ಬ್ರೇಕಿಂಗ್ ನ್ಯೂಸ್
28-05-24 07:01 pm Mangalore Correspondent ಕರಾವಳಿ
ಮಂಗಳೂರು, ಮೇ.28: ಮಂಗಳೂರಿನಲ್ಲಿ ನಡುರಸ್ತೆಯಲ್ಲಿ ನಮಾಜ್ ಮಾಡಿದ ಘಟನೆಗೆ ಸಂಬಂಧಿಸಿ ಮಾಜಿ ಸಚಿವ ಈಶ್ವರಪ್ಪ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇಂಥವರನ್ನು ಒದ್ದು ಒಳಗೆ ಹಾಕಿ, ದೇಶದ್ರೋಹದ ಕೇಸ್ ಹಾಕಿ. ನಿಮ್ಮ ಮನೆಯಲ್ಲಿ ನಜಾಮ್ ಮಾಡಿಸಿ, ಬೇಡ ಅನ್ನಲ್ಲ ಎಂದು ಟೀಕಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಎಲ್ಲ ಮುಸ್ಲಿಮರನ್ನು ಟೀಕೆ ಮಾಡುತ್ತಿಲ್ಲ, ಅರ್ಥ ಮಾಡಿಕೊಳ್ಳಿ. ಇವರು ಯಾರೋ ರಾಷ್ಟ್ರ ದ್ರೋಹಿಗಳು ಮಾಡುತ್ತಿರುವ ಕುತಂತ್ರ. ಇಂತವರನ್ನು ಒದ್ದು ಒಳಗೆ ಹಾಕಿದ್ರೆ, ಇತರೇ ಮುಸ್ಲಿಮರಿಗೆ ಸಂತೋಷ ಆಗುತ್ತದೆ. ಮುಸ್ಲಿಂ ಸಮುದಾಯಕ್ಕೆ ಅಪಮಾನ ಆಗುತ್ತಿದೆ ಅಂತ ಅವರೂ ಹೇಳುತ್ತಿದ್ದಾರೆ. ನಮ್ಮ ಬ್ರದರ್, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಅಂತಾರೆ ಸಿದ್ದರಾಮಯ್ಯ. ಇದು ಟಿಪ್ಪು ನಗರ, ಟಿಪ್ಪು ರಾಜ್ಯ ಅಂತ ಹೇಳ್ತಾರೆ. ಇವರದು ಎಷ್ಟು ಸೊಕ್ಕಿನ ಮಾತು, ಎಲ್ಲಿಂದ ಧೈರ್ಯ ಬಂತು ಹೀಗನ್ನಲು.
ಇವರ ತುಷ್ಟೀಕರಣ ನೀತಿ ಸರ್ಕಾರವನ್ನು ಸುಡುತ್ತೆ, ಕಾಂಗ್ರೆಸನ್ನು ಭಸ್ಮ ಮಾಡುತ್ತೆ. ನಮಾಜ್ ಮಾಡಿದವರನ್ನು ತಕ್ಷಣ ಅರೆಸ್ಟ್ ಮಾಡಿ. ರಾಷ್ಟ್ರ ದ್ರೋಹದ ಕೃತ್ಯ ಕೇಸ್ ಹಾಕಿ. ಹಿಂದು ಮುಸ್ಲಿಂ ಸಂತೋಷದಿಂದ ಇರೋದು ಇವರಿಗೆ ಇಷ್ಟ ಇಲ್ವಾ ಎಂದು ಈಶ್ವರಪ್ಪ ಮಂಗಳೂರಿನಲ್ಲಿ ಪ್ರಶ್ನಿಸಿದ್ದಾರೆ.
ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಬಗ್ಗೆ ಕೇಳಿದ ಪ್ರಶ್ನೆಗೆ, ಈ ವಿಚಾರದಲ್ಲಿ ಬಿಜೆಪಿ ಮುಖಂಡರು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ನಾನು ಮಾತಾಡಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಡಬಲ್ ಸ್ಟ್ಯಾಂಡರ್ಡ್ ಹೊಂದಿದ್ದಾರೆ. ನನ್ನ ವಿರುದ್ಧ ಆರೋಪ ಬಂದಾಗ ತಕ್ಷಣ ರಾಜಿನಾಮೆ ನೀಡಿದ್ದೆ. ಇದೇ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜೊತೆಯಾಗಿ ಪ್ರತಿಭಟನೆ ಮಾಡಿದ್ದರು. ಈಗ ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಈ ಇಬ್ಬರು ಮೌನವಾಗಿದ್ದಾರೆ. ನನ್ನ ವಿರುದ್ಧ ಆಪಾದನೆ ಬಂದಾಗ ನಾನು ರಾಜನಾಮೆ ನೀಡಿ ತನಿಖೆಗೆ ಸಹಕಾರ ನೀಡಿದ್ದೆ. ಈಗ ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ ಡೆತ್ ನೋಟ್ ನಲ್ಲಿ ಕೆಲವು ಅಧಿಕಾರಿಗಳ ವಿರುದ್ದ, ಸಚಿವ ನಾಗೇಂದ್ರ ಅವರ ಬಗ್ಗೆ ಆರೋಪ ಮಾಡಿದ್ದಾರೆ. ಕೂಡಲೇ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು. ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಆಗ್ರಹಿಸಿದರು.
Namaz in the middle of the road in Mangalore, Eshwarappa they are anti nationals must arrest them immediately he added speaking at press club in Mangalore.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm