ಬ್ರೇಕಿಂಗ್ ನ್ಯೂಸ್
29-05-24 01:06 pm Mangalore Correspondent ಕರಾವಳಿ
ಮಂಗಳೂರು, ಮೇ.29: ಗಡಿಭಾಗ ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿದ್ದ ಹಿಂದು ಯುವತಿಯನ್ನು ಮುಸ್ಲಿಂ ಯುವಕನೊಬ್ಬ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆಯಾಗಿದ್ದು ಲವ್ ಜಿಹಾದ್ ಆರೋಪ ಕೇಳಿಬಂದಿದೆ.
ಮೇ 23ರಂದು ಬದಿಯಡ್ಕ ಬಳಿಯ ನಿವಾಸಿ ನೇಹಾ ಎಂಬ ಯುವತಿ ಮನೆಯಿಂದ ನಾಪತ್ತೆಯಾಗಿದ್ದಳು. ಆನಂತರ, ಮೇ 27ರಂದು ಬದಿಯಡ್ಕ ರಿಜಿಸ್ಟ್ರಾರ್ ಕಚೇರಿಯಲ್ಲಿ ನೇಹಾ ಮತ್ತು ಮಿರ್ಶಾದ್ ಎಂಬ ಯುವಕ ಮದುವೆಯಾಗಿರುವ ಬಗ್ಗೆ ನೋಟೀಸ್ ಹಾಕಲಾಗಿತ್ತು. ಇದಕ್ಕೂ ಮೊದಲೇ ಯುವತಿ ಮನೆಯವರು ಬದಿಯಡ್ಕ ಠಾಣೆಗೆ ದೂರು ನೀಡಿದ್ದು, ಮಗಳನ್ನು ಮಿರ್ಶಾದ್ ಎಂಬ ಯುವಕ ಅಪಹರಿಸಿರುವ ಶಂಕೆಯಲ್ಲಿ ದೂರು ನೀಡಿದ್ದರು. ಆದರೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು.
ಮದುವೆಯ ಬಳಿಕ ಯುವಕ- ಯುವತಿ ಬದಿಯಡ್ಕ ಠಾಣೆಗೆ ಹಾಜರಾಗಿದ್ದು, ಯುವತಿ ಗಂಡನ ಜೊತೆಗೆ ತೆರಳುವುದಾಗಿ ಹೇಳಿದ್ದರಿಂದ ಪೊಲೀಸರು ಅವರನ್ನು ಕಾಸರಗೋಡಿನಲ್ಲಿ ಕೋರ್ಟಿಗೆ ಹಾಜರುಪಡಿಸಿ ಬಿಟ್ಟು ಕಳಿಸಿದ್ದಾರೆ ಎನ್ನಲಾಗಿದೆ. ಆದರೆ, ಈ ಒಟ್ಟು ಪ್ರಕ್ರಿಯೆಗೆ ಮುಸ್ಲಿಂ ಲೀಗ್ ನಾಯಕರು ಬೆಂಗಾವಲು ನಿಂತಿದ್ದು, ಪೊಲೀಸರ ಕೈಕಟ್ಟಿ ಹಾಕಿದ್ದಾರೆ. ಯುವತಿಯನ್ನು ಆಮಿಷ ತೋರಿಸಿ ಮದುವೆಯಾಗಿದ್ದು, ಮತಾಂತರ ಮಾಡುವ ಉದ್ದೇಶ ಹೊಂದಿದ್ದಾರೆ ಎಂದು ಹಿಂದು ಸಂಘಟನೆ ನಾಯಕರು ಆರೋಪಿಸಿದ್ದಾರೆ.
