ಬ್ರೇಕಿಂಗ್ ನ್ಯೂಸ್
27-06-24 10:57 am Mangalore Correspondent ಕರಾವಳಿ
ಮಂಗಳೂರು, ಜೂನ್ 27: ಕಡಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರು ರಿಕ್ಷಾ ಚಾಲಕರು ದುರಂತ ಸಾವನ್ನಪ್ಪಿದ ಘಟನೆ ನಗರದ ಪಾಂಡೇಶ್ವರದ ರೊಸಾರಿಯೋ ಸ್ಕೂಲ್ ಬಳಿ ನಡೆದಿದೆ.
ಪುತ್ತೂರು ರಾಮಕುಂಜ ನಿವಾಸಿ ದೇವರಾಜ್ ಗೌಡ(46), ಹಾಸನ ಜಿಲ್ಲೆಯ ಆಲೂರು ಮೂಲದ ರಾಜು (50) ಮೃತರು. ಇವರು ರೊಸಾರಿಯೋ ಸ್ಕೂಲ್ ಬಳಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಇವರ ಮನೆ ಬಳಿಯಲ್ಲಿ ವಿದ್ಯುತ್ ಕಂಬ ಮುರಿದು ಬಿದ್ದಿತ್ತು. ಎಂದಿನಂತೆ ನಸುಕಿನಲ್ಲಿ ನಾಲ್ಕು ಗಂಟೆ ವೇಳೆಗೆ ಚಾಲಕ ರಾಜು ತನ್ನ ಆಟೋ ತೊಳೆಯಲೆಂದು ಹೊರಗೆ ಬಂದಿದ್ದು ಶಾಕ್ ಆಗಿದ್ದಾರೆ. ಹೊರಗೆ ಬಿದ್ದುಕೊಂಡಿದ್ದ ವಿದ್ಯುತ್ ತಂತಿಯನ್ನು ನೋಡದೆ ತುಳಿದು ಶಾಕ್ ಆಗಿತ್ತು. ಇದನ್ನು ತಿಳಿದ ಮನೆಯ ಒಳಗಿದ್ದ ಇನ್ನೊಬ್ಬ ಗೆಳೆಯ ದೇವರಾಜು ಓಡಿ ಬಂದಿದ್ದು ಅಲ್ಲಿದ್ದ ಗೋಣಿ ಚೀಲದಲ್ಲಿ ರಾಜು ಅವರನ್ನು ರಕ್ಷಣೆ ಮಾಡಲು ಮುಂದಾಗಿದ್ದಾರೆ. ಮಳೆ ಬರುತ್ತಿದ್ದುದರಿಂದ ಅವರಿಗೂ ತೀವ್ರ ಶಾಕ್ ಆಗಿದ್ದು ನೆಲಕ್ಕೆ ಉರುಳಿದ್ದಾರೆ.
ಇಬ್ಬರೂ ನೆಲಕ್ಕೆ ಬಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ. ನಸುಕಿನಲ್ಲಿ 4 ಗಂಟೆಗೆ ಘಟನೆ ನಡೆದಿದ್ದು ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ ಘಟನೆ ಬೆಳಗಾದ ಬಳಿಕವೇ ಸ್ಥಳೀಯರಿಗೆ ಗೊತ್ತಾಗಿದೆ.
ವಿದ್ಯುತ್ ಕಂಬ ರಾತ್ರಿ 9 ಗಂಟೆಗೆ ಮಳೆಗೆ ಉರುಳಿ ಬಿದ್ದಿದ್ದು ಅದರಲ್ಲಿನ ತಂತಿಯಲ್ಲಿ ವಿದ್ಯುತ್ ಪ್ರವಹಿಸುವುದು ನಿಂತಿರಲಿಲ್ಲ. ಹೀಗಾಗಿ ಬೆಳಗ್ಗಿನ ವೇಳೆಗೆ ದುರಂತ ಸಂಭವಿಸಿದೆ. ಸಿಸಿಟಿವಿಯಲ್ಲಿ ಪರಿಶೀಲನೆ ನಡೆಸಿದಾಗ, ರಾತ್ರಿ ವೇಳೆಯೇ ವಿದ್ಯುತ್ ಕಂಬ ಬಿದ್ದಿರುವುದು ಪತ್ತೆಯಾಗಿದೆ. ಹೀಗಾಗಿ ಮೆಸ್ಕಾಂ ಸಿಬಂದಿ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಪಾಂಡೇಶ್ವರ ಪೊಲೀಸರು 304 ಎ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
In a tragic incident near Rosario church on Wednesday night, two auto-rickshaw drivers were electrocuted when an electricity wire snapped and one among them came in contact with it. The other driver died while attempting to rescue his friend. The deceased have been identified as Devaraj Gowda (46) from Puttur and Raju Paalya (50) from Hassan. Both were residing in a rented room near Rosario church.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm