ಬ್ರೇಕಿಂಗ್ ನ್ಯೂಸ್
03-06-24 09:37 pm Mangalore Correspondent ಕರಾವಳಿ
ಪುತ್ತೂರು, ಜೂನ್ 3: ಸೋಮವಾರ ಸಂಜೆ ಪುತ್ತೂರು ಪೇಟೆಯಲ್ಲಿ ಮೇಘಸ್ಫೋಟ ಆದ ರೀತಿ ಮಳೆಯಾಗಿದೆ. ಸಂಜೆ 4 ಗಂಟೆಯಿಂದ 45 ನಿಮಿಷ ಕಾಲ ಭಾರೀ ಮಳೆ ಸುರಿದಿದ್ದು ಪುತ್ತೂರು ಪೇಟೆ ಇಡೀ ಮಳೆನೀರಿನಲ್ಲಿ ತೋಯ್ದು ಹೋಗಿದೆ. ಪುತ್ತೂರು ಪೇಟೆಯ ಜನರ ಪ್ರಕಾರ, ಇತ್ತೀಚಿನ ವರ್ಷಗಳಲ್ಲಿ ಕಂಡರಿಯದ ರೀತಿ ಮಳೆ ಆಗಿದ್ಯಂತೆ.
ಒಂದೇ ಸಮನೆ ಧೋ ಎಂದು ಮಳೆ ಸುರಿದಿದ್ದು, ರಸ್ತೆಯಲ್ಲಿ ನೀರು ನದಿಯಂತೆ ತುಂಬಿಕೊಂಡಿದೆ. ದರ್ಭೆಯಲ್ಲಿ ಆಟೋ ರಿಕ್ಷಾಗಳು, ದ್ವಿಚಕ್ರ ವಾಹನಗಳು ಸಾಗಲು ಸಾಧ್ಯವಾಗದೆ ನಿಂತುಬಿಟ್ಟಿದ್ದವು. ಕೋರ್ಟ್ ರೋಡಿನಲ್ಲಿ ತಗ್ಗಿನ ಪ್ರದೇಶದಲ್ಲಿದ್ದ ಜುವೆಲ್ಲರಿ ಅಂಗಡಿಗೆ ನೀರು ನುಗ್ಗಿದ್ದು ಮೊಣಕಾಲು ಮುಳುಗುವಷ್ಟು ಮಳೆ ನೀರು ಶೇಖರಗೊಂಡಿತ್ತು.
ಕೋರ್ಟ್ ರೋಡ್, ಮಹಾಲಿಂಗೇಶ್ವರ ದೇವಸ್ಥಾನ ಆಸುಪಾಸಿನಲ್ಲಿ ತಗ್ಗಿನ ಜಾಗದ ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ. ದೇವಸ್ಥಾನ ಪರಿಸರದಲ್ಲಿ ಜನರ ಸಂಚಾರಕ್ಕೆ ತೊಡಕಾಗಿದೆ. ಆದರೆ ಅರ್ಧ ಗಂಟೆಯ ಮಳೆಯ ಬಳಿಕ ಮಳೆಯೇ ಬಂದಿಲ್ಲವೇನೋ ಎನ್ನುವಂತೆ ಹಠಾತ್ ನಿಂತುಬಿಟ್ಟಿದೆ. ಪುತ್ತೂರು ಆಸುಪಾಸಿನಲ್ಲಿ ಅಷ್ಟು ಮಳೆಯಾಗಿಲ್ಲ. ಒಂದೇ ಕಡೆ ಮಳೆಯಾಗಿರುವುದು ಭಾರೀ ವಿಶೇಷ ಅಂತ ಜನರು ಮಾತನಾಡಿಕೊಳ್ಳುತ್ತಿದ್ದಾರೆ.
ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಸಂಜೆಯ ಹೊತ್ತಿಗೆ ಕಪ್ಪಗಿನ ಮೋಡ ಆವರಿಸಿದ್ದರಿಂದ ಭಾರೀ ಮಳೆಯಾಗುತ್ತೆ ಅನ್ನುವ ಸುಳಿವು ನೀಡಿತ್ತು. ಆದರೆ ಮಂಗಳೂರಿನಲ್ಲಿ ಹನಿ ಹನಿ ಸುರಿದಿದ್ದು ನೆಲ ಒದ್ದೆಯಾಗುವಷ್ಟು ಮಾತ್ರ ಮಳೆಯಾಗಿದೆ.
Heavy rains in Puttur causes havoc, water enters shops, most of the shops were filled with shops causing huge damage to many business people.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm