ಬ್ರೇಕಿಂಗ್ ನ್ಯೂಸ್
31-05-24 10:49 pm Mangalore Correspondent ಕರಾವಳಿ
ಮಂಗಳೂರು, ಮೇ 31: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಹಿಂದುತ್ವವಾದಿ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರನ್ನು ದಮನಿಸುವ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ ನೀತಿ ಇದೇ ರೀತಿ ಮುಂದುವರಿದರೆ ರಾಜ್ಯಾದ್ಯಂತ ಹೋರಾಟ ರೂಪಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ರಾಜ್ಯ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶಾಂತಿ ಕಾಪಾಡಬೇಕಾಗಿರುವ ಸರಕಾರ ಮತ್ತು ಪೊಲೀಸ್ ಇಲಾಖೆ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಪೊಲೀಸರು ಸ್ವಾತಂತ್ರ್ಯ ಕಳಕೊಂಡು ಯಾರದ್ದೋ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ರಸ್ತೆಯಲ್ಲಿ ನಮಾಜ್ ಮಾಡಿದ್ದಕ್ಕೆ ಕೇಸು ದಾಖಲಿಸಿದ್ದ ಅದೇ ಪೊಲೀಸರು ಮೇಲಿನಿಂದ ಒತ್ತಡ ಬರುತ್ತಲೇ ಕೇಸು ಹಿಂಪಡೆಯುತ್ತಾರೆ. ಅಲ್ಲದೆ, ಈ ಬಗ್ಗೆ ಕ್ರಮಕ್ಕೆ ಆಗ್ರಹಿಸಿದ್ದ ಹಿಂದು ಸಂಘಟನೆ ಮುಖಂಡ ಶರಣ್ ಪಂಪ್ವೆಲ್ ಜಾಮೀನು ರಹಿತ ಕೇಸು ದಾಖಲಿಸಿದ್ದಾರೆ. ಕೇಸ್ ದಾಖಲಿಸಿರುವುದನ್ನು ಕೂಡಲೇ ರದ್ದುಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಯುವ ಜನರನ್ನು ಒಗ್ಗೂಡಿಸಿ, ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪೊಲೀಸರು ಕಾಂಗ್ರೆಸ್ ನಾಯಕರ ಒತ್ತಡದಿಂದ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದವರು ಮನವಿ ಸಲ್ಲಿಸಿದ ಬೆನ್ನಲ್ಲೇ ನಮಾಜ್ ಪ್ರಕರಣಕ್ಕೆ ಸಂಬಂಧಿಸಿ ಇಲಾಖೆ ಬಿ ರಿಪೋರ್ಟ್ ಸಲ್ಲಿಸಿದೆ. ಆದರೆ, ಈ ರೀತಿ ರಸ್ತೆ ಮೇಲೆ ನಮಾಜ್ ಮಾಡಿರುವುದು ತಪ್ಪು, ಇದೇ ರೀತಿ ಮುಂದುವರಿದಲ್ಲಿ ಹನುಮಾನ್ ಚಾಲೀಸಾ ಪಠಿಸುವುದಾಗಿ ಹೇಳಿರುವ ಶರಣ್ ಪಂಪ್ವೆಲ್ ಮೇಲೆ ಪ್ರಕರಣ ದಾಖಲಿಸಿದ್ದಾರೆ. ರಸ್ತೆಯಲ್ಲಿ ನಮಾಜ್ ಕುರಿತಂತೆ ಮಸೀದಿ ಕಾರ್ಯದರ್ಶಿಯೇ ಇದು ಸರಿಯಲ್ಲ ಎಂದು ಒಪ್ಪಿಕೊಂಡಿದ್ದಾರೆ. ಇದೀಗ ಕೇಸು ಹಿಂಪಡೆದು ಆ ರೀತಿ ಮಾಡಿದ್ದು ಸರಿ ಎಂದು ಪೊಲೀಸರು ಪರೋಕ್ಷವಾಗಿ ಒಪ್ಪಿಕೊಂಡ ರೀತಿ ಆಗಿದೆ. ಇದರಿಂದ ಪೊಲೀಸರು ಅಪನಂಬಿಕೆ ಎದುರಿಸುವಂತಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ನಿತಿನ್ ಕುಮಾರ್, ಜಗದೀಶ್ ಶೇಣವ, ಪ್ರೇಮಾನಂದ ಶೆಟ್ಟಿ, ಅರುಣ್ ಜಿ. ಶೇಟ್, ನಂದನ್ ಮಲ್ಯ ಉಪಸ್ಥಿತರಿದ್ದರು.
Namaz in road mangalore, BJP Satish Kumapla slams police department, congress government is trying to disturb peace in Karnataka he added.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm