ಬ್ರೇಕಿಂಗ್ ನ್ಯೂಸ್
19-06-24 10:23 pm Mangalore Correspondent ಕರಾವಳಿ
ಮಂಗಳೂರು, ಜೂನ್ 19: ಮಂಗಳೂರಿನ ಪಿ.ಎನ್.ಆರ್. ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ "ಆರಾಟ" ಕನ್ನಡ ಸಿನಿಮಾ ಜೂನ್ 21ರಂದು ಕರಾವಳಿ ಜಿಲ್ಲೆಗಳ ಎಲ್ಲ ಚಿತ್ರ ಮಂದಿರಗಳಲ್ಲಿ ತೆರೆ ಕಾಣಲಿದೆ ಎಂದು ಚಿತ್ರದ ನಿರ್ದೇಶಕ ಪುಷ್ಪರಾಜ್ ರೈ ಮಲಾರಬೀಡು ಮಾಹಿತಿ ನೀಡಿದ್ದಾರೆ.
ಮಂಗಳೂರಿನಲ್ಲಿ ಭಾರತ್ ಸಿನಿಮಾಸ್, ಪಿ.ವಿ.ಆರ್, ಸಿನಿಪೊಲಿಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ , ಕುಂದಾಪುರದಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಭಾರತ್ ಸಿನಿಮಾಸ್, ಸುರತ್ಕಲ್ ಸಿನಿಗ್ಯಾಲಕ್ಸಿ, ಕಾಸರಗೋಡು ಸಿನಿಕೃಷ್ಣ ಮುಂತಾದ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆ ಕಾಣಲಿದ್ದು ಚಿತ್ರದ ಟೀಸರ್, ಟ್ರೈಲರ್ ಹಾಗೂ 2 ಹಾಡುಗಳನ್ನು ಕನ್ನಡದ ಹೆಸರಾಂತ ಯೂಟ್ಯೂಬ್ ಚಾನೆಲ್ ಆನಂದ್ ಆಡಿಯೋ ಮೂಲಕ ಬಿಡುಗಡೆಗೊಳಿಸಿದ್ದು ಈಗಾಗಲೇ ಜನಮನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ" ಎಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.



"ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿಭಾಗಗಳಾದ ಮುಡಿಪು, ಆನೇಕಲ್ಲು, ಉಪ್ಪಳ, ಮಂಗಲ್ಪಾಡಿ ಹಾಗೂ ಕುಬಣೂರು ಪರಿಸರದಲ್ಲಿ ಸಿನಿಮಾ ಚಿತ್ರೀಕರಣಗೊಂಡಿದೆ. ಸುಮಾರು 20 ದಿನಗಳ ಚಿತ್ರೀಕರಣ ಎರಡು ಹಂತಗಳಲ್ಲಿ ನಡೆದಿದ್ದು ಪಿ.ಎನ್.ಆರ್ ಬ್ಯಾನರ್ ಅಡಿಯಲ್ಲಿ ರಾಘವೇಂದ್ರ ಹೊಳ್ಳ ಟಿ, ರಾಂಪ್ರಸಾದ್ ಕೆ, ನಿತೇಶ್ ಮಾಡಮ್ಮೆ ಹಾಗೂ ಸ್ನೇಹಿತರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ ಎಂದು ನಟ ಜ್ಯೋತಿಷ್ ಶೆಟ್ಟಿ ಹೇಳಿದರು. ನಾಯಕ ನಟ ರಂಜನ್ ಕಾಸರಗೋಡು ಮಾತನಾಡಿ, "ಚಿತ್ರದಲ್ಲಿ ಕರಾವಳಿಯ ಸೊಗಡನ್ನು ತುಂಬ ಚೆನ್ನಾಗಿ ಚಿತ್ರಿಸಲಾಗಿದೆ. ದೇವರ ಜಾತ್ರೆಯ ಸಂದರ್ಭದಲ್ಲಿ ನಡೆಯುವ ಜಳಕದ ಸನ್ನಿವೇಶಕ್ಕೆ ಆರಾಟ ಎಂದು ಕರೆಯಲಾಗುತ್ತಿದ್ದು ಇಡೀ ಸಿನಿಮಾ ತುಳುನಾಡಿನಲ್ಲಿ ಚಿತ್ರಿಸಲಾಗಿದೆ. ಎಲ್ಲರೂ ಚಿತ್ರಮಂದಿರದಲ್ಲಿ ಸಿನಿಮಾ ನೋಡಿ" ಎಂದರು.
ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕ ರಾಘವೇಂದ್ರ ಹೊಳ್ಳ, ಸಂಗೀತ ನಿರ್ದೇಶಕ ಸಮೀರ್ ಮುಡಿಪು, ಸುನಿಲ್ ನೆಲ್ಲಿಗುಡ್ಡೆ, ರಂಜನ್ ಕಾಸರಗೋಡು, ಯೋಗೀಶ್ ಕೆ.ಎನ್., ಜ್ಯೋತಿಷ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಸಿನಿಮಾದ ಮೂಲಕಥೆ ರಾಘವೇಂದ್ರ ಹೊಳ್ಳ ಅವರದ್ದಾಗಿದ್ದು ಚಿತ್ರಕಥೆ, ಸಂಭಾಷಣೆ, ನಿರ್ದೇಶನದ ಜವಾಬ್ದಾರಿಯನ್ನು ಪುಷ್ಪರಾಜ್ ರೈ ಮಲಾರಬೀಡು ವಹಿಸಿದ್ದಾರೆ. ನಿರ್ದೇಶನ ತಂಡದಲ್ಲಿ ಜಯರಾಜ್ ಹೆಜಮಾಡಿ, ರೋಷನ್ ಆರ್ ಆಳ್ವ, ಹರ್ಷರಾಜ್ ಬಂಟ್ವಾಳ, ಅಭಿ ಬೋಳ್ಯಾರ್, ಸುಶಿನ್ ದುಡಿದಿದ್ದಾರೆ. ಛಾಯಾಗ್ರಹಣ ರವಿ ಸುವರ್ಣ, ಸಂಕಲನ ದಾಮು ಕನ್ಸೂರ್ , ಸಂಗೀತ ರಾಘವೇಂದ್ರ ಬೀಜಾಡಿ ಹಾಗೂ ಶಮೀರ್ ಮುಡಿಪು, ಸಾಹಿತ್ಯ ಹೆಚ್.ಎಸ್ ವೆಂಕಟೇಶ್ ಮೂರ್ತಿ ಹಾಗೂ ಯೋಗೀಶ್ ಎ.ಎನ್ ನೀಡಿದ್ದಾರೆ.
ತಾರಾಗಣದಲ್ಲಿ ಸರಕಾರಿ ಹಿ.ಪ್ರಾ ಶಾಲೆ ಖ್ಯಾತಿಯ ದಡ್ಡ ಪ್ರವೀಣ ರಂಜನ್ ಕಾಸರಗೋಡು, ವೆನ್ಯ ರೈ, ಜ್ಯೋತಿಶ್ ಶೆಟ್ಟಿ, ಸುನಿಲ್ ನೆಲ್ಲಿಗುಡ್ಡೆ, ಅನಿಲ್ ರಾಜ್ ಉಪ್ಪಳ, ಚೇತನ್ ರೈ ಮಾಣಿ, ರವಿ ರಾಮಕುಂಜ, ಸುರೇಶ್ ಮಂಜೇಶ್ವರ, ಪ್ರಭಾಕರ್ ಕಾಸರಗೋಡು , ತೇಜಸ್ವಿನಿ ಕಿಶೋರ್, ಸಂದೀಪ್ ಭಕ್ತ, ಆಶಾ ಮಾರ್ನಾಡ್, ನಯನ ಸಾಲ್ಯಾನ್, ದೀಕ್ಷಾ ಭಾಗ್ಯರಾಜ್ ನಾವೂರು, ವಿನೋದ್ ಶೆಟ್ಟಿ ಸಂಕೇತ್, ಉದಯ ಶೆಟ್ಟಿ ಇಡ್ಯಾ, ಉತ್ಸವ್ ವಾಮಂಜೂರ್, ತುಳಸೀಧರನ್, ಶಶಿ ಗುಜರನ್ ಪಡುಬಿದ್ರಿ ನಟಿಸಿದ್ದಾರೆ.
Much awaited Kannada film Aratat to releases on June 21 from Mangalore team. Mangalore P.N.R. The director of the film Pushparaj Rai Malarbidu has informed that the Kannada movie "Aarat" produced under the production banner will be released on June 21 in all theaters of the coastal districts.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm