ಬ್ರೇಕಿಂಗ್ ನ್ಯೂಸ್
06-06-24 05:03 pm Mangalore Correspondent ಕರಾವಳಿ
ಮಂಗಳೂರು, ಜೂನ್.6: ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಎರಡನೇ ಸುತ್ತಿನ ಮುಕ್ತಾಯದ ವೇಳೆಗೆ ಜೆಡಿಎಸ್ನ ಎಸ್.ಎಲ್. ಭೋಜೇಗೌಡ 3,069 ಮತಗಳಿಂದ ಮುನ್ನಡೆ ಗಳಿಸಿದ್ದಾರೆ. ಆಮೂಲಕ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಭೋಜೇಗೌಡ ಗೆಲ್ಲುವುದು ಖಚಿತವಾಗಿದೆ.
ಮೈಸೂರು ವಿಭಾಗೀಯ ಕಚೇರಿಯಲ್ಲಿ ಮತ ಎಣಿಕೆ ನಡೆಯುತ್ತಿದ್ದು ಎರಡು ಸುತ್ತಿನ ಮತ ಎಣಿಕೆಯ ಮುಕ್ತಾಯದಲ್ಲಿ ಮೈತ್ರಿ ಅಭ್ಯರ್ಥಿ ಭೋಜೇಗೌಡ 6,645 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಕುಮಾರ್ 3,576 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ, ಮಂಗಳೂರಿನ ಹರೀಶ್ ಆಚಾರ್ಯ 1,681 ಮತಗಳನ್ನು ಗಳಿಸಿದ್ದಾರೆ.
ಈವರೆಗೆ ಒಟ್ಟು 14,000 ಮತಗಳನ್ನು ಎಣಿಕೆ ಮಾಡಲಾಗಿದ್ದು, ಅದರಲ್ಲಿ 560 ಮತಗಳು ತಿರಸ್ಕೃತಗೊಂಡಿವೆ ಎಂದು ಚುನಾವಣಾಧಿಕಾರಿ ಜಿ.ಸಿ. ಪ್ರಕಾಶ್ ತಿಳಿಸಿದ್ದಾರೆ.
ಐದು ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 23402 ಮತದಾರರಿದ್ದು ಈ ಪೈಕಿ 19320 ಮತದಾರರು ಮತ ಚಲಾವಣೆ ಮಾಡಿದ್ದರು. ಒಟ್ಟಾರೆಯಾಗಿ 82.56% ರಷ್ಟು ಮತದಾನ ದಾಖಲಾಗಿತ್ತು. ಎರಡು ಸುತ್ತಿನಲ್ಲಿ ಭೋಜೇಗೌಡ ಅತಿ ಹೆಚ್ಚು ಮತ ಗಳಿಸಿರುವುದರಿಂದ ಬಹುತೇಕ ಅವರೇ ಗೆಲುವು ದಾಖಲಿಸಲಿದ್ದಾರೆ. ಯಾವುದೇ ಅಭ್ಯರ್ಥಿ ನಿಕಟ ಸ್ಪರ್ಧೆ ಒಡ್ಡಿದಲ್ಲಿ ಮಾತ್ರ ಎರಡನೇ ಪ್ರಾಶಸ್ತ್ಯದ ಮತಗಳು ಗಣನೆಗೆ ಬರುತ್ತದೆ. ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಪೈಪೋಟಿ ನೀಡುವಷ್ಟು ಮತ ಪಡೆಯುವುದಕ್ಕೂ ವಿಫಲರಾಗಿದ್ದಾರೆ.
ಪದವೀಧರ ಕ್ಷೇತ್ರದ ಮತ ಎಣಿಕೆ ಮಧ್ಯಾಹ್ನ 3 ಗಂಟೆಯ ನಂತರ ನಡೆದಿದ್ದು ಹೀಗಾಗಿ ಫಲಿತಾಂಶ ಬರುವಾಗಲೂ ವಿಳಂಬವಾಗುವ ಸಾಧ್ಯತೆಯಿದೆ. ನೈರುತ್ಯ ವಿಧಾನ ಪರಿಷತ್ ಕ್ಷೇತ್ರ ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಕೊಡಗು, ಶಿವಮೊಗ್ಗ, ಉಡುಪಿ ಮತ್ತು ದಾವಣಗೆರೆ ಜಿಲ್ಲೆಯ ಎರಡು ತಾಲೂಕುಗಳನ್ನು ಒಳಗೊಂಡಿದೆ. ನೈಋತ್ಯ ಪದವೀಧರ ಕ್ಷೇತ್ರದ ಮತದಾರರ ಸಂಖ್ಯೆ 85089 ಮತದಾರರಿದ್ದು ಈ ಪೈಕಿ 66529 ಮಂದಿ ಮತ ಚಲಾವಣೆ ಮಾಡಿದ್ದರು. ಒಟ್ಟು 78.19% ರಷ್ಟು ಮತದಾನ ಆಗಿತ್ತು. 10 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದು ಬಿಜೆಪಿಯ ಡಾ. ಧನಂಜಯ ಸರ್ಜಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ನಡುವೆ ನೇರ ಸ್ಪರ್ಧೆ ಇದೆ. ಬಿಜೆಪಿ ಟಿಕೆಟ್ ಸಿಗದ ಕಾರಣ ಮಾಜಿ ಶಾಸಕ ರಘುಪತಿ ಭಟ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರಿಂದ ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ.
Karnataka vidhan parishad election, Bhojegowda leading with majority votes.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm