ಬ್ರೇಕಿಂಗ್ ನ್ಯೂಸ್
27-06-24 10:57 am Mangalore Correspondent ಕರಾವಳಿ
ಮಂಗಳೂರು, ಜೂನ್ 27: ಕಡಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರು ರಿಕ್ಷಾ ಚಾಲಕರು ದುರಂತ ಸಾವನ್ನಪ್ಪಿದ ಘಟನೆ ನಗರದ ಪಾಂಡೇಶ್ವರದ ರೊಸಾರಿಯೋ ಸ್ಕೂಲ್ ಬಳಿ ನಡೆದಿದೆ.
ಪುತ್ತೂರು ರಾಮಕುಂಜ ನಿವಾಸಿ ದೇವರಾಜ್ ಗೌಡ(46), ಹಾಸನ ಜಿಲ್ಲೆಯ ಆಲೂರು ಮೂಲದ ರಾಜು (50) ಮೃತರು. ಇವರು ರೊಸಾರಿಯೋ ಸ್ಕೂಲ್ ಬಳಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಇವರ ಮನೆ ಬಳಿಯಲ್ಲಿ ವಿದ್ಯುತ್ ಕಂಬ ಮುರಿದು ಬಿದ್ದಿತ್ತು. ಎಂದಿನಂತೆ ನಸುಕಿನಲ್ಲಿ ನಾಲ್ಕು ಗಂಟೆ ವೇಳೆಗೆ ಚಾಲಕ ರಾಜು ತನ್ನ ಆಟೋ ತೊಳೆಯಲೆಂದು ಹೊರಗೆ ಬಂದಿದ್ದು ಶಾಕ್ ಆಗಿದ್ದಾರೆ. ಹೊರಗೆ ಬಿದ್ದುಕೊಂಡಿದ್ದ ವಿದ್ಯುತ್ ತಂತಿಯನ್ನು ನೋಡದೆ ತುಳಿದು ಶಾಕ್ ಆಗಿತ್ತು. ಇದನ್ನು ತಿಳಿದ ಮನೆಯ ಒಳಗಿದ್ದ ಇನ್ನೊಬ್ಬ ಗೆಳೆಯ ದೇವರಾಜು ಓಡಿ ಬಂದಿದ್ದು ಅಲ್ಲಿದ್ದ ಗೋಣಿ ಚೀಲದಲ್ಲಿ ರಾಜು ಅವರನ್ನು ರಕ್ಷಣೆ ಮಾಡಲು ಮುಂದಾಗಿದ್ದಾರೆ. ಮಳೆ ಬರುತ್ತಿದ್ದುದರಿಂದ ಅವರಿಗೂ ತೀವ್ರ ಶಾಕ್ ಆಗಿದ್ದು ನೆಲಕ್ಕೆ ಉರುಳಿದ್ದಾರೆ.


ಇಬ್ಬರೂ ನೆಲಕ್ಕೆ ಬಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ. ನಸುಕಿನಲ್ಲಿ 4 ಗಂಟೆಗೆ ಘಟನೆ ನಡೆದಿದ್ದು ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ ಘಟನೆ ಬೆಳಗಾದ ಬಳಿಕವೇ ಸ್ಥಳೀಯರಿಗೆ ಗೊತ್ತಾಗಿದೆ.
ವಿದ್ಯುತ್ ಕಂಬ ರಾತ್ರಿ 9 ಗಂಟೆಗೆ ಮಳೆಗೆ ಉರುಳಿ ಬಿದ್ದಿದ್ದು ಅದರಲ್ಲಿನ ತಂತಿಯಲ್ಲಿ ವಿದ್ಯುತ್ ಪ್ರವಹಿಸುವುದು ನಿಂತಿರಲಿಲ್ಲ. ಹೀಗಾಗಿ ಬೆಳಗ್ಗಿನ ವೇಳೆಗೆ ದುರಂತ ಸಂಭವಿಸಿದೆ. ಸಿಸಿಟಿವಿಯಲ್ಲಿ ಪರಿಶೀಲನೆ ನಡೆಸಿದಾಗ, ರಾತ್ರಿ ವೇಳೆಯೇ ವಿದ್ಯುತ್ ಕಂಬ ಬಿದ್ದಿರುವುದು ಪತ್ತೆಯಾಗಿದೆ. ಹೀಗಾಗಿ ಮೆಸ್ಕಾಂ ಸಿಬಂದಿ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಪಾಂಡೇಶ್ವರ ಪೊಲೀಸರು 304 ಎ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
In a tragic incident near Rosario church on Wednesday night, two auto-rickshaw drivers were electrocuted when an electricity wire snapped and one among them came in contact with it. The other driver died while attempting to rescue his friend. The deceased have been identified as Devaraj Gowda (46) from Puttur and Raju Paalya (50) from Hassan. Both were residing in a rented room near Rosario church.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm