ ವಿಡಿಯೋ ಮಾಡಿದ್ದು, ಅದೀಗ ವೈರಲ್ ಆಗಿದೆ. ವಿಡಿಯೋ ವೈರಲ್ ಆಗಿದ್ದು ಮಾಧ್ಯಮಗಳಲ್ಲಿಯೂ ಸುದ್ದಿಯಾಗಿದೆ.
ಘಟನೆ ಬಗ್ಗೆ ಮಂಗಳೂರಿನ ಬಜರಂಗದಳ ಘಟಕ ತನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ನಮಾಜ್ ಕುರಿತಾಗಿ ಸಂಬಂಧಪಟ್ಟವರಿಗೆ ತಿಳಿಸಲಾಗಿದೆ. ಮುಂದಿನ ಶುಕ್ರವಾರ ಮತ್ತೆ ಅದೇ ಜಾಗದಲ್ಲಿ ನಮಾಜ್ ನಡೆದರೆ ನೇರವಾಗಿ ಬಜರಂಗದಳ ಇದರ ವಿರುದ್ಧ ನೇರ ಕಾರ್ಯಾಚರಣೆ ನಡೆಸಲಿದೆ ಎಂದು ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ ಎಂಬುದಾಗಿ ಬರೆಯಲಾಗಿದೆ. ಈ ಪೋಸ್ಟ್ ಹಾಕಿದ ಬಗ್ಗೆ ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೆಡ್ ಲೈನ್ ಕರ್ನಾಟಕಕ್ಕೆ ದೃಢಪಡಿಸಿದ್ದು ನಾವೇ ಪೋಸ್ಟ್ ಹಾಕಿದ್ದಾಗಿ ತಿಳಿಸಿದ್ದಾರೆ.


ಘಟನೆ ಬಗ್ಗೆ ಕದ್ರಿ ಪೊಲೀಸರಲ್ಲಿ ಕೇಳಿದಾಗ, ಮಸೀದಿ ಕಮಿಟಿಯವರಿಗೆ ಹೇಳಿದ್ದೇವೆ, ಕೇಸು ಏನೂ ಆಗಿಲ್ಲ. ಕೆಲವೊಮ್ಮೆ ಹೆಚ್ಚು ಜನ ಬಂದಾಗ, ಮಸೀದಿ ಹೊರಭಾಗದಲ್ಲಿ ನಿಲ್ಲುವ ಸ್ಥಿತಿಯಾಗಿದೆ ಎಂದು ತಿಳಿಸಿದ್ದಾರೆ. ವಿಡಿಯೋ ಬಂದಿರುವ ಬಗ್ಗೆ ಜಾಗ್ರತೆ ಇರುವಂತೆ ತಿಳಿಸಿದ್ದೇವೆ ಎಂದಿದ್ದಾರೆ.
~ Namaz on the roads begin for the first time in Mangalore. Behind MAK Mall in Kankanady. pic.twitter.com/tmYxOwaUdn
— Jeetuavaral Hegde (@jeetuavaral) May 27, 2024
Mangalore Youths doing their namaz in the middle of the road near masjid at Kankandy went viral on social media, Bajrang Dal Sharan Pumpwell has warns of action if this continues next time.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm