ಬ್ರೇಕಿಂಗ್ ನ್ಯೂಸ್
20-06-24 01:26 pm Mangalore Correspondent ಕರಾವಳಿ
ಉಳ್ಳಾಲ, ಜೂ.20: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿದ್ದು ತೊಕ್ಕೊಟ್ಟಿನಲ್ಲಿ ರಸ್ತೆ ತಡೆದು ಪ್ರತಿಭಟಿಸಲು ಮುಂದಾದ ಬಿಜೆಪಿ ಮಂಗಳೂರು ಕ್ಷೇತ್ರದ ಯುವಮೋರ್ಚಾ ಅಧ್ಯಕ್ಷ ಮುರಳಿ ಕೊಣಾಜೆ ಅವರ ಕೊರಳ ಪಟ್ಟಿ ಹಿಡಿದು ಉಳ್ಳಾಲ ಠಾಣೆ ಇನ್ಸ್ ಪೆಕ್ಟರ್ ಹೆಚ್.ಎನ್ ಬಾಲಕೃಷ್ಣ ಎಳೆದಾಡಿದ ಪ್ರಸಂಗ ನಡೆದಿದ್ದು ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ಉಂಟಾಗಿದೆ.
ರಾಜ್ಯ ಕಾಂಗ್ರೆಸ್ ಸರಕಾರದ ಪೆಟ್ರೋಲ್, ಡೀಸೆಲ್ ತೈಲ ಬೆಲೆ ಏರಿಕೆ ನೀತಿಯ ವಿರುದ್ಧ ಬಿಜೆಪಿ ಮಂಗಳೂರು ಮಂಡಲದ ವತಿಯಿಂದ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಗುರುವಾರ ನಡೆದ ರಸ್ತೆ ತಡೆ ಪ್ರತಿಭಟನೆಯಲ್ಲಿ ಇನ್ಸ್ ಪೆಕ್ಟರ್ ಬಾಲಕೃಷ್ಣ ಮತ್ತು ಬಿಜೆಪಿ ಮಂಗಳೂರು ಮಂಡಲದ ಯುವಮೋರ್ಚಾ ಅಧ್ಯಕ್ಷ ಮುರಳಿ ಕೊಣಾಜೆ ನಡುವೆ ಘರ್ಷಣೆ ನಡೆದಿದೆ. ತೊಕ್ಕೊಟ್ಟು ಫ್ಲೈ ಓವರ್ ಕೆಳಗಡೆ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಬಿಜೆಪಿ ಜಿಲ್ಲಾ ನಾಯಕರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ದಿನೇಶ್ ಅಮ್ಟೂರು, ಮಹೇಶ್ ಜೋಗಿ ಸೇರಿದಂತೆ ಮಂಗಳೂರು ಮಂಡಲದ ಮುಖಂಡರು ರಾಜ್ಯ ಸರಕಾರದ ಬೆಲೆಯೇರಿಕೆ ನೀತಿಯ ವಿರುದ್ಧ ಖಂಡನಾ ಭಾಷಣ ಮಾಡಿದ್ದಾರೆ.



ಬಳಿಕ ಸೇರಿದ್ದ ಬಿಜೆಪಿ ಕಾರ್ಯಕರ್ತರು ಸಾಂಕೇತಿಕವಾಗಿ ಹೆದ್ದಾರಿ ತಡೆಯಲು ಮುಂದಾದಾಗ ಸ್ಥಳದಲ್ಲಿ ಬಂದೋಬಸ್ತ್ ನಲ್ಲಿದ್ದ ಇನ್ಸ್ ಪೆಕ್ಟರ್ ಬಾಲಕೃಷ್ಣ ಅವರು ಮಂಡಲದ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಮುರಳಿ ಕೊಣಾಜೆಯವರ ಶರ್ಟ್ ಕೊರಳ ಪಟ್ಟಿಯನ್ನ ಹಿಡಿದು ಎಳೆದಾಡಿದ್ದಾರೆ. ಈ ವೇಳೆ ಆಕ್ರೋಶಗೊಂಡ ಮುರಳಿಯವರು ಕೋಲಾರ್ ಪಟ್ಟಿ ಹಿಡಿದದ್ದು ಯಾಕೆಂದು ಇನ್ಸ್ ಪೆಕ್ಟರ್ ಅವರನ್ನ ಪ್ರಶ್ನಿಸಿದ್ದು, ಕೆಲ ಕಾಲ ಪೊಲೀಸರು, ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಮಧ್ಯ ಪ್ರವೇಶಿಸಿದ ಮಂಗಳೂರು ದಕ್ಷಿಣ ಉಪ ವಿಭಾಗದ ಪ್ರಭಾರ ಎಸಿಪಿ ರವೀಶ್ ನಾಯ್ಕ್ ಅವರು ಬಿಜೆಪಿ ಪ್ರಮುಖರಲ್ಲಿ ಮಾತುಕತೆ ನಡೆಸಿ ಪರಿಸ್ಥಿತಿಯನ್ನ ನಿಯಂತ್ರಣಕ್ಕೆ ತಂದಿದ್ದಾರೆ.
ಪ್ರತಿಭಟನೆಗಳಲ್ಲಿ ಸಾಂಕೇತಿಕವಾಗಿ ರಸ್ತೆ ತಡೆ ನಡೆಯುವುದು ವಾಡಿಕೆಯಾಗಿದೆ. ಆದರೆ ಸಣ್ಣ ವಿಚಾರದಲ್ಲಿ ಉಳ್ಳಾಲ ಇನ್ಸ್ ಪೆಕ್ಟರ್ ಯುವಮೋರ್ಚಾ ಮುಖಂಡನ ಕೊರಳ ಪಟ್ಟಿ ಹಿಡಿದು ಎಳೆದಾಡಿದ್ದು ಘರ್ಷಣೆಗೆ ಕಾರಣವಾಯಿತು.
BJP protest against petrol diesel price, Ullal inspector Balakrishna holds collar of Yuvamorcha president for protesting, soon after which Bjp members and inspector had war of words.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm