ಬ್ರೇಕಿಂಗ್ ನ್ಯೂಸ್
03-06-24 09:37 pm Mangalore Correspondent ಕರಾವಳಿ
ಪುತ್ತೂರು, ಜೂನ್ 3: ಸೋಮವಾರ ಸಂಜೆ ಪುತ್ತೂರು ಪೇಟೆಯಲ್ಲಿ ಮೇಘಸ್ಫೋಟ ಆದ ರೀತಿ ಮಳೆಯಾಗಿದೆ. ಸಂಜೆ 4 ಗಂಟೆಯಿಂದ 45 ನಿಮಿಷ ಕಾಲ ಭಾರೀ ಮಳೆ ಸುರಿದಿದ್ದು ಪುತ್ತೂರು ಪೇಟೆ ಇಡೀ ಮಳೆನೀರಿನಲ್ಲಿ ತೋಯ್ದು ಹೋಗಿದೆ. ಪುತ್ತೂರು ಪೇಟೆಯ ಜನರ ಪ್ರಕಾರ, ಇತ್ತೀಚಿನ ವರ್ಷಗಳಲ್ಲಿ ಕಂಡರಿಯದ ರೀತಿ ಮಳೆ ಆಗಿದ್ಯಂತೆ.
ಒಂದೇ ಸಮನೆ ಧೋ ಎಂದು ಮಳೆ ಸುರಿದಿದ್ದು, ರಸ್ತೆಯಲ್ಲಿ ನೀರು ನದಿಯಂತೆ ತುಂಬಿಕೊಂಡಿದೆ. ದರ್ಭೆಯಲ್ಲಿ ಆಟೋ ರಿಕ್ಷಾಗಳು, ದ್ವಿಚಕ್ರ ವಾಹನಗಳು ಸಾಗಲು ಸಾಧ್ಯವಾಗದೆ ನಿಂತುಬಿಟ್ಟಿದ್ದವು. ಕೋರ್ಟ್ ರೋಡಿನಲ್ಲಿ ತಗ್ಗಿನ ಪ್ರದೇಶದಲ್ಲಿದ್ದ ಜುವೆಲ್ಲರಿ ಅಂಗಡಿಗೆ ನೀರು ನುಗ್ಗಿದ್ದು ಮೊಣಕಾಲು ಮುಳುಗುವಷ್ಟು ಮಳೆ ನೀರು ಶೇಖರಗೊಂಡಿತ್ತು.




ಕೋರ್ಟ್ ರೋಡ್, ಮಹಾಲಿಂಗೇಶ್ವರ ದೇವಸ್ಥಾನ ಆಸುಪಾಸಿನಲ್ಲಿ ತಗ್ಗಿನ ಜಾಗದ ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ. ದೇವಸ್ಥಾನ ಪರಿಸರದಲ್ಲಿ ಜನರ ಸಂಚಾರಕ್ಕೆ ತೊಡಕಾಗಿದೆ. ಆದರೆ ಅರ್ಧ ಗಂಟೆಯ ಮಳೆಯ ಬಳಿಕ ಮಳೆಯೇ ಬಂದಿಲ್ಲವೇನೋ ಎನ್ನುವಂತೆ ಹಠಾತ್ ನಿಂತುಬಿಟ್ಟಿದೆ. ಪುತ್ತೂರು ಆಸುಪಾಸಿನಲ್ಲಿ ಅಷ್ಟು ಮಳೆಯಾಗಿಲ್ಲ. ಒಂದೇ ಕಡೆ ಮಳೆಯಾಗಿರುವುದು ಭಾರೀ ವಿಶೇಷ ಅಂತ ಜನರು ಮಾತನಾಡಿಕೊಳ್ಳುತ್ತಿದ್ದಾರೆ.
ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಸಂಜೆಯ ಹೊತ್ತಿಗೆ ಕಪ್ಪಗಿನ ಮೋಡ ಆವರಿಸಿದ್ದರಿಂದ ಭಾರೀ ಮಳೆಯಾಗುತ್ತೆ ಅನ್ನುವ ಸುಳಿವು ನೀಡಿತ್ತು. ಆದರೆ ಮಂಗಳೂರಿನಲ್ಲಿ ಹನಿ ಹನಿ ಸುರಿದಿದ್ದು ನೆಲ ಒದ್ದೆಯಾಗುವಷ್ಟು ಮಾತ್ರ ಮಳೆಯಾಗಿದೆ.
Heavy rains in Puttur causes havoc, water enters shops, most of the shops were filled with shops causing huge damage to many business people.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm