ಬ್ರೇಕಿಂಗ್ ನ್ಯೂಸ್
02-07-24 10:35 pm Mangalore Correspondent ಕರಾವಳಿ
ಮಂಗಳೂರು, ಜುಲೈ.2: ನೀಟ್ ಪರೀಕ್ಷೆ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಎನ್ಎಸ್ ಯುಐ ಮತ್ತು ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ಡೌನ್ ಡೌನ್ ಎಂದು ಘೋಷಣೆ ಕೂಗಿದ್ದಲ್ಲದೆ, ನೀಟ್ ಪರೀಕ್ಷೆಯಲ್ಲಿ ಹಗರಣ ಆಗಿದ್ದರೂ, ಮೌನ ವಹಿಸಿರುವ ಪ್ರಧಾನಿ ಮೋದಿಗೆ ಧಿಕ್ಕಾರ ಕೂಗಿದ್ದಾರೆ.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ರಾಜ್ಯ ಕಾಂಗ್ರೆಸ್ ವಕ್ತಾರ ಎಂಜಿ ಹೆಗ್ಡೆ, ನೀಟ್ ಹಗರಣ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಗುಜರಾತ್ ಮತ್ತು ಬಿಹಾರದಲ್ಲಿಯೇ ಹೆಚ್ಚಿನ ಕಡೆ ದಾಳಿ ನಡೆಸಿದ್ದಾರೆ. ಬಿಹಾರದಲ್ಲಿ ಕೋಚಿಂಗ್ ಸೆಂಟರ್ ಹೊಂದಿರುವ ವ್ಯಕ್ತಿಯೇ ಇದರ ಕಿಂಗ್ ಪಿನ್. ವಿಶೇಷ ಅಂದ್ರೆ, ಆತ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿ. ಆತನ ಕೋಚಿಂಗ್ ಸೆಂಟರಿನಿಂದ ಪರೀಕ್ಷೆ ಬರೆದವರೆಲ್ಲ ಪಾಸ್ ಆಗಿದ್ದಾರೆ. ಪರೀಕ್ಷೆಗೂ ಮೊದಲೇ ಪ್ರಶ್ನೆ ಪತ್ರಿಕೆ ಬಿಹಾರದಲ್ಲಿ ಹಂಚಿಕೆಯಾಗಿದೆ ಎನ್ನುವುದಕ್ಕಿದು ಸಾಕ್ಷಿ. ಬಿಹಾರದಲ್ಲಿ 20ಕ್ಕೂ ಹೆಚ್ಚು ಬಂಧನ ಆಗಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಬಾಯಿಬಿಟ್ಟಿದ್ದಾರೆ. ಹಾಗಿದ್ದರೂ, ಕೇಂದ್ರ ಸರಕಾರ ಈ ಬಗ್ಗೆ ಮೌನ ವಹಿಸಿದ್ದು ನೋಡಿದರೆ ಇವರು ಮಕ್ಕಳ ಪರೀಕ್ಷೆ ವಿಚಾರದಲ್ಲಿಯೂ ಕಾಸು ಮಾಡಿದ್ದಾರೆ ಎನ್ನುವುದು ತಿಳಿಯುತ್ತದೆ ಎಂದರು.










ನೀಟ್ ಲೀಕ್, ಎನ್ ಡಿಎ ಲೀಕ್ ಎನ್ನುವ ಭಿತ್ತಿಪತ್ರ ಹಿಡಿದು ಕಾರ್ಯಕರ್ತರು ಘೋಷಣೆ ಕೂಗಿದರು. ಮಾಜಿ ಸಚಿವ ರಮಾನಾಥ ರೈ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್, ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಮತ್ತಿತರರಿದ್ದರು. ಪ್ರತಿಭಟನೆಯ ಕೊನೆಯಲ್ಲಿ ಪೊಲೀಸರು ಹಾಕಿದ್ದ ಬ್ಯಾರಿಕೇಡನ್ನು ತಳ್ಳಿಕೊಂಡು ಕಾರ್ಯಕರ್ತರು ಹೊರಬಂದಿದ್ದು ಕೆಲಕಾಲ ಗೊಂದಲ ಮೂಡಿಸಿದ್ದಾರೆ.
The Dakshina Kannada National Students Union of India (NSUI) led by prominant Congress leaders of the district staged a protest at Clock Tower, Mangaluru, on Tuesday, July 2, criticising the Central BJP Government over the NEET question paper leak.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm