ಬ್ರೇಕಿಂಗ್ ನ್ಯೂಸ್
03-06-24 09:37 pm Mangalore Correspondent ಕರಾವಳಿ
ಪುತ್ತೂರು, ಜೂನ್ 3: ಸೋಮವಾರ ಸಂಜೆ ಪುತ್ತೂರು ಪೇಟೆಯಲ್ಲಿ ಮೇಘಸ್ಫೋಟ ಆದ ರೀತಿ ಮಳೆಯಾಗಿದೆ. ಸಂಜೆ 4 ಗಂಟೆಯಿಂದ 45 ನಿಮಿಷ ಕಾಲ ಭಾರೀ ಮಳೆ ಸುರಿದಿದ್ದು ಪುತ್ತೂರು ಪೇಟೆ ಇಡೀ ಮಳೆನೀರಿನಲ್ಲಿ ತೋಯ್ದು ಹೋಗಿದೆ. ಪುತ್ತೂರು ಪೇಟೆಯ ಜನರ ಪ್ರಕಾರ, ಇತ್ತೀಚಿನ ವರ್ಷಗಳಲ್ಲಿ ಕಂಡರಿಯದ ರೀತಿ ಮಳೆ ಆಗಿದ್ಯಂತೆ.
ಒಂದೇ ಸಮನೆ ಧೋ ಎಂದು ಮಳೆ ಸುರಿದಿದ್ದು, ರಸ್ತೆಯಲ್ಲಿ ನೀರು ನದಿಯಂತೆ ತುಂಬಿಕೊಂಡಿದೆ. ದರ್ಭೆಯಲ್ಲಿ ಆಟೋ ರಿಕ್ಷಾಗಳು, ದ್ವಿಚಕ್ರ ವಾಹನಗಳು ಸಾಗಲು ಸಾಧ್ಯವಾಗದೆ ನಿಂತುಬಿಟ್ಟಿದ್ದವು. ಕೋರ್ಟ್ ರೋಡಿನಲ್ಲಿ ತಗ್ಗಿನ ಪ್ರದೇಶದಲ್ಲಿದ್ದ ಜುವೆಲ್ಲರಿ ಅಂಗಡಿಗೆ ನೀರು ನುಗ್ಗಿದ್ದು ಮೊಣಕಾಲು ಮುಳುಗುವಷ್ಟು ಮಳೆ ನೀರು ಶೇಖರಗೊಂಡಿತ್ತು.




ಕೋರ್ಟ್ ರೋಡ್, ಮಹಾಲಿಂಗೇಶ್ವರ ದೇವಸ್ಥಾನ ಆಸುಪಾಸಿನಲ್ಲಿ ತಗ್ಗಿನ ಜಾಗದ ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ. ದೇವಸ್ಥಾನ ಪರಿಸರದಲ್ಲಿ ಜನರ ಸಂಚಾರಕ್ಕೆ ತೊಡಕಾಗಿದೆ. ಆದರೆ ಅರ್ಧ ಗಂಟೆಯ ಮಳೆಯ ಬಳಿಕ ಮಳೆಯೇ ಬಂದಿಲ್ಲವೇನೋ ಎನ್ನುವಂತೆ ಹಠಾತ್ ನಿಂತುಬಿಟ್ಟಿದೆ. ಪುತ್ತೂರು ಆಸುಪಾಸಿನಲ್ಲಿ ಅಷ್ಟು ಮಳೆಯಾಗಿಲ್ಲ. ಒಂದೇ ಕಡೆ ಮಳೆಯಾಗಿರುವುದು ಭಾರೀ ವಿಶೇಷ ಅಂತ ಜನರು ಮಾತನಾಡಿಕೊಳ್ಳುತ್ತಿದ್ದಾರೆ.
ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಸಂಜೆಯ ಹೊತ್ತಿಗೆ ಕಪ್ಪಗಿನ ಮೋಡ ಆವರಿಸಿದ್ದರಿಂದ ಭಾರೀ ಮಳೆಯಾಗುತ್ತೆ ಅನ್ನುವ ಸುಳಿವು ನೀಡಿತ್ತು. ಆದರೆ ಮಂಗಳೂರಿನಲ್ಲಿ ಹನಿ ಹನಿ ಸುರಿದಿದ್ದು ನೆಲ ಒದ್ದೆಯಾಗುವಷ್ಟು ಮಾತ್ರ ಮಳೆಯಾಗಿದೆ.
Heavy rains in Puttur causes havoc, water enters shops, most of the shops were filled with shops causing huge damage to many business people.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 09:10 pm
HK News Desk
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm