Kundapur News, Lak: ಕೊಲ್ಲೂರು ; ಮಕ್ಕಳ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ, ಇಬ್ಬರು ಮಕ್ಕಳು ದುರಂತ ಸಾವು, ತಂದೆ, ತಾಯಿ ಚಿಂತಾಜನಕ

29-06-24 10:47 pm       Udupi Correspondent   ಕರಾವಳಿ

ತಂದೆ, ತಾಯಿ ತಮ್ಮ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೊಲ್ಲೂರು ಬಳಿ ನಡೆದಿದ್ದು, ದುರ್ಘಟನೆಯಲ್ಲಿ ಇಬ್ಬರು ಮಕ್ಕಳು ದುರಂತ ಸಾವು ಕಂಡಿದ್ದರೆ, ಹೆತ್ತವರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಡುಪಿ, ಜೂನ್.29: ತಂದೆ, ತಾಯಿ ತಮ್ಮ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೊಲ್ಲೂರು ಬಳಿ ನಡೆದಿದ್ದು, ದುರ್ಘಟನೆಯಲ್ಲಿ ಇಬ್ಬರು ಮಕ್ಕಳು ದುರಂತ ಸಾವು ಕಂಡಿದ್ದರೆ, ಹೆತ್ತವರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊಲ್ಲೂರು ಠಾಣೆ ವ್ಯಾಪ್ತಿಯ ಬೆಳ್ಳಾಲ ಗ್ರಾಮದ ನಂದ್ರುಳ್ಳಿ ಎಂಬಲ್ಲಿ ಘಟನೆ ನಡೆದಿದೆ. ಧನರಾಜ್ ಸತೀಶ್ (13) ಮತ್ತು ಛಾಯಾ ಸತೀಶ್ (7) ಮೃತ ಇಬ್ಬರು ಮಕ್ಕಳು. ತಾಯಿ ಶೀಲಾ ಮತ್ತು ತಂದೆ ಸತೀಶ್ ಮಡಿವಾಳ ಕುಂದಾಪುರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೀಲಾ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಹೆತ್ತವರು ಮತ್ತು ಮಕ್ಕಳಿಬ್ಬರು ಕೆರೆಗೆ ಬಿದ್ದಿರುವ ವಿಷಯ ತಿಳಿದು ಸ್ಥಳೀಯರು ಆಂಬುಲೆನ್ಸ್ ಗೆ ಕರೆ ಮಾಡಿದ್ದರು. ಕೂಡಲೇ ಆಂಬುಲೆನ್ಸ್ ಬಂದಿದ್ದು, ಅಷ್ಟರಲ್ಲಿ ಮಕ್ಕಳಿಬ್ಬರು ಮೃತಪಟ್ಟಿದ್ದಾರೆ. ತೀವ್ರ ಅಸ್ವಸ್ಥ ಸ್ಥಿತಿಯಲ್ಲಿದ್ದ ಸತೀಶ್ ಮತ್ತು ಶೀಲಾ ದಂಪತಿಯನ್ನು ಆಸ್ಪತ್ರೆಗೆ ತಂದು ದಾಖಲಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಹೆತ್ತವರು ಯಾವುದೋ ಜಗಳದಲ್ಲಿ ಮಕ್ಕಳ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಮಾಜಿ ಶಾಸಕ ಸುಕುಮಾರ ಶೆಟ್ಟಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಕೊಲ್ಲೂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

In a heart-breaking incident, two children tragically lost their lives after accidentally slipping and falling into a lake at Nandrolli, within the Bellala panchayat jurisdiction of Kollur police station limits. The victims have been identified as Dhanraj Sathish (13) and Chaya Sathish (7) who were pursuing their studies at a school in Vandse. Their mother, Sheela (34), and father, Sathish Madivala, are currently in critical condition and receiving treatment at Kundapur hospital.