ಬ್ರೇಕಿಂಗ್ ನ್ಯೂಸ್
06-12-20 07:55 pm Mangaluru Correspondent ಕರಾವಳಿ
ಉಳ್ಳಾಲ, ಡಿಸೆಂಬರ್,6: ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಆಯೋಜಿಸಲಾದ ಜಿಲ್ಲಾ ಮಟ್ಟದ ಎರಡು ದಿವಸಗಳ ತುಳು ಭಜನಾ ಸ್ಪರ್ಧೆ(ತಂಬೂರಿ)ಗೆ ಚಾಲನೆ ನೀಡಲಾಯಿತು.
ಇಸ್ಕಾನ್ ನ ಅಕ್ಷಯ ಪಾತ್ರೆ ಮುಖ್ಯಸ್ಥರಾದ ಕಾರುಣ್ಯ ದಾಸ್ ಸಾಗರ ಸ್ವಾಮೀಜಿ ಮತ್ತು ಸನಾಂದನ ಕಾರುಣ್ಯ ದಾಸ ಸ್ವಾಮೀಜಿಯವರು ಭಜನಾ ಸ್ಫರ್ಧೆಗೆ ಚಾಲನೆ ನೀಡಿದರು.
ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್ ಮುಖ್ಯ ಅತಿಥಿಯಾಗಿದ್ದರು. ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿರುವ ದಯಾನಂದ ಕತ್ತಲ್ ಸಾರ್ ಮಾತನಾಡಿ ಭಜನೆಗೆ ಸೂತಕದ ಅಡ್ಡಿ ಬಾರದು, ಹೆಣ್ಣಾಗಲಿ, ಗಂಡಾಗಲಿ ಯಾವಾಗ ಬೇಕಾದರೂ ಭಜಿಸುವ ಹಕ್ಕನ್ನು ಹೊಂದಿರುತ್ತಾರೆ. ಭಜನೆಯಿಂದ ಮಾನಸಿಕ, ನೆಮ್ಮದಿ ಸಿಗುವುದು ಎಂದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಪಿ.ಎಸ್ ಪ್ರಕಾಶ್ ಮಾತನಾಡಿ ದೇಶದ ಭವಿಷ್ಯವನ್ನು ಭಜನೆಯ ಮುಖಾಂತರ ನೋಡಬಹುದು. ಇಂತಹ ಕಾರ್ಯಕ್ರಮಗಳ ಆಯೋಜನೆ ನೋಡುವಾಗ ದೇಶಕ್ಕೆ ಸಾಂಸ್ಕೃತಿಕ ಭವಿಷ್ಯ ಇದೆ ಎಂಬುದು ಖಾತ್ರಿಯಾಗಿದೆ. ಯುವಕರು ಮನಸು ಮಾಡಿದ್ದಲ್ಲಿ ಊರಿಗೊಂದು ಮಂದಿರ ರಚಿಸಿ ಕಾರ್ಯಕ್ರಮಗಳನ್ನು ಆಯೋಜಿಸಬಹುದೆಂಬುದಕ್ಕೆ ಇದು ಸಾಕ್ಷಿ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಕಸ್ತೂರಿ ಪಂಜ, ಶಿಕ್ಷಣ ,ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಗೋಪಾಲ್ ಕುತ್ತಾರ್, ಉದ್ಯಮಿ ದೇವಿಪ್ರಸಾದ್ ಶೆಟ್ಟಿ, ಚೀರುಂಬಾ ಭಗವತಿ ಕ್ಷೇತ್ರದ ಅಧ್ಯಕ್ಷರಾದ ಚಂದ್ರಹಾಸ್ ಉಳ್ಳಾಲ್, ಉಪಾಧ್ಯಕ್ಷರಾದ ಸುರೇಶ್ ಭಟ್ನಗರ, ಹರೀಶ್ ನಿಸರ್ಗ, ಚಂದ್ರಹಾಸ್ ಅಡ್ಯಂತಾಯ, ಉದ್ಯಮಿ ಭಾಸ್ಕರ ದೇವಸ್ಯ, ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಉದ್ಯಮಿ ಶಾನು ಶೆಟ್ಟಿ ತಲಪಾಡಿ, ಲ| ಕೆ.ಸಿ ನಾರಾಯಣ್, ದೇವದಾಸ್ ಕೊಲ್ಯ, ಉಮೇಶ್ ಗಾಂಭೀರ್, ಹಿಂದು ಯುವಸೇನೆ ಕೇಂದ್ರೀಯ ಮಂಡಳಿ ಗೌರವಾಧ್ಯಕ್ಷರಾದ ಭಾಸ್ಕರಚಂದ್ರ ಶೆಟ್ಟಿ, ಅಧ್ಯಕ್ಷರಾದ ಯಶೋಧರ ಚೌಟ ಮೊದಲಾದವರು ಇದ್ದರು.
ಬಾಲಕೃಷ್ಣ ಮಂದಿರದ ಅಧ್ಯಕ್ಷರಾದ ಸತೀಶ್ ಕುಂಪಲ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಪ್ರವೀಣ್ ಎಸ್. ಕುಂಪಲ ಪ್ರಸ್ತಾಪಿಸಿದರು. ಅರುಣ್ ಉಳ್ಳಾಲ್ ನಿರೂಪಿಸಿದರು.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm