ಬ್ರೇಕಿಂಗ್ ನ್ಯೂಸ್
28-05-24 10:31 pm Udupi Correspondent ಕರಾವಳಿ
ಉಡುಪಿ, ಮೇ 28: ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಪಟ್ಟು ಸಡಿಲಿಸದೇ ಸುಪ್ರೀಂ ಕೋರ್ಟ್ ವರೆಗೂ ಹೋಗಿದ್ದ ಉಡುಪಿಯ ವಿದ್ಯಾರ್ಥಿನಿ ಅಲಿಯಾ ಅಸ್ಸಾದಿ, ಟ್ವಿಟರ್ ನಲ್ಲಿ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಪ್ರಶ್ನೆ ಮಾಡಿ ಅಣಕಿಸಿದ್ದಾರೆ.
ಟ್ವಿಟ್ಟರ್ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಆಲಿಯಾ ಅಸ್ಸಾದಿ, ಅಂದು ಹಿಜಾಬ್ ಕಾರಣಕ್ಕಾಗಿ ನನ್ನನ್ನು ಕಾಲೇಜಿನಿಂದ ಹೊರದಬ್ಬಿದ್ರಿ. ಆ ಕಾರಣಕ್ಕಾಗಿ ನೀವು ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದ್ದೀರಿ. ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವುದನ್ನು ನೋಡುತ್ತಿದ್ದೇನೆ. ಅಂದು ನಾನು ಉಚ್ಚಾಟಿತ ವಿದ್ಯಾರ್ಥಿನಿ, ಇಂದು ನೀವು ಉಚ್ಚಾಟಿತ ವ್ಯಕ್ತಿ ಎಂದು ಮಾಜಿ ಶಾಸಕ ರಘುಪತಿ ಭಟ್ ಅವರ ಕಾಲೆಳೆಯುವ ಮೂಲಕ ಟಾಂಗ್ ಕೊಟ್ಟಿದ್ದಾರೆ.
ದೇವರು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು. ವಾರ್ಷಿಕ ಪರೀಕ್ಷೆಗೆ ಇನ್ನೇನು 60 ದಿನಗಳಿರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದರಲ್ಲವೇ, ಆದರೆ ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವ ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು. ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ. ಆದರೆ, ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿತ ವ್ಯಕ್ತಿ ಎಂದು ವ್ಯಂಗ್ಯವಾಡಿದ್ದಾರೆ.
ರಾಜ್ಯದಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಮುಂದಾಗಿದ್ದ ವಿದ್ಯಾರ್ಥಿನಿಗೆ ಅಂದಿನ ಸ್ಥಳೀಯ ಶಾಸಕ ರಘುಪತಿ ಭಟ್ ಅವರು ವಿರೋಧಿಸಿ ಅವಕಾಶ ಕೊಡದೇ ಪರೀಕ್ಷೆ ಬರೆಯುವುದರಿಂದ ಉಚ್ಛಾಟನೆ ಮಾಡಿದ್ದರು. ಇದಕ್ಕೆ ಎರಡು ವರ್ಷಗಳ ಬಳಿಕ ವಿದ್ಯಾರ್ಥಿನಿ ಅಲಿಯಾ ಅಸಾದಿ ‘ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ ಇತ್ತು. ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿನಿ, ಇಂದು ನೀವು ಉಚ್ಚಾಟಿತ ವ್ಯಕ್ತಿ ಎಂದು ತಿರುಗೇಟು ಕೊಟ್ಟಿದ್ದಾರೆ.
ಉಡುಪಿ ಶಾಸಕರಾಗಿದ್ದ ರಘುಪತಿ ಭಟ್ ಅವರಿಗೆ 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಟಿಕೆಟ್ ನೀಡಿರಲಿಲ್ಲ. ಹೊಸಬರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ, ಯಶಪಾಲ್ ಸುವರ್ಣ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿತ್ತು. ಆನಂತರ, ವಿಧಾನ ಷರಿಷತ್ ಟಿಕೆಟ್ ಪಡೆಯಲು ಕಸರತ್ತು ನಡೆಸಿದ್ದರು. ಆದರೆ ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಬೇರೆಯವರ ಪಾಲಾಗಿದೆ. ಇದರಿಂದ ಸಿಟ್ಟಿಗೆದ್ದ ರಘುಪತಿ ಭಟ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ
— Aliya Assadi (@Aliyassadi) May 28, 2024
ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿತ ವ್ಯಕ್ತಿ. @RaghupathiBhat (2/n)
Aliya Assadi, leader of the Udupi hijab protest, has taken a jab at expelled BJP former MLA Raghupati Bhat on ‘X’ (Twitter). "God will do what He wishes," she said. "With only 60 days remaining for the annual exams, you expelled me from college solely for wearing a hijab. Haven’t you achieved a great feat for your party?"
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am