ಬ್ರೇಕಿಂಗ್ ನ್ಯೂಸ್
12-06-24 10:55 pm Mangalore Correspondent ಕರಾವಳಿ
ಮಂಗಳೂರು, ಜೂನ್ 12: ಕರಾವಳಿಯ ಮಸೀದಿಗಳಲ್ಲಿ ಶಸ್ತ್ರಾಸ್ತ್ರ ಇಟ್ಟುಕೊಂಡು ಮತಾಂಧ ಕೆಲಸ ಮಾಡುತ್ತಿದ್ದಾರೆ ಅಂತ ನಾವು ಹಿಂದಿನಿಂದಲೂ ಹೇಳಿಕೊಂಡು ಬಂದಿದ್ದೇವೆ. ಈಗಲೂ ಹೇಳುತ್ತೇವೆ. ಎಲ್ಲ ಮಸೀದಿಗಳನ್ನು ತಪಾಸಣೆ ನಡೆಸಿದರೆ, ಒಳಗೇನು ಇಟ್ಕೊಂಡಿದ್ದಾರೆ ಅಂತ ಹೊರಬರುತ್ತದೆ. ಮಸೀದಿ ಎದುರಲ್ಲಿ ಮೆರವಣಿಗೆ ಹೋದ ಮಾತ್ರಕ್ಕೆ ಚೂರಿ ಇರಿಯುತ್ತಾರಂದ್ರೆ, ಇವರು ಒಳಗೆ ಶಸ್ತ್ರಾಸ್ತ್ರ ಇಟ್ಕೊಂಡಿರ್ತಾರೆ ಅಂತ ಅರ್ಥ ಅಲ್ಲವೇ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರಶ್ನಿಸಿದ್ದಾರೆ.
ಬೋಳಿಯಾರು ಚೂರಿ ಇರಿತಕ್ಕೊಳಗಾದ ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾಗಿ ಮಾಧ್ಯಮಕ್ಕೆ ಹೇಳಿಕೆ ನೀಡಿದ ಹರೀಶ್ ಪೂಂಜ, ಕಳೆದ ಬಾರಿ ಸಿದ್ದರಾಮಯ್ಯ ಸರಕಾರ ಇದ್ದಾಗ 24 ಹಿಂದುಗಳ ಹತ್ಯೆಯಾಗಿತ್ತು. ಈ ಬಾರಿ ಸಿದ್ದರಾಮಯ್ಯ ಎಷ್ಟು ಹತ್ಯೆ ಮಾಡಲು ಹೊರಟಿದ್ದಾರೆ ಅಂತ ಚಿಂತೆಯಾಗುತ್ತದೆ. ಈಗಲೇ ಅಶಾಂತಿ ಮೂಡಿದೆ, ಕೋಮು ಶಕ್ತಿಗಳು ಕಾನೂನು ಕೈಗೆ ತೆಗೆದುಕೊಂಡಿರುವುದು ಕಾಣುತ್ತದೆ.
ಬೋಳಿಯಾರಿನಲ್ಲಿ ಹತ್ಯೆಗೆ ಯತ್ನಿಸಿದವರೆಲ್ಲ ಇಲ್ಲಿನ ಶಾಸಕ ಯುಟಿ ಖಾದರ್ ಅವರ ಆಪ್ತ ವಲಯದಲ್ಲಿದ್ದವರು. ಅಲ್ಲ ಹೇಳಲಿ ನೋಡೋಣ ಖಾದರ್. ಉಸ್ತುವಾರಿ ಸಚಿವರು ಆಸ್ಪತ್ರೆಗೆ ಬಂದಾಗ ಕ್ಷೇತ್ರದ ಶಾಸಕರಾಗಿ ಅವರನ್ನು ತನ್ನ ಕ್ಷೇತ್ರದಲ್ಲಿ ಇರಿತಕ್ಕೊಳಗಾದ ಯುವಕರ ಬಳಿಗೊಯ್ದು ತೋರಿಸುವುದು ಜವಾಬ್ದಾರಿ ಅಲ್ಲವೇ. ಯಾಕೆ ಇವರಿಗೆ ಮುಸ್ಲಿಮರ ಭಯವೇ, ನೀವು ಮುಸ್ಲಿಮರಿಗೆ ಮಾತ್ರ ಶಾಸಕನಾ. ನೀವು ಯಾರ ಪರ ವಹಿಸ್ತೀರಿ ಎಂದು ಸ್ಪಷ್ಟನೆ ನೀಡಬೇಕು ಎಂದು ಖಾದರ್ ಅವರಿಗೆ ಆಗ್ರಹ ಮಾಡಿದ್ದಾರೆ.
ನೀವು ಭಾರತ್ ಮಾತಾಕೀ ಜೈ ಎಂದರೆ ಕೇಸು ಹಾಕುತ್ತೀರಿ ಎಂದಾದರೆ, ನಾವು ಯಾವ ದೇಶದಲ್ಲಿದ್ದೇವೆ ಎಂದು ಕೇಳಬೇಕಾಗುತ್ತದೆ. ನಮ್ಮ ದೇಶಕ್ಕೆ ಜೈಕಾರ ಹಾಕದೆ ಯಾರಿಗೆ ಹಾಕಬೇಕು ಸ್ವಾಮಿ. ಯುಟಿ ಖಾದರ್, ಜಿಲ್ಲಾಧಿಕಾರಿ ಅವರಿಗೆ ಆಗ್ರಹ ಮಾಡುತ್ತೀನಿ, ಕೂಡಲೇ ನೀವು ಹಾಕಿರುವ ಕೇಸನ್ನು ಹಿಂಪಡೆಯಬೇಕು, ಕೂಲಿ ಕೆಲಸ ಮಾಡುವವರು ಆಸ್ಪತ್ರೆಯಲ್ಲಿ ಮಲಗುವ ಸ್ಥಿತಿಯಾಗಿದೆ, ಆಸ್ಪತ್ರೆ ವೆಚ್ಚವನ್ನು ಭರಿಸಲು ಜಿಲ್ಲಾಧಿಕಾರಿ ವ್ಯವಸ್ಥೆ ಮಾಡಬೇಕು. ದನ ಕಳ್ಳತನ ಮಾಡಿದವರಿಗೆ ಪರಿಹಾರ ಮಾಡ್ತೀರಾದ್ರೆ ಚೂರಿ ಇರಿತಕ್ಕೊಳಗಾದವರಿಗೂ ಪರಿಹಾರ ನೀಡಬೇಕು ಎಂದು ಆಗ್ರಹ ಮಾಡುತ್ತೇವೆ. ಈ ದೇಶಕ್ಕೆ ಬದ್ಧತೆ ಇಲ್ಲದವರ ಮೇಲೆ ಪಾಕಿಸ್ತಾನ ಕುನ್ನಿಗಳು ಅನ್ನೋದಲ್ಲದೆ ಬೇರೇನು ಹೇಳಬೇಕು. ಅಷ್ಟಕ್ಕೇ ನೀವು ಎಫ್ಐಆರ್ ಮಾಡ್ತೀರಂದ್ರೆ ಅದನ್ನು ನಾವು ಸಹಿಸಿಕೊಳ್ಳಲ್ಲ ಎಂದು ಹೇಳಿದರು.
Belthangady MLA Harish poonja makes controversy statement on Boliyar Stabbing case. Every mosques have kept weapons and trying to disturb communial harmony. Every mosque should be examined by police he slammed.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm