ಬ್ರೇಕಿಂಗ್ ನ್ಯೂಸ್
31-05-24 10:41 pm Mangalore Correspondent ಕರಾವಳಿ
ಮಂಗಳೂರು, ಮೇ 31: ಸಾರ್ವಜನಿಕ ರಸ್ತೆಯಲ್ಲಿ ನಮಾಝ್ ಮಾಡಿ ವಾಹನ ಹಾಗೂ ಜನಸಂಚಾರಕ್ಕೆ ಅಡ್ಡಿಪಡಿಸಿದರೂ ಆ ಕೇಸಿಗೆ ಬಿ ರಿಪೋರ್ಟ್ ಹಾಕಿದ ಪೊಲೀಸರು, ನಮಾಜ್ ಘಟನೆ ಬಗ್ಗೆ ಪ್ರಶ್ನೆ ಮಾಡಿದ ಶರಣ್ ಪಂಪುವೆಲ್ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಇಂತಹ ತಾರತಮ್ಯದ ಘಟನೆ ನಡೆದಿರುವುದು ಕಾಂಗ್ರೆಸಿನ ದುರಾಡಳಿತದ ಪರಮಾವಧಿಗೆ ಸಾಕ್ಷಿ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ.ಬ್ರಿಜೇಶ್ ಚೌಟ ಟೀಕಿಸಿದ್ದಾರೆ.
ಜನ ಸಂಚಾರಕ್ಕೆ ತೊಂದರೆಪಡಿಸಿ ನಮಾಜ್ ಮಾಡಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಸ್ವಯಂ ಆಗಿಯೇ ಪ್ರಕರಣ ದಾಖಲಿಸಿದ್ದರು. ಆದರೆ, ಇದರಿಂದ ಅಲ್ಪಸಂಖ್ಯಾತರಿಗೆ ನೋವಾಯ್ತು ಎನ್ನುವ ಕಾರಣವೊಡ್ಡಿ ಕಾಂಗ್ರೆಸ್ ನಾಯಕರು ಪೊಲೀಸ್ ಇಲಾಖೆ ಮೇಲೆ ಒತ್ತಡ ಹಾಕಿ ಕೇಸನ್ನೇ ಹಿಂಪಡೆಯುವಂತೆ ಮಾಡಿದ್ದು ವಿಪರ್ಯಾಸ.

ಅಲ್ಲದೆ, ಸುಮೋಟೊ ಪ್ರಕರಣ ದಾಖಲಿಸಿದ ಪೊಲೀಸ್ ಅಧಿಕಾರಿಯನ್ನು ರಜೆಯಲ್ಲಿ ಕಳುಹಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಪೊಲೀಸರ ಮನೋಸ್ಥೈರ್ಯವನ್ನೇ ಕುಗ್ಗಿಸುವಂತೆ ಮಾಡಿದೆ. ಇದಲ್ಲದೆ, ನಮಾಜ್ ಘಟನೆ ಮುಂದುವರಿದರೆ ಹನುಮಾನ್ ಚಾಲೀಸಾ ಪಠಣ ಮಾಡುತ್ತೇವೆ ಎಂದ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪುವೆಲ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಿ ಅಲ್ಪಸಂಖ್ಯಾತರನ್ನು ಖುಷಿಪಡಿಸುವ ಕೆಲಸ ಮಾಡಿದ್ದಾರೆ. ಆಮೂಲಕ ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ಗಟ್ಟಿಗೊಳಿಸಲು ಹೊರಟಂತಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಾಗಿನಿಂದ ಪೋಲಿಸ್ ಇಲಾಖೆಗೆ ಸ್ವಾತಂತ್ರ್ಯ ಇಲ್ಲದಾಗಿದೆ. ಪೊಲೀಸರು ತಮ್ಮ ಕರ್ತವ್ಯ ಪಾಲನೆ ಮಾಡುವುದಕ್ಕೂ ಕಾಂಗ್ರೆಸ್ ನಾಯಕರ ಅನುಮತಿ ಪಡೆದು ಮುಂದುವರಿಯುವ ಸ್ಥಿತಿಯಾಗಿದೆ. ಇಂತಹ ಬೆಳವಣಿಗೆಯಿಂದ ರಾಜ್ಯದಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆಯಾಗಿ ಸಾಮಾಜಿಕ ಅಶಾಂತಿ ನಿರ್ಮಾಣಕ್ಕೆ ಕಾರಣವಾಗಿದೆ. ಪೊಲೀಸರನ್ನೂ ಹಿಂದು ಸಂಘಟನೆಗಳ ಮೇಲೆ ಎತ್ತಿಕಟ್ಟಿ ಸಾಮರಸ್ಯಕ್ಕೆ ಕೊಳ್ಳಿಯಿಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರವೇ ಮಾಡಿದೆ ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Mangalore Namaz in road, BJP Brijesh Chowta slams police over case against Sharan Pumpwell, says police have become puppets of congress government.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am