ಯುವತಿ ನೇಹಾ ಕಾಸರಗೋಡಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಶಿಕ್ಷಕಿಯಾಗಿದ್ದಳು. ನೋಡಲು ಸ್ಫುರದ್ರೂಪಿಯಾಗಿದ್ದ ಯುವತಿಯನ್ನು ಮುಸ್ಲಿಂ ಯುವಕ ಪ್ರೀತಿ ನೆಪದಲ್ಲಿ ಪಟಾಯಿಸಿದ್ದು, ಈಗ ಸದ್ದಿಲ್ಲದೆ ಮದುವೆಯಾಗಿದ್ದಾನೆ. ಯುವತಿ ಮನೆಯವರು ಏನು ಮಾಡುವುದೆಂದು ತೋಚದೆ ಕಂಗಾಲಾಗಿದ್ದಾರೆ. ಬಜರಂಗದಳ ನಾಯಕರು, ಯುವತಿಯನ್ನು ಮರಳಿ ಬರುವಂತೆ ಬಹಿರಂಗ ಕರೆ ನೀಡಿದ್ದು, ಈಗ ಮರಳಿ ಬಂದರೂ ಇಡೀ ಹಿಂದು ಸಮಾಜ ನಿನ್ನ ಜೊತೆಗಿರುತ್ತದೆ ಎಂದು ಆಹ್ವಾನ ನೀಡಿದ್ದಾರೆ.
ಯಾಕೆ ಲವ್ ಜಿಹಾದ್ ಗಂಭೀರ ಸಮಸ್ಯೆ ?
ಕರಾವಳಿಯಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಲವ್ ಜಿಹಾದ್ ಮೂಲಕ ಹಿಂದು ಯುವತಿಯರನ್ನು ಪ್ರೀತಿಸಿ ಮದುವೆಯಾಗುವುದು, ಆನಂತರ ಅವರನ್ನು ಇಸ್ಲಾಮಿಗೆ ಮತಾಂತರಿಸುವ ಕೃತ್ಯ ನಡೆದುಬಂದಿದೆ. ಕೆಲವು ಕಡೆ, ಹಿಂದು ಯುವತಿಯರಿಗೆ ಎರಡು ಮಕ್ಕಳು ಕರುಣಿಸಿ ನಡು ನೀರಿನಲ್ಲಿ ಕೈಬಿಟ್ಟು ಮುಸ್ಲಿಂ ಯುವಕರು ಪರಾರಿಯಾಗಿರುವ ಉದಾಹರಣೆಯೂ ಇದೆ. ಕೆಲವು ಯುವತಿಯರನ್ನು ಮದುವೆಯಾಗಿ ಮುಸ್ಲಿಂ ಉಗ್ರವಾದಿಗಳಾಗಿಸಿದ ನಿದರ್ಶನವೂ ಇದೆ. ಈ ರೀತಿಯ ಉದಾಹರಣೆ ಇರುವ ಕಾರಣಕ್ಕೆ ಹಿಂದು ಸಂಘಟನೆಗಳು ಲವ್ ಜಿಹಾದ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸರಕಾರಗಳಿಗೆ ಒತ್ತಡ ಹೇರುತ್ತ ಬಂದರೂ, ಅದಿನ್ನೂ ಸಾಧ್ಯವಾಗಿಲ್ಲ. ಲವ್ ಜಿಹಾದ್ ಅನ್ನುವುದು ಕಠೋರ ಪರಿಕಲ್ಪನೆಯಾಗಿದ್ದರೂ, ಭಾರತೀಯ ಅಪರಾಧ ಕಾನೂನಿನಲ್ಲಿ ಸ್ಪಷ್ಟತೆ ಇಲ್ಲದಿರುವುದರಿಂದ ಪೊಲೀಸರಿಗೂ ಕ್ರಮ ಕೈಗೊಳ್ಳುವುದು ಸಾಧ್ಯವಾಗಿಲ್ಲ.
Mangalore Love Jihad at Badiyadka in kasaragod, Hindu teacher marries muslim youth, sparks controversy. Hindu outfits have raged over the incident demanding the girl to come back home. But the boy has been backed by Muslim league organisations.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm