ಬ್ರೇಕಿಂಗ್ ನ್ಯೂಸ್
03-06-24 09:37 pm Mangalore Correspondent ಕರಾವಳಿ
ಪುತ್ತೂರು, ಜೂನ್ 3: ಸೋಮವಾರ ಸಂಜೆ ಪುತ್ತೂರು ಪೇಟೆಯಲ್ಲಿ ಮೇಘಸ್ಫೋಟ ಆದ ರೀತಿ ಮಳೆಯಾಗಿದೆ. ಸಂಜೆ 4 ಗಂಟೆಯಿಂದ 45 ನಿಮಿಷ ಕಾಲ ಭಾರೀ ಮಳೆ ಸುರಿದಿದ್ದು ಪುತ್ತೂರು ಪೇಟೆ ಇಡೀ ಮಳೆನೀರಿನಲ್ಲಿ ತೋಯ್ದು ಹೋಗಿದೆ. ಪುತ್ತೂರು ಪೇಟೆಯ ಜನರ ಪ್ರಕಾರ, ಇತ್ತೀಚಿನ ವರ್ಷಗಳಲ್ಲಿ ಕಂಡರಿಯದ ರೀತಿ ಮಳೆ ಆಗಿದ್ಯಂತೆ.
ಒಂದೇ ಸಮನೆ ಧೋ ಎಂದು ಮಳೆ ಸುರಿದಿದ್ದು, ರಸ್ತೆಯಲ್ಲಿ ನೀರು ನದಿಯಂತೆ ತುಂಬಿಕೊಂಡಿದೆ. ದರ್ಭೆಯಲ್ಲಿ ಆಟೋ ರಿಕ್ಷಾಗಳು, ದ್ವಿಚಕ್ರ ವಾಹನಗಳು ಸಾಗಲು ಸಾಧ್ಯವಾಗದೆ ನಿಂತುಬಿಟ್ಟಿದ್ದವು. ಕೋರ್ಟ್ ರೋಡಿನಲ್ಲಿ ತಗ್ಗಿನ ಪ್ರದೇಶದಲ್ಲಿದ್ದ ಜುವೆಲ್ಲರಿ ಅಂಗಡಿಗೆ ನೀರು ನುಗ್ಗಿದ್ದು ಮೊಣಕಾಲು ಮುಳುಗುವಷ್ಟು ಮಳೆ ನೀರು ಶೇಖರಗೊಂಡಿತ್ತು.




ಕೋರ್ಟ್ ರೋಡ್, ಮಹಾಲಿಂಗೇಶ್ವರ ದೇವಸ್ಥಾನ ಆಸುಪಾಸಿನಲ್ಲಿ ತಗ್ಗಿನ ಜಾಗದ ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ. ದೇವಸ್ಥಾನ ಪರಿಸರದಲ್ಲಿ ಜನರ ಸಂಚಾರಕ್ಕೆ ತೊಡಕಾಗಿದೆ. ಆದರೆ ಅರ್ಧ ಗಂಟೆಯ ಮಳೆಯ ಬಳಿಕ ಮಳೆಯೇ ಬಂದಿಲ್ಲವೇನೋ ಎನ್ನುವಂತೆ ಹಠಾತ್ ನಿಂತುಬಿಟ್ಟಿದೆ. ಪುತ್ತೂರು ಆಸುಪಾಸಿನಲ್ಲಿ ಅಷ್ಟು ಮಳೆಯಾಗಿಲ್ಲ. ಒಂದೇ ಕಡೆ ಮಳೆಯಾಗಿರುವುದು ಭಾರೀ ವಿಶೇಷ ಅಂತ ಜನರು ಮಾತನಾಡಿಕೊಳ್ಳುತ್ತಿದ್ದಾರೆ.
ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಸಂಜೆಯ ಹೊತ್ತಿಗೆ ಕಪ್ಪಗಿನ ಮೋಡ ಆವರಿಸಿದ್ದರಿಂದ ಭಾರೀ ಮಳೆಯಾಗುತ್ತೆ ಅನ್ನುವ ಸುಳಿವು ನೀಡಿತ್ತು. ಆದರೆ ಮಂಗಳೂರಿನಲ್ಲಿ ಹನಿ ಹನಿ ಸುರಿದಿದ್ದು ನೆಲ ಒದ್ದೆಯಾಗುವಷ್ಟು ಮಾತ್ರ ಮಳೆಯಾಗಿದೆ.
Heavy rains in Puttur causes havoc, water enters shops, most of the shops were filled with shops causing huge damage to many business people.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm