ಬ್ರೇಕಿಂಗ್ ನ್ಯೂಸ್
10-06-24 03:57 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಮಂಗಳೂರು- ಬೆಂಗಳೂರು ಸಂಪರ್ಕದ ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ರಸ್ತೆ ಹಾಳಾಗಿರುವ ಬಗ್ಗೆ ಹೆದ್ದಾರಿ ಅಧಿಕಾರಿಗಳ ಜೊತೆಗಿನ ರಿವೀವ್ ಮೀಟಿಂಗಲ್ಲಿ ಕ್ಲಾಸ್ ತೆಗೆದುಕೊಂಡಿದ್ದೇನೆ. 2-3 ದಿನದಲ್ಲಿ ರಸ್ತೆಯನ್ನು ಸಂಚಾರ ಯೋಗ್ಯ ಮಾಡಬೇಕೆಂದು ಸೂಚನೆ ನೀಡಿದ್ದೇನೆ. ಮತ್ತೆ ರಸ್ತೆ ಹಾಳಾದರೆ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳಬೇಕೆಂದು ತಿಳಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಕಲ್ಲಡ್ಕ ರಸ್ತೆ ಹದಗೆಟ್ಟ ಬಗ್ಗೆ ಪ್ರಶ್ನೆ ಎತ್ತಿದಾಗ, ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಪುಂಜಾಲಕಟ್ಟೆ- ಚಾರ್ಮಾಡಿ ಹೆದ್ದಾರಿಯಲ್ಲೂ ಕಾಮಗಾರಿ ಆಗ್ತಾ ಇದೆ. ರಸ್ತೆ ಅಗೆದು ಹಾಕಿರುವಲ್ಲಿ ಅಪಘಾತ ಆಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.


ಪುತ್ತೂರು ಸುಬ್ರಹ್ಮಣ್ಯ ಭಾಗದಲ್ಲಿ ಸಿಡಿಲು ಬಡಿದು ಆರೇಳು ಮಂದಿ ಸಾವು ಆಗಿದೆ. ಈ ಬಗ್ಗೆ ಗಂಭೀರ ಪರಿಗಣಿಸಲಾಗಿದ್ದು ನಾಲ್ಕರಿಂದ ಆರು ಕಡೆ ಸಿಡಿಲು ನಿರೋಧಕ ಅಳವಡಿಸಲು ನಿರ್ಧರಿಸಿದ್ದೇವೆ, ಒಂದು ಕಡೆ ಹಾಕಿದರೆ ಐನೂರು ಮೀಟರ್ ನಿಂದ ಒಂದೂವರೆ ಕಿಮೀ ವರೆಗೆ ಅದರ ವ್ಯಾಪ್ತಿ ಇರತ್ತೆ. ಸಿಡಿಲಿನ ಶಾಕ್ ಆಗುವುದನ್ನು ತಡೆಯುತ್ತದೆ. ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಲು ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು. ಸುಬ್ರಹ್ಮಣ್ಯ ದೇವಸ್ಥಾನದಿಂದ ಈಗಾಗಲೇ 2-3 ಕಡೆ ಸಿಡಿಲು ನಿರೋಧಕ ಹಾಕಿದ್ದಾರೆ. ಅದನ್ನು ನೋಡಿಕೊಂಡು ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಕಡಲ್ಕೊರೆತ ಸಮಸ್ಯೆ ಕುರಿತ ಪ್ರಶ್ನೆಗೆ, ಉಳ್ಳಾಲದ ಬಟ್ಟಪ್ಪಾಡಿ ಪ್ರದೇಶದಲ್ಲಿ ಬಂದರು ಇಲಾಖೆಯಿಂದ ಮರವಂತೆ ಮಾದರಿಯಲ್ಲಿ ಕಾಮಗಾರಿ ಮಾಡಲು 80 ಕೋಟಿ ಪ್ರಸ್ತಾವನೆ ಕೊಟ್ಟಿದ್ದಾರೆ. ಅದರ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದರು.
ಕೆಂಪು ಮಣ್ಣು ಸಾಗಾಟದ ಬಗ್ಗೆ ದೂರು ಬಂದಿದೆ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಲೋಪ ಆದರೆ ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ. ಮರಳುಗಾರಿಕೆ ವಿಚಾರದಲ್ಲಿ ಸಿಆರ್ ಝೆಡ್ ದುರುಪಯೋಗ ಆಗ್ತಾ ಇದೆ. ಜಿಲ್ಲಾಡಳಿತ ನಿಗಾ ವಹಿಸಬೇಕು, ಸಿಸಿಟಿವಿ ಇದ್ರೂ ಅಕ್ರಮ ಮರಳುಗಾರಿಕೆ ಆಗತ್ತೆ ಅಂದ್ರೆ ಆಡಳಿತದ ವೈಫಲ್ಯ ಅಂತ ಹೇಳಬೇಕಾಗುತ್ತದೆ ಎಂದರು. ಪುತ್ತೂರು ಶಾಸಕ ಅಶೋಕ ರೈ, ವಿನಯರಾಜ್ ಮತ್ತಿತರರು ಇದ್ದರು.
Mangalore kalladka highway to be made proper in few days says Dinesh Gundu Rao in Mangalore during the review meeting held at DC office. Measures are taken to avoid accident at Dharmasthala Charmadi roads he added.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm