ಬ್ರೇಕಿಂಗ್ ನ್ಯೂಸ್
17-06-24 03:32 pm Mangalore Correspondent ಕರಾವಳಿ
ಮಂಗಳೂರು, ಜೂನ್.17: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಮಂಗಳೂರಿನಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ. ಕಾರು ಮತ್ತು ದ್ವಿಚಕ್ರ ವಾಹನಗಳನ್ನು ಹಗ್ಗ ಕಟ್ಟಿ ಎಳೆದು ಪೆಟ್ರೋಲ್ ಪಂಪ್ ನತ್ತ ಒಯ್ದು ಪೆಟ್ರೋಲ್ ಹಾಕಿಸಿದ್ದಾರೆ.
ರಾಜ್ಯ ಸರಕಾರ ದಿಢೀರ್ ಎನ್ನುವಂತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಸಿದ್ದು, ಇದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದನ್ನು ಖಂಡಿಸಿ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ರಸ್ತೆಗಿಳಿದಿದ್ದು ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಮಂಗಳೂರಿನ ಪಿವಿಎಸ್ ವೃತ್ತದ ಬಳಿಯ ಬಿಜೆಪಿ ಕಚೇರಿ ಮುಂಭಾಗದಲ್ಲಿ ಸೇರಿದ ಕಾರ್ಯಕರ್ತರು ಹಾಗೂ ಮುಖಂಡರು ರಾಜ್ಯ ಸರಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ್ದಾರೆ.
ಇದೇ ವೇಳೆ ಕಾರೊಂದಕ್ಕೆ ಹಗ್ಗ ಕಟ್ಟಿ ನವಭಾರತ ಸರ್ಕಲ್ ಬಳಿಯ ಪೆಟ್ರೋಲ್ ಬಂಕ್ ಗೆ ಎಳೆದುಕೊಂಡು ಹೋಗಿದ್ದಲ್ಲದೆ, ಅಲ್ಲಿ ಚೆಂಬು ಹಾಗೂ ಗೆರಟೆ ಹಿಡಿದು ಭಿಕ್ಷೆ ಬೇಡಿ ಪೆಟ್ರೋಲ್ ಖರೀದಿಸಿ ಕಾರಿಗೆ ಹಾಕುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಪಕ್ಷದ ಮಹಿಳಾ ಕಾರ್ಯಕರ್ತರು ಕೂಡ ದ್ವಿಚಕ್ರ ವಾಹನವನ್ನು ಪೆಟ್ರೋಲ್ ಬಂಕ್ ವರೆಗೆ ತಳ್ಳಿಕೊಂಡು ಹೋಗಿ ಪೆಟ್ರೋಲ್ ಹಾಕಿಸಿ, ರಾಜ್ಯ ಸರ್ಕಾರ ದರ ಹೆಚ್ಚಿಸಿ ಬರೆ ಹಾಕಿದೆ ಎನ್ನುವುದನ್ನು ತೋರಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಸಂಸದ ಬ್ರಿಜೇಶ್ ಚೌಟ, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರಲು ಹಣಕಾಸು ಹೊಂದಿಸಲಾಗದೆ ತೈಲ ಬೆಲೆಯನ್ನು ಹೆಚ್ಚಿಸಿದ್ದು ಆಮೂಲಕ ಜನಸಾಮಾನ್ಯರ ಮೇಲೆ ಮತ್ತಷ್ಟು ಹೊರೆ ಹೊರಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆಯನ್ನು ಇಳಿಸದೇ ಇದ್ದರೆ ನಿರಂತರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಶಾಸಕರಾದ ಹರೀಶ್ ಪೂಂಜ, ವೇದವ್ಯಾಸ ಕಾಮತ್, ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ್, ಪಾಲಿಕೆ ಮೇಯರ್ ಸುಧಿರ್ ಶೆಟ್ಟಿ ಹಾಗು ಸದಸ್ಯರು, ಪಕ್ಷದ ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.
The district BJP staged a protest at PVS Junction on Monday, June 17, against the Congress-led state government for increasing petrol and diesel prices by Rs 3 and Rs 3.50 per litre, respectively. BJP leaders raised slogans against the government and displayed empty pots as a symbol of protest. They also demonstrated by pushing some vehicles and pulling some using a rope.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm