ಬ್ರೇಕಿಂಗ್ ನ್ಯೂಸ್
24-06-24 06:56 pm Mangalore Correspondent ಕರಾವಳಿ
ಮಂಗಳೂರು, ಜೂನ್.24: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಲ್ಲದೆ, ಕೊನೆಯಲ್ಲಿ ತುಳು ಭಾಷೆಯಲ್ಲಿ ಧನ್ಯವಾದ ಹೇಳಿ ಗಮನ ಸೆಳೆದಿದ್ದಾರೆ.
ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರು ಸೋಮವಾರ ಸಂಸತ್ತಿನ ಅಧಿವೇಶನ ಆರಂಭವಾಗುತ್ತಲೇ ನೂತನ ಸಂಸದರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ದಕ್ಷಿಣ ಕನ್ನಡ ಕ್ಷೇತ್ರದ ಸರದಿ ಬಂದಾಗ, ಬ್ರಿಜೇಶ್ ಚೌಟ ತುಳುನಾಡಿನ ಶೈಲಿಯ ವೇಷ ಭೂಷಣದಲ್ಲಿ ಗಮನ ಸೆಳೆದರು. ಬಿಳಿ ಅಂಗಿ ಮತ್ತು ಬಿಳಿ ಲುಂಗಿಯನ್ನು ಧರಿಸಿದ್ದ ಬ್ರಿಜೇಶ್ ಚೌಟ ಅದರ ಮೇಲೊಂದು ಹಿಂದುತ್ವ ಮತ್ತು ಬಿಜೆಪಿಯನ್ನು ಸೂಚಿಸುವ ಕೇಸರಿ ಶಾಲನ್ನು ಹಾಕ್ಕೊಂಡಿದ್ದರು.
ಇಂಗ್ಲಿಷ್, ಹಿಂದಿ ಭಾಷೆಯಲ್ಲಿ ನಿರರ್ಗಳ ಮಾತನಾಡಬಲ್ಲವರಾದರೂ ಬ್ರಿಜೇಶ್ ಚೌಟ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕರ್ನಾಟಕದ ಪ್ರತಿನಿಧಿಯೆಂದು ಸಾರಿದ್ದಾರೆ. ಇದರ ಜೊತೆಗೆ, ಕೊನೆಯಲ್ಲಿ ‘’ಮಾತೆರೆಗ್ಲ ಸೊಲ್ಮೆಲು’’ (ಎಲ್ಲರಿಗೂ ಧನ್ಯವಾದಗಳು) ಎನ್ನುವ ಮೂಲಕ ತನ್ನ ತುಳು ಭಾಷಾ ಪ್ರೇಮವನ್ನೂ ತೋರಿದ್ದಾರೆ. ಅಲ್ಲದೆ, ಪ್ರಮುಖವಾಗಿ ತುಳುನಾಡಿನ ದೈವ – ದೈವರ ಹೆಸರು ಉಲ್ಲೇಖಿಸಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ತುಳುನಾಡಿನಲ್ಲಿ ದೈವಾರಾಧನೆಗೆ ವಿಶೇಷ ಮಹತ್ವವಿದ್ದು, ದೈವದ ಹೆಸರಿನಲ್ಲಿ ಪ್ರಮಾಣ ಮಾಡುವುದಕ್ಕೂ ಹೆಚ್ಚಿನ ಮನ್ನಣೆಯಿದೆ. ತುಳುವರ ವಿಶಿಷ್ಟ ಸಂಸ್ಕೃತಿಯನ್ನು ಪ್ರತಿನಿಧಿಸುವ ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂಬ ಹಕ್ಕೊತ್ತಾಯ ಇರುವಂತೆಯೇ ಮೊದಲ ಬಾರಿಗೆ ತುಳು ಭಾಷೆಯ ನುಡಿ ಮುತ್ತೊಂದನ್ನು ಸಂಸದ ಬ್ರಿಜೇಶ್ ಸಂಸತ್ತಿನಲ್ಲಿ ಮೊಳಗಿಸಿದ್ದಾರೆ. ಬ್ರಿಜೇಶ್ ಚೌಟರ ಪ್ರಮಾಣ ವಚನದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
“ನಾನು ಕ್ಯಾಪ್ಟನ್ ಬ್ರಿಜೇಶ್ ಚೌಟ ಲೋಕಸಭೆಯ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ದೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದೂ, ಭಾರತದ ಸಾರ್ವಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದೂ ಮತ್ತು ನಾನು ಈಗ ವಹಿಸಿಕೊಳ್ಳಲಿರುವ ಕರ್ತವ್ಯವನ್ನು… pic.twitter.com/cpKuuuvOvs
— Captain Brijesh Chowta ಕ್ಯಾಪ್ಟನ್ ಬ್ರಿಜೇಶ್ ಚೌಟ (@CaptBrijesh) June 24, 2024
Mangalore Brijesh Chowta takes oath as MP of Dakshina Kannada in the name of Daiva in Tulu language
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm