ಬ್ರೇಕಿಂಗ್ ನ್ಯೂಸ್
24-06-24 06:56 pm Mangalore Correspondent ಕರಾವಳಿ
ಮಂಗಳೂರು, ಜೂನ್.24: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಲ್ಲದೆ, ಕೊನೆಯಲ್ಲಿ ತುಳು ಭಾಷೆಯಲ್ಲಿ ಧನ್ಯವಾದ ಹೇಳಿ ಗಮನ ಸೆಳೆದಿದ್ದಾರೆ.
ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರು ಸೋಮವಾರ ಸಂಸತ್ತಿನ ಅಧಿವೇಶನ ಆರಂಭವಾಗುತ್ತಲೇ ನೂತನ ಸಂಸದರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ದಕ್ಷಿಣ ಕನ್ನಡ ಕ್ಷೇತ್ರದ ಸರದಿ ಬಂದಾಗ, ಬ್ರಿಜೇಶ್ ಚೌಟ ತುಳುನಾಡಿನ ಶೈಲಿಯ ವೇಷ ಭೂಷಣದಲ್ಲಿ ಗಮನ ಸೆಳೆದರು. ಬಿಳಿ ಅಂಗಿ ಮತ್ತು ಬಿಳಿ ಲುಂಗಿಯನ್ನು ಧರಿಸಿದ್ದ ಬ್ರಿಜೇಶ್ ಚೌಟ ಅದರ ಮೇಲೊಂದು ಹಿಂದುತ್ವ ಮತ್ತು ಬಿಜೆಪಿಯನ್ನು ಸೂಚಿಸುವ ಕೇಸರಿ ಶಾಲನ್ನು ಹಾಕ್ಕೊಂಡಿದ್ದರು.
ಇಂಗ್ಲಿಷ್, ಹಿಂದಿ ಭಾಷೆಯಲ್ಲಿ ನಿರರ್ಗಳ ಮಾತನಾಡಬಲ್ಲವರಾದರೂ ಬ್ರಿಜೇಶ್ ಚೌಟ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕರ್ನಾಟಕದ ಪ್ರತಿನಿಧಿಯೆಂದು ಸಾರಿದ್ದಾರೆ. ಇದರ ಜೊತೆಗೆ, ಕೊನೆಯಲ್ಲಿ ‘’ಮಾತೆರೆಗ್ಲ ಸೊಲ್ಮೆಲು’’ (ಎಲ್ಲರಿಗೂ ಧನ್ಯವಾದಗಳು) ಎನ್ನುವ ಮೂಲಕ ತನ್ನ ತುಳು ಭಾಷಾ ಪ್ರೇಮವನ್ನೂ ತೋರಿದ್ದಾರೆ. ಅಲ್ಲದೆ, ಪ್ರಮುಖವಾಗಿ ತುಳುನಾಡಿನ ದೈವ – ದೈವರ ಹೆಸರು ಉಲ್ಲೇಖಿಸಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ತುಳುನಾಡಿನಲ್ಲಿ ದೈವಾರಾಧನೆಗೆ ವಿಶೇಷ ಮಹತ್ವವಿದ್ದು, ದೈವದ ಹೆಸರಿನಲ್ಲಿ ಪ್ರಮಾಣ ಮಾಡುವುದಕ್ಕೂ ಹೆಚ್ಚಿನ ಮನ್ನಣೆಯಿದೆ. ತುಳುವರ ವಿಶಿಷ್ಟ ಸಂಸ್ಕೃತಿಯನ್ನು ಪ್ರತಿನಿಧಿಸುವ ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂಬ ಹಕ್ಕೊತ್ತಾಯ ಇರುವಂತೆಯೇ ಮೊದಲ ಬಾರಿಗೆ ತುಳು ಭಾಷೆಯ ನುಡಿ ಮುತ್ತೊಂದನ್ನು ಸಂಸದ ಬ್ರಿಜೇಶ್ ಸಂಸತ್ತಿನಲ್ಲಿ ಮೊಳಗಿಸಿದ್ದಾರೆ. ಬ್ರಿಜೇಶ್ ಚೌಟರ ಪ್ರಮಾಣ ವಚನದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
“ನಾನು ಕ್ಯಾಪ್ಟನ್ ಬ್ರಿಜೇಶ್ ಚೌಟ ಲೋಕಸಭೆಯ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ದೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದೂ, ಭಾರತದ ಸಾರ್ವಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದೂ ಮತ್ತು ನಾನು ಈಗ ವಹಿಸಿಕೊಳ್ಳಲಿರುವ ಕರ್ತವ್ಯವನ್ನು… pic.twitter.com/cpKuuuvOvs
— Captain Brijesh Chowta ಕ್ಯಾಪ್ಟನ್ ಬ್ರಿಜೇಶ್ ಚೌಟ (@CaptBrijesh) June 24, 2024
Mangalore Brijesh Chowta takes oath as MP of Dakshina Kannada in the name of Daiva in Tulu language
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm