ಬ್ರೇಕಿಂಗ್ ನ್ಯೂಸ್
02-07-24 11:05 pm Mangalore Correspondent ಕರಾವಳಿ
ಮಂಗಳೂರು, ಜುಲೈ.2: ಮಂಗಳೂರು ನಗರವನ್ನು ಹಾದು ಹೋಗುವ ಹೆದ್ದಾರಿಯ ಅಲ್ಲಲ್ಲಿ ಮಳೆಯಿಂದಾಗಿ ಗುಂಡಿ ಬಿದ್ದಿದ್ದು, ವಾಹನ ಸವಾರರು ಸಂಚಾರಕ್ಕೆ ನರಕ ಯಾತನೆ ಅನುಭವಿಸುತ್ತಿದ್ದಾರೆ. ನಗರದ ಕೆಪಿಟಿ ವೃತ್ತದಲ್ಲಿ ಎರಡು ದಿನಗಳ ಹಿಂದೆ ಹೆದ್ದಾರಿ ಗುಂಡಿಗೆ ಬಿದ್ದು ದ್ವಿಚಕ್ರ ವಾಹನ ಸವಾರನೊಬ್ಬ ಗಾಯಗೊಂಡಿದ್ದ. ಇದನ್ನು ನೋಡಿ ಮನ ಕರಗಿದ ಟ್ರಾಫಿಕ್ ಪೊಲೀಸರು ಆ ಗುಂಡಿಗೆ ಸಿಮೆಂಟ್ ಹಾಕಿ ಮುಚ್ಚುವ ಕೆಲಸ ಮಾಡಿದ್ದಾರೆ.
ಕದ್ರಿ ಸಂಚಾರಿ ಠಾಣೆಯ ಇನ್ ಸ್ಪೆಕ್ಟರ್, ಮೈಸೂರು ಮೂಲದ ಈಶ್ವರ್ ಸ್ವಾಮಿ ಸ್ವತಃ ಹಾರೆ ಹಿಡಿದು ಗುಂಡಿಗೆ ಸಿಮೆಂಟ್ ತುಂಬಿಸುವ ಕೆಲಸ ಮಾಡಿದ್ದಾರೆ. ಟ್ರಾಫಿಕ್ ಪೊಲೀಸರ ಈ ಕೆಲಸ ಶ್ಲಾಘನೆಗೆ ಪಾತ್ರವಾಗಿದೆ. ಕೆಪಿಟಿ ವೃತ್ತದ ಬಳಿಯಲ್ಲೇ ಹೆದ್ದಾರಿಯಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರಿಗೆ ಸಂಕಷ್ಟ ತಂದಿತ್ತು. ಹಾಗಿದ್ದರೂ, ಅಲ್ಲಿ ನಿಂತಿದ್ದ ಟ್ರಾಫಿಕ್ ಪೊಲೀಸರು ವಾಹನ ಸವಾರರನ್ನು ನಿಲ್ಲಿಸಿ ಫೈನ್ ಹಾಕುತ್ತಿದ್ದರೇ ವಿನಾ ಗುಂಡಿ ಮುಚ್ಚುವುದಕ್ಕಾಗಲೀ, ಹೆದ್ದಾರಿ ಇಲಾಖೆಗೆ ಹೇಳಿ ಕೆಲಸ ಮಾಡಿಸುವುದಾಗಲೀ ಮಾಡಿರಲಿಲ್ಲ.






ಮೊನ್ನೆ ಸ್ಕೂಟರ್ ಸವಾರನೊಬ್ಬ ಅದೇ ಗುಂಡಿಗೆ ಬಿದ್ದು ಮೈಕೈಗೆ ಗಾಯ ಮಾಡಿಕೊಂಡಿದ್ದ. ಟ್ರಾಫಿಕ್ ಪೊಲೀಸರು ನಿಲ್ಲುವ ಜಾಗದಲ್ಲೇ ಈ ಘಟನೆ ನಡೆದಿತ್ತು. ಇದನ್ನು ನೋಡಿದ್ದ ಟ್ರಾಫಿಕ್ ಇನ್ಸ್ ಪೆಕ್ಟರ್ ಈಶ್ವರ್ ಸ್ವಾಮಿ ಮಂಗಳವಾರ ಎಲ್ಲಿಂದಲೋ ಸಿಮೆಂಟ್ ಮಿಕ್ಸರ್ ತಂದು ಸುರಿದಿದ್ದಾರೆ. ಅಷ್ಟಾದರೂ ಗುಂಡಿ ಮುಚ್ಚಲಿ ಎಂದು ಸಾರ್ವಜನಿಕರ ಸೇವೆ ಮಾಡಿದ್ದಾರೆ. ಪುಣ್ಯಕ್ಕೆ ಸಂಜೆಯ ವರೆಗೆ ಮಳೆ ಬಿಟ್ಟಿದ್ದರಿಂದ ಸಿಮೆಂಟ್ ಸ್ವಲ್ಪ ಗಟ್ಟಿ ಆಗುವಂತೆ ಉಳಿದುಬಿಟ್ಟಿದೆ. ಪಣಂಬೂರು, ಬೈಕಂಪಾಡಿ, ಕುಳೂರು ಹೆದ್ದಾರಿ ಉದ್ದಕ್ಕೂ ಗುಂಡಿ ಬಿದ್ದಿದ್ದು, ಹೆದ್ದಾರಿ ಅಧಿಕಾರಿಗಳು ಇದನ್ನು ಮುಚ್ಚುವ ಗೊಡವೆಗೆ ಮುಂದಾಗಿಲ್ಲ.
Mangalore kadri traffic police inspector eshwar Swami and policeman fix potholes at KPT as authorities neglect duty. Eshwar Swamy, who works at the east traffic police station, along with contributions from traffic staff and auto-rickshaw drivers, managed to fix the pothole.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm