ಬ್ರೇಕಿಂಗ್ ನ್ಯೂಸ್
04-06-24 09:26 pm HK News Desk ಕರಾವಳಿ
ಮಂಗಳೂರು, ಜೂನ್.4: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಮುಂಬೈ ಏರ್ಪೋರ್ಟ್ ನಲ್ಲಿ ಬಂಧಿಸಿದ್ದಾರೆ. ರಿಯಾಜ್ ಯೂಸುಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಬಂಧಿತ ವ್ಯಕ್ತಿ. ಈತ ವಿದೇಶಕ್ಕೆ ಪರಾರಿಯಾಗಲು ಮುಂಬೈ ಏರ್ಪೋರ್ಟ್ ಬಂದಿದ್ದಾಗಲೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮುಸ್ತಫಾ ಪೈಚಾರ್ ಬಂಧನವಾದ ಒಂದೇ ತಿಂಗಳಲ್ಲಿ ಮತ್ತೊಬ್ಬ ತಲೆಮರೆಸಿಕೊಂಡ ಆರೋಪಿಯನ್ನು ಬಂಧಿಸಲಾಗಿದೆ. ರಿಯಾಜ್ ಬಂಧನದೊಂದಿಗೆ ಒಟ್ಟು ಬಂಧಿತರ ಸಂಖ್ಯೆ 19ಕ್ಕೇರಿದೆ. ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮುಸ್ತಫಾ ಪೈಚಾರ್ ಮೇ 10ರಂದು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಎನ್ಐಎ ಬಲೆಗೆ ಬಿದ್ದಿದ್ದ. ಆತನ ಜೊತೆಗೆ ಆಶ್ರಯ ನೀಡಿದ್ದ ಮನ್ಸೂರ್ ಪಾಶಾ ಎಂಬಾತನೂ ಬಂಧಿತನಾಗಿದ್ದ.
ಮುಸ್ತಫಾ ಪೈಚಾರ್ ಪಿಎಫ್ಐ ಸಂಘಟನೆಯ ಪುತ್ತೂರು ಜಿಲ್ಲಾ ಸೆಕ್ರೆಟರಿಯಾಗಿದ್ದ. ಅಲ್ಲದೆ, ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ನಡೆಸಿದ್ದವರಲ್ಲಿ ಪ್ರಮುಖನಾಗಿದ್ದ. ಪಿಎಫ್ಐ ಹಂತಕರ ಸರ್ವಿಸ್ ಟೀಮಿನ ಮುಖ್ಯಸ್ಥನಾಗಿದ್ದ. ಪ್ರವೀಣ್ ಕೊಲೆಗೆ ಮುಸ್ತಫಾನೇ ಇತರ ಆರೋಪಿಗಳನ್ನು ರೆಡಿ ಮಾಡಿಸಿದ್ದಲ್ಲದೆ, ಅವರು ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದ. ಎರಡು ವರ್ಷಗಳ ಬಳಿಕ ಮುಸ್ತಫಾನನ್ನು ಸಕಲೇಶಪುರದ ಕಾಫಿ ಎಸ್ಟೇಟಿನಲ್ಲಿ ಮೇ 10ರಂದು ಎನ್ಐಎ ಅಧಿಕಾರಿಗಳು ಬಂಧನ ಮಾಡಿದ್ದರು. ಎನ್ಐಎ ಅಧಿಕಾರಿಗಳು ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಈವರೆಗೆ 21 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
The National Investigation Agency (NIA) on Tuesday has made another arrest in the BJP leader Praveen Nettaru murder case which took place in Karnataka in July 2022 According to a statement issued by the NIA, the accused Riyaz Yousaf Haaralli alias Riyaz has been arrested from Mumbai airport while he was trying to sneak abroad.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
22-06-25 07:48 pm
HK News Desk
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
23-06-25 11:47 am
Udupi Correspondent
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm