ಬ್ರೇಕಿಂಗ್ ನ್ಯೂಸ್
28-05-24 09:48 pm Mangalore Correspondent ಕರಾವಳಿ
ಮಂಗಳೂರು, ಮೇ 28: ನಡುರಸ್ತೆಯಲ್ಲಿ ನಮಾಜ್ ಮಾಡಿರುವ ವಿಚಾರದಲ್ಲಿ ಘಟನೆ ಮರುಕಳಿಸಿದರೆ ನಾವು ದಾಳಿ ಮಾಡುತ್ತೇವೆ ಎಂಬ ಬಜರಂಗದಳ ಎಚ್ಚರಿಕೆಗೆ ಎಸ್ಡಿಪಿಐ ನಾಯಕರು ತಿರುಗೇಟು ನೀಡಿದ್ದಾರೆ. ಹಿಂದುಗಳ ಗಣೇಶೋತ್ಸವ ಇನ್ನಿತರ ಸಂದರ್ಭಗಳಲ್ಲಿ ಇಡೀ ರಸ್ತೆಯನ್ನು ಬಂದ್ ಮಾಡೋದಿಲ್ವಾ.. ಅದು ಆಯಾ ಧರ್ಮಗಳ ಹಬ್ಬ. ಹಾಗೆಂದು ಅದನ್ನು ಮುಂದಿಟ್ಟು ಕೋಮು ದ್ವೇಷ ಹಬ್ಬಿಸುವುದು ಸರಿಯಲ್ಲ. ಈಗ ಬಜರಂಗದಳ ನಾಯಕರು ದಾಳಿ ಮಾಡುತ್ತೇವೆ ಎನ್ನುತ್ತಾರೆ. ತಾಕತ್ತಿದ್ದರೆ, ಅದನ್ನು ಮಾಡಿ ತೋರಿಸಲಿ ಎಂದು ಎಸ್ಪಿಡಿಐ ನಾಯಕ ರಿಯಾಜ್ ಕಡಂಬು ಸವಾಲು ಹಾಕಿದ್ದಾರೆ.
ಘಟನೆ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ರಿಯಾಜ್ ಕಡಂಬು, ನಾವು ಶಾಂತ ಸಮಾಜದಲ್ಲಿ ಕೋಮು ದ್ವೇಷ ಹಬ್ಬಿಸಲು ಅಥವಾ ಗಲಭೆ ಎಬ್ಬಿಸಲು ಬಯಸುವುದಿಲ್ಲ. ಹಾಗೆಂದು ಪಂಪ್ವೆಲ್ ನಂತಹ ನಾಯಕರು ಪ್ರಚೋದನೆ ಮಾಡಿದರೆ ಕೈಕಟ್ಟಿ ಕೂರುವುದೂ ಇಲ್ಲ. ಅಲ್ಲಿ ಎರಡು ನಿಮಿಷ ನಮಾಜ್ ಮಾಡಿದವರು ಎದ್ದು ಹೋಗಿದ್ದಾರೆ. ಇವರು ಮಾತ್ರ ಅದನ್ನು ದೊಡ್ಡ ರಾದ್ಧಾಂತ ಮಾಡುತ್ತಿದ್ದಾರೆ. ಇಲ್ಲಿ ಸಮಾಜವನ್ನು ರಕ್ಷಣೆ ಮಾಡುವುದಕ್ಕೆ, ಕಾನೂನಿಗೆ ವಿರುದ್ಧ ನಡೆದರೆ ಪೊಲೀಸರು ಇದ್ದಾರೆ. ಜನರು ಪ್ರಜ್ಞಾವಂತರಿದ್ದಾರೆ, ಎಲ್ಲ ಸಂದರ್ಭಗಳಲ್ಲಿ ಕೈಕಟ್ಟಿ ಕೂರುತ್ತಾರೆಂದು ಭಾವಿಸುವುದು ಬೇಡ.
ಪಂಪ್ವೆಲ್ ನಂತಹ ಸೇತುವೆಯ ಅಡಿಭಾಗದಲ್ಲಿ ಬಹಳಷ್ಟು ಮಂದಿ ಕುಟುಂಬಗಳು ರಾತ್ರಿ ಮಲಗುತ್ತಾರೆ. ಅದರಲ್ಲಿ ಎಲ್ಲ ಧರ್ಮದವರೂ ಇದ್ದಾರೆ. ಅವರಿಗೆ ಸಹಾಯ ಮಾಡುವುದು, ಆಶ್ರಯ ಕಲ್ಪಿಸುವ ಕೆಲಸ ಮಾಡಿದರೆ ಜನರು ಮೆಚ್ಚುತ್ತಾರೆ. ಅದು ಬಿಟ್ಟು ಪ್ರತಿ ಬಾರಿ ಜಿಲ್ಲೆಗೆ ಬೆಂಕಿ ಹಚ್ಚುವ ರೀತಿ ಹೇಳಿಕೆ ನೀಡುವುದು, ಪ್ರಚೋದನೆ ನೀಡುವುದನ್ನು ನಾವು ಸಹಿಸಲ್ಲ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಕಡಂಬು ಹೇಳಿದ್ದಾರೆ.
ಬಜರಂಗದಳ ನೇರ ಕಾರ್ಯಾಚರಣೆ ಮಾಡುತ್ತೇವೆ ಎಂದು ಹೇಳಿದ ಬೆನ್ನಲ್ಲೇ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ನಾವೇನೂ ಕೈಕಟ್ಟಿ ಕೂತಿಲ್ಲ ಎನ್ನುವ ಮೂಲಕ ಮುಸ್ಲಿಂ ನಾಯಕರು ತೊಡೆ ತಟ್ಟಿದ್ದಾರೆ. ಆಮೂಲಕ ಶಾಂತ ಸಮಾಜದಲ್ಲಿ ಸದ್ದಿಲ್ಲದೆ, ಮತ್ತೊಮ್ಮೆ ದ್ವೇಷದ ವಾತಾವರಣ ಮೂಡಿಸುವ ಯತ್ನ ನಡೆದಿರುವಂತೆ ಕಂಡುಬರುತ್ತಿದೆ.
Mangalore Namaz in the middle of the raod, SDPI warns Bajrang dal. Bajrang dal had warned of taking action if they find doing nama again. Sdpi leader Riaz also questioned about Ganeshotsava celebrations in raods.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm