ಬ್ರೇಕಿಂಗ್ ನ್ಯೂಸ್
26-06-24 11:03 pm Mangalore Correspondent ಕರಾವಳಿ
ಮಂಗಳೂರು, ಜೂನ್ 26: ಎರಡು ದಿನಗಳಿಂದ ಸತತ ಸುರಿದ ಮಳೆಯಿಂದಾಗಿ ಮಂಗಳೂರಿನ ಹಲವೆಡೆ ಕೃತಕ ನೆರೆ ಉಂಟಾಗಿದೆ. ಬಜಾಲ್ ನಲ್ಲಿ ರೈಲ್ವೇ ಅಂಡರ್ ಪಾಸಲ್ಲಿ ನೀರು ನಿಂತಿದ್ದರಿಂದ ವಾಹನಗಳ ಸಂಚಾರಕ್ಕೆ ತೊಡಕಾಗಿದ್ದರೆ, ಬಜ್ಪೆ ಏರ್ಪೋರ್ಟ್ ಬಳಿಯ ಕೆಂಜಾರಿನಲ್ಲಿ ನೀರು ಹರಿಯೋ ಚರಂಡಿ ತಡೆ ಬಿದ್ದುದರಿಂದ ಮಳೆನೀರು ರಸ್ತೆಯಲ್ಲೇ ಹರಿದಿತ್ತು.
ಬುಧವಾರ ರಾತ್ರಿ ಸುರಿದ ಮಳೆಗೆ ಕೆಂಜಾರಿನ ಶ್ರೀದೇವಿ ಕಾಲೇಜು ಮುಂಭಾಗದ ರಸ್ತೆಯಲ್ಲೇ ಭಾರೀ ಪ್ರಮಾಣದ ನೀರು ಹರಿದಿತ್ತು. ಇದರ ವಿಡಿಯೋ ವೈರಲ್ ಆಗಿದ್ದು ಸ್ಥಳೀಯರು ಕಾಲೇಜು ಸಿಬಂದಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಕಂಡುಬಂದಿದೆ. ಕಾಲೇಜಿನವರು ಚರಂಡಿ ನೀರು ಹರಿಯುವುದಕ್ಕೆ ಸಣ್ಣ ಪೈಪ್ ಹಾಕಿದ್ದರು. ಅದನ್ನು ನಾವು ಪ್ರಶ್ನೆ ಮಾಡಿದ್ದರೂ ಕೇರ್ ಮಾಡಿರಲಿಲ್ಲ. ಈಗ ಗುಡ್ಡದಿಂದ ಹರಿದು ಬಂದ ಮಳೆ ನೀರು ಪೂರ್ತಿಯಾಗಿ ನಮ್ಮ ತೋಟ ಮತ್ತು ಗದ್ದೆಗೆ ನುಗ್ಗಿದೆ. ಇದನ್ನು ಕೂಡಲೇ ಸರಿಪಡಿಸದೇ ಇದ್ದಲ್ಲಿ ನಾಳೆ ಕಾಲೇಜು ಗೇಟ್ ಮುಂದೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಮಳೆನೀರು ಏರ್ಪೋರ್ಟ್ ರಸ್ತೆಯಲ್ಲೇ ಹರಿಯುವುದು ವಿಡಿಯೋದಲ್ಲಿದೆ.



ಜಪ್ಪಿನಮೊಗರುವಿನಲ್ಲಿ ಚರಂಡಿಯಲ್ಲಿ ಮಳೆ ನೀರು ಹರಿಯಲು ಸಾಧ್ಯವಾಗದೆ ಬ್ಲಾಕ್ ಆಗಿದ್ದು, ನೀರು ಹಲವು ಮನೆಗಳಿಗೆ ನುಗ್ಗಿತ್ತು. ಘಟನಾ ಸ್ಥಳಕ್ಕೆ ಕೆಲವು ಸಾಮಾಜಿಕ ಕಾರ್ಯಕರ್ತರು ಭೇಟಿ ಕೊಟ್ಟು ಮಹಾನಗರ ಪಾಲಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆನಂತರ, ಸ್ಥಳೀಯ ಕಾರ್ಪೊರೇಟರ್ ಮತ್ತು ಪಾಲಿಕೆಯ ಅಧಿಕಾರಿಗಳು ಬಂದು ಬ್ಲಾಕ್ ಸರಿಪಡಿಸುವ ಭರವಸೆ ನೀಡಿದ್ದಾರೆ.
ಬಜಾಲ್ ರೈಲ್ವೇ ಅಂಡರ್ ಪಾಸಲ್ಲಿ ಪ್ರತಿ ಮಳೆಗಾಲಕ್ಕೂ ಅದೇ ಸ್ಥಿತಿಯಾಗಿದೆ. ಅಂಡರ್ ಪಾಸ್ ಆಳ ಇರೋದು ಮತ್ತು ನೀರು ಹರಿಯಲು ವ್ಯವಸ್ಥೆ ಮಾಡದಿರುವುದರಿಂದ ಮಳೆ ನೀರು ತುಂಬಿಕೊಂಡು ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಈ ಸಲದ ಮಳೆಗಾಲದಲ್ಲಿ ಮೊದಲ ಬಾರಿಗೆ ಬುಧವಾರ ಬಜಾಲ್ ಅಂಡರ್ ಪಾಸ್ ಅರ್ಧ ಮುಳುಗಡೆಯಾಗಿತ್ತು. ಕಾರೊಂದು ನೀರಿನಲ್ಲಿ ಸಾಗಲು ಯತ್ನಿಸಿ, ಅರ್ಧದಲ್ಲಿ ಬಾಕಿಯಾಗಿತ್ತು. ಕೊಟ್ಟಾರದಲ್ಲಿಯೂ ಮಳೆ ನೀರು ಹಲವು ಮನೆಗಳಿಗೆ ನುಗ್ಗಿದೆ. ಪ್ರತಿ ಮಳೆಗಾಲದಲ್ಲಿಯೂ ಕೊಟ್ಟಾರದಲ್ಲಿ ಸಮಸ್ಯೆ ಮಾಮೂಲಿ ಅನ್ನುವಂತಾಗಿದೆ.
Mangalore rain, bajal, Bajpe, jeppu flooded with rain water.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
11-02-26 04:22 pm
HK News Desk
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
11-02-26 03:45 pm
Mangalore Correspondent
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am