ಬ್ರೇಕಿಂಗ್ ನ್ಯೂಸ್
10-06-24 08:09 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ನಾಗಾಲ್ಯಾಂಡ್ ರಾಜಧಾನಿ ಕೊಹಿಮಾದಲ್ಲಿ ಜೆಸೂಟ್ ಚರ್ಚ್ ಪಾದ್ರಿಯಾಗಿದ್ದ ಮಂಗಳೂರು ಮೂಲದ ಆನಂದ್ ಪಿರೇರಾ(56) ಅವರು ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ.
1986ರಲ್ಲಿ ಜೆಸೂಟ್ ಸೊಸೈಟಿಗೆ ಸೇರ್ಪಡೆಯಾಗಿದ್ದ ಆನಂದ್ ಪಿರೇರಾ ಅವರು 1995ರಲ್ಲಿ ಈಶಾನ್ಯ ಭಾರತದಲ್ಲಿ ಜೆಸೂಟ್ ಸೇವೆಗೆ ನಿಯೋಜನೆಗೊಂಡಿದ್ದರು. 2000ನೇ ಇಸವಿಯಲ್ಲಿ ಆನಂದ್ ಪಿರೇರಾ ಪಾದ್ರಿಯಾಗಿ ಸೇವೆ ಆರಂಭಿಸಿದ್ದರು. ಮಂಗಳೂರಿನ ಹೆಸರಾಂತ ಪಿರೇರಾ ಹೊಟೇಲ್ ಮಾಲೀಕ ದಿವಂಗತ ಚಾರ್ಲ್ಸ್ ಪಿರೇರಾ ಅವರ ಪುತ್ರನಾಗಿದ್ದು ಇವರ ತಾಯಿ ಜಾನೆಟ್ ಪಿರೇರಾ ಸೈಂಟ್ ಅಲೋಶಿಯಸ್ ಕಾಲೇಜು ಪ್ರೈಮರಿ ಸ್ಕೂಲ್ ನಲ್ಲಿ ಮುಖ್ಯ ಶಿಕ್ಷಕರಾಗಿ ನಿವೃತ್ತಿಯಾಗಿದ್ದಾರೆ.
2010ರಲ್ಲಿ ಆನಂದ್ ಪಿರೇರಾ ಅವರು ನೆಬ್ರಾಸ್ಕದ ಕ್ರೆಗ್ಟನ್ ಯುನಿವರ್ಸಿಟಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು ಅದರ ಬೆನ್ನಲ್ಲೇ ಉನ್ನತ ಅಧ್ಯಯನ ಮಾಡಿ ಪುಣೆ ಯುನಿವರ್ಸಿಟಿಯಿಂದ ಸಮಾಜಶಾಸ್ತ್ರ ವಿಷಯದಲ್ಲಿ ಪಿಎಚ್ ಡಿ ಗಳಿಸಿದ್ದರು. 2017-19ರಲ್ಲಿ ಮಣಿಪುರದ ಮೊಯಿರಾಂಗ್ ನಲ್ಲಿ ಸೈಂಟ್ ಕ್ಸೇವಿಯರ್ ಹೈಸ್ಕೂಲ್ ನಲ್ಲಿ ಪ್ರಿನ್ಸಿಪಾಲ್ ಆಗಿದ್ದರು. 2019ರಲ್ಲಿ ಅಸ್ಸಾಂ ರಾಜ್ಯದ ಗುವಾಹಟಿಯ ಜೆಸೂಟ್ ಹೌಸ್ ಕಮ್ಯುನಿಟಿ ಇದರ ಮುಖ್ಯಸ್ಥರಾಗಿ ಮತ್ತು ರೀಜನ್ ಡೆವಲಪ್ಮೆಂಟ್ ಡೈರೆಕ್ಟರ್ ಆಗಿಯೂ ಕರ್ತವ್ಯದಲ್ಲಿದ್ದರು. 2023ರಲ್ಲಿ ಜೆಸೂಟ್ಸ್ ಅರುಣಾಚಲ ಮಿಶನ್ ವಿಭಾಗದ ಮುಖ್ಯಸ್ಥರಾಗಿ ನಿಯೋಜನೆಗೊಂಡಿದ್ದರು. ಇದಲ್ಲದೆ, ನಾಗಾಲ್ಯಾಂಡಿನ ಕೊಹಿಮಾದಲ್ಲಿ ಜೆಸೂಟ್ ರೀಜನ್ ಇದರ ಮುಖ್ಯಸ್ಥರಾಗಿಯೂ ಜವಾಬ್ದಾರಿ ಹೊಂದಿದ್ದರು.
Mangalore son of pereira hotel owner Father Anand Pereira SJ dies of heart attack in Nagaland. Father Anand Pereira, SJ was currently rector of St. Paul Institute of Education Phesama in Kohima, Father Anand Pereira SJ is the son of the late Ignatius ('Inasam' - Pereira Hotel)
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm