ಬ್ರೇಕಿಂಗ್ ನ್ಯೂಸ್
31-05-24 10:49 pm Mangalore Correspondent ಕರಾವಳಿ
ಮಂಗಳೂರು, ಮೇ 31: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಹಿಂದುತ್ವವಾದಿ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರನ್ನು ದಮನಿಸುವ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ ನೀತಿ ಇದೇ ರೀತಿ ಮುಂದುವರಿದರೆ ರಾಜ್ಯಾದ್ಯಂತ ಹೋರಾಟ ರೂಪಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ರಾಜ್ಯ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶಾಂತಿ ಕಾಪಾಡಬೇಕಾಗಿರುವ ಸರಕಾರ ಮತ್ತು ಪೊಲೀಸ್ ಇಲಾಖೆ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಪೊಲೀಸರು ಸ್ವಾತಂತ್ರ್ಯ ಕಳಕೊಂಡು ಯಾರದ್ದೋ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ರಸ್ತೆಯಲ್ಲಿ ನಮಾಜ್ ಮಾಡಿದ್ದಕ್ಕೆ ಕೇಸು ದಾಖಲಿಸಿದ್ದ ಅದೇ ಪೊಲೀಸರು ಮೇಲಿನಿಂದ ಒತ್ತಡ ಬರುತ್ತಲೇ ಕೇಸು ಹಿಂಪಡೆಯುತ್ತಾರೆ. ಅಲ್ಲದೆ, ಈ ಬಗ್ಗೆ ಕ್ರಮಕ್ಕೆ ಆಗ್ರಹಿಸಿದ್ದ ಹಿಂದು ಸಂಘಟನೆ ಮುಖಂಡ ಶರಣ್ ಪಂಪ್ವೆಲ್ ಜಾಮೀನು ರಹಿತ ಕೇಸು ದಾಖಲಿಸಿದ್ದಾರೆ. ಕೇಸ್ ದಾಖಲಿಸಿರುವುದನ್ನು ಕೂಡಲೇ ರದ್ದುಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಯುವ ಜನರನ್ನು ಒಗ್ಗೂಡಿಸಿ, ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪೊಲೀಸರು ಕಾಂಗ್ರೆಸ್ ನಾಯಕರ ಒತ್ತಡದಿಂದ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದವರು ಮನವಿ ಸಲ್ಲಿಸಿದ ಬೆನ್ನಲ್ಲೇ ನಮಾಜ್ ಪ್ರಕರಣಕ್ಕೆ ಸಂಬಂಧಿಸಿ ಇಲಾಖೆ ಬಿ ರಿಪೋರ್ಟ್ ಸಲ್ಲಿಸಿದೆ. ಆದರೆ, ಈ ರೀತಿ ರಸ್ತೆ ಮೇಲೆ ನಮಾಜ್ ಮಾಡಿರುವುದು ತಪ್ಪು, ಇದೇ ರೀತಿ ಮುಂದುವರಿದಲ್ಲಿ ಹನುಮಾನ್ ಚಾಲೀಸಾ ಪಠಿಸುವುದಾಗಿ ಹೇಳಿರುವ ಶರಣ್ ಪಂಪ್ವೆಲ್ ಮೇಲೆ ಪ್ರಕರಣ ದಾಖಲಿಸಿದ್ದಾರೆ. ರಸ್ತೆಯಲ್ಲಿ ನಮಾಜ್ ಕುರಿತಂತೆ ಮಸೀದಿ ಕಾರ್ಯದರ್ಶಿಯೇ ಇದು ಸರಿಯಲ್ಲ ಎಂದು ಒಪ್ಪಿಕೊಂಡಿದ್ದಾರೆ. ಇದೀಗ ಕೇಸು ಹಿಂಪಡೆದು ಆ ರೀತಿ ಮಾಡಿದ್ದು ಸರಿ ಎಂದು ಪೊಲೀಸರು ಪರೋಕ್ಷವಾಗಿ ಒಪ್ಪಿಕೊಂಡ ರೀತಿ ಆಗಿದೆ. ಇದರಿಂದ ಪೊಲೀಸರು ಅಪನಂಬಿಕೆ ಎದುರಿಸುವಂತಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ನಿತಿನ್ ಕುಮಾರ್, ಜಗದೀಶ್ ಶೇಣವ, ಪ್ರೇಮಾನಂದ ಶೆಟ್ಟಿ, ಅರುಣ್ ಜಿ. ಶೇಟ್, ನಂದನ್ ಮಲ್ಯ ಉಪಸ್ಥಿತರಿದ್ದರು.
Namaz in road mangalore, BJP Satish Kumapla slams police department, congress government is trying to disturb peace in Karnataka he added.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm