ಬ್ರೇಕಿಂಗ್ ನ್ಯೂಸ್
27-06-24 10:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 27: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಗೆ ಮತ್ತೊಬ್ಬ ಯುವತಿ ಬಲಿಯಾಗಿದ್ದು, ಒಂದೇ ದಿನ ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಮೂವರು ಸಾವನಪ್ಪಿದ್ದಾರೆ. ಬೆಳ್ತಂಗಡಿಯಲ್ಲಿ ವಿದ್ಯುತ್ ಕಂಬದ ಸ್ಟೇ ವೈರ್ ಗೆ ವಿದ್ಯುತ್ ಪ್ರವಹಿಸಿ ಯುವತಿ ಸಾವನಪ್ಪಿದ್ದಾಳೆ.
ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ನಿವಾಸಿ ಪ್ರತೀಕ್ಷಾ ಶೆಟ್ಟಿ (20) ಮೃತ ಯುವತಿ. ಮನೆ ಬಳಿಯ ರಸ್ತೆಗೆ ಪಾರ್ಸೆಲ್ ಬಂತು ಎಂದು ಯುವತಿ ಮಳೆ ಬರುತ್ತಿದ್ದಾಗಲೇ ರಸ್ತೆಗೆ ಬಂದಿದ್ದಳು. ಈ ವೇಳೆ ನೀರಿನಲ್ಲಿ ವಿದ್ಯುತ್ ಪ್ರವಹಿಸಿದ್ದು ಯುವತಿ ಶಾಕ್ ಆಗಿ ಸ್ಥಳದಲ್ಲೇ ಸಾವನಪ್ಪಿದ್ದಾಳೆ. ವಿದ್ಯುತ್ ಕಂಬಕ್ಕೆ ಕೊಡುವ ಕಬ್ಬಿಣದ ಸ್ಟೇ ತಂತಿಯ ಮೂಲಕ ನೀರಿನಲ್ಲಿ ವಿದ್ಯುತ್ ಪ್ರವಹಿಸಿತ್ತು ಎನ್ನಲಾಗಿದೆ. ಯುವತಿ ತನ್ನ ತಂದೆಯ ಎದುರಲ್ಲೇ ವಿದ್ಯುತ್ ಶಾಕ್ ಗೆ ಒಳಗಾಗಿದ್ದು ರಕ್ಷಣೆಗೆ ಧಾವಿಸಿದ ಅವರಿಗೂ ಶಾಕ್ ತಗುಲಿದೆ.
ಯುವತಿಯನ್ನು ಕೂಡಲೇ ಬೆಳ್ತಂಗಡಿ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಆಕೆ ಮೃತಪಟ್ಟಿದ್ದಳು. ಮೃತಪಟ್ಟ ಯುವತಿ ಕೊಕ್ಕಡ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಮೆಸ್ಕಾಂ ಇಲಾಖೆಗೆ ಸಂತ್ರಸ್ತ ಕುಟುಂಬಕ್ಕೆ ಐದು ಲಕ್ಷ ಪರಿಹಾರ ನೀಡುವಂತೆ ಸ್ಪೀಕರ್ ಯುಟಿ ಖಾದರ್ ಸೂಚನೆ ನೀಡಿದ್ದಾರೆ. ಮಳೆಯಿಂದಾಗಿ ಎರಡು ದಿನಗಳಲ್ಲಿ ಏಳು ಜನ ಮೃತಪಟ್ಟಿದ್ದು ಜಿಲ್ಲಾಡಳಿತ ಪ್ರಾಣ ಹಾನಿಯಾಗದಂತೆ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.
Heavy rains, 20 year old dies of current shock at Belthangady in Mangalore. Mangalore reports seven deaths in just two days time.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm