ಬ್ರೇಕಿಂಗ್ ನ್ಯೂಸ್
24-06-24 11:12 pm Mangalore Correspondent ಕರಾವಳಿ
ಮಂಗಳೂರು, ಜೂನ್ 24: ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಪಾಲಿಕೆ ಚುನಾವಣೆಗಳಲ್ಲಿ ಜೆಡಿಎಸ್ ಜೊತೆ ಸೀಟು ಹೊಂದಾಣಿಕೆ ಇರಲಿದೆ. ಕುಮಾರಸ್ವಾಮಿಯವರು ಕೂಡ ಒಟ್ಟಾಗಿ ಕೆಲಸ ಮಾಡುವ ಅಭಿಪ್ರಾಯ ಹೊಂದಿದ್ದಾರೆ. ನಾವು ಎಲ್ಲ ಸ್ತರದಲ್ಲೂ ಮೈತ್ರಿ ಮಾಡಲಿದ್ದೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿಯಿತ್ತು ನಾಣ್ಯಗಳ ತುಲಾಭಾರ ನೆರವೇರಿಸಿದ ಬಳಿಕ ಯಡಿಯೂರಪ್ಪ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕೀಯ ಜಂಜಾಟದ ಮಧ್ಯೆ ಧರ್ಮಸ್ಥಳ, ಸುಬ್ರಹ್ಮಣ್ಯ ಬಾರದೇ ತುಂಬಾ ದಿವಸ ಆಗಿತ್ತು. ದೇವರ ದರ್ಶನದ ಬಳಿಕ ನೆಮ್ಮದಿ, ಸಮಾಧಾನ ಮತ್ತು ತೃಪ್ತಿ ಇದೆ. ಈಗಿನ ಸರ್ಕಾರ ಜನಹಿತವನ್ನ ಮರೆತು ಅಭಿವೃದ್ಧಿ ಕಾರ್ಯವೆಲ್ಲ ಸ್ಥಗಿತ ಆಗಿದೆ. ಯಾವುದೋ ಗ್ಯಾರಂಟಿ ಯೋಜನೆ ಅಂತ ಹೇಳಿ ಅಭಿವೃದ್ಧಿ ಕೆಲಸ ಸ್ಥಗಿತ ಮಾಡಿದ್ದಾರೆ. ಇದರ ವಿರುದ್ದ ಮಾತನಾಡಲು ಯಾರೂ ಸಿದ್ದರಿಲ್ಲದ ವಿಚಿತ್ರವಾದ ಪರಿಸ್ಥಿತಿ ರಾಜ್ಯದಲ್ಲಿ ಇದೆ.
ಈ ಬಗ್ಗೆ ಅಧಿವೇಶನದಲ್ಲಿ ಅಂಕಿ ಅಂಶಗಳ ಮೂಲಕ ಬಿಜೆಪಿ ಸರ್ಕಾರದ ಗಮನಕ್ಕೆ ತರಲಿದೆ. ಆ ಬಳಿಕವಾದ್ರೂ ಚೇತರಿಸಿಕೊಂಡು ಅಭಿವೃದ್ಧಿ ಮಾಡಲಿ ಅಂತ ಒತ್ತಾಯಿಸ್ತೇವೆ. ಒತ್ತಾಯಕ್ಕೆ ಮಣಿಯದೇ ಇದ್ದರೆ ಮುಂದಿನ ಹೋರಾಟದ ರೂಪುರೇಷೆ ಮಾಡ್ತೇವೆ. ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಮುಂದಿನ ಹೋರಾಟದ ರೂಪುರೇಷೆ ನಿರ್ಧಾರ ಮಾಡ್ತಾರೆ.
ಎಂಎಲ್ ಸಿ ಚುನಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ, ಇದರಲ್ಲಿ ಗೊಂದಲ ಏನೂ ಇಲ್ಲ, ದೆಹಲಿಯಲ್ಲಿ ಇವೆಲ್ಲ ಫೈನಲ್ ಆಗಿರೋದು ಎಂದರು. ಸರ್ಕಾರ ಬೀಳುತ್ತಾ ಅನ್ನೋ ಪ್ರಶ್ನೆಗೆ, ಆ ಬಗ್ಗೆ ನಾನು ಏನೂ ಹೇಳಿಕೆ ಕೊಡಲು ಇಷ್ಟಪಡಲ್ಲ. ನಾನು ವಿರೋಧ ಪಕ್ಷದ ನಾಯಕನಲ್ಲ ಎಂದರು.
Former Chief Minister B.S. Yediyurappa on Sunday visited the Dharmasthala temple. During his visit, he met Dharmadhikari Dr. D. Veerendra Heggade and engaged in discussions.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